Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಸರ್ಕಾರಿ ಆಸ್ಪತ್ರೆ, ಶಾಲೆ, ಸಕಾಲ ಸೇವೆಗಳನ್ನು ಜನರಿಗೆ ತಲುಪಿಸಿ- ಕಾರ್ಯಕರ್ತರಿಗೆ ಅಶ್ವಥ್ ನಾರಾಯಣ್ ಸಲಹೆ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರಿ ಆಸ್ಪತ್ರೆ, ಶಾಲೆ, ಸಕಾಲ ಸೇವೆಗಳನ್ನು ಜನರಿಗೆ ತಲುಪಿಸಿ- ಕಾರ್ಯಕರ್ತರಿಗೆ ಅಶ್ವಥ್ ನಾರಾಯಣ್ ಸಲಹೆ

Bengaluru City

ಸರ್ಕಾರಿ ಆಸ್ಪತ್ರೆ, ಶಾಲೆ, ಸಕಾಲ ಸೇವೆಗಳನ್ನು ಜನರಿಗೆ ತಲುಪಿಸಿ- ಕಾರ್ಯಕರ್ತರಿಗೆ ಅಶ್ವಥ್ ನಾರಾಯಣ್ ಸಲಹೆ

Public TV
Last updated: September 11, 2021 8:09 pm
Public TV
Share
3 Min Read
Ashwath Narayan 3
SHARE

– ಜನರಿಗೆ ಸಹಾಯ ಹಸ್ತ ಚಾಚುವ ಜೊತೆಗೆ ತಳಮಟ್ಟದಿಂದ ಅಭಿಪ್ರಾಯ ಸಂಗ್ರಹ ಅಗತ್ಯ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳು, ಶಾಲೆಗಳು ಹಾಗೂ ಸಕಾಲದಂತಹ ಸೇವೆಗಳನ್ನು ಜನರಿಗೆ ವೈಯಕ್ತಿಕ ಮಟ್ಟದಲ್ಲಿ ಸಿಗುವಂತೆ ಮಾಡಲು ಬಿಜೆಪಿ ಕಾರ್ಯಕರ್ತರು ಗಮನ ಕೊಡಬೇಕು ಎಂದು ಉನ್ನತ ಶಿಕ್ಷಣ ಹಾಗೂ ಐಟಿ, ಬಿಟಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಸಲಹೆ ನೀಡಿದರು.

ಬಿಜೆಪಿಯಿಂದ ಶನಿವಾರ ನಡೆದ ಬೆಂಗಳೂರು ಉತ್ತರ ಜಿಲ್ಲೆಯ ಸಂಘಟನಾತ್ಮಕ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಆಡಳಿತವನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಮೂಲಕ ಬೆಂಗಳೂರು ನಗರದ ಎಲ್ಲ 28 ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವಂತೆ ಮಾಡಬೇಕು. ಸರ್ಕಾರಿ ಆಸ್ಪತ್ರೆಗಳ ಮತ್ತು ಶಾಲೆಗಳ ಗುಣಮಟ್ಟವನ್ನು ಹೆಚ್ಚಿಸಲು ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಆದರೆ ಈ ಬಗ್ಗೆ ಜನರಿಗೆ ಇನ್ನೂ ಸರಿಯಾದ ಮಾಹಿತಿ ಇಲ್ಲವಾಗಿದೆ. ಈ ಕೊರತೆಯನ್ನು ಹೋಗಲಾಡಿಸುವುದು ಹಾಗೂ ಸೌಲಭ್ಯಗಳನ್ನು ಆದಷ್ಟು ಹೆಚ್ಚು ಜನರಿಗೆ ತಲುಪಿಸುವಲ್ಲಿ ಕಾರ್ಯಕರ್ತರು ತೊಡಗಿಸಿಕೊಳ್ಳಬೇಕು ಎಂದರು. ಇದನ್ನೂ ಓದಿ: ರಾಜ್ಯದಲ್ಲಿಂದು 801 ಹೊಸ ಕೊರೊನಾ ಕೇಸ್- 1,142 ಡಿಸ್ಚಾರ್ಜ್, 15 ಸಾವು

ಜನರಿಗೆ ಸೇವೆಗಳನ್ನು ಸುಲಭವಾಗಿ ತಲುಪಿಸಲು ಡಿ.ವಿ.ಸದಾನಂದಗೌಡರು ತಮ್ಮ ಆಡಳಿತಾವಧಿಯಲ್ಲಿ ಸಕಾಲ ಸೇವೆಯನ್ನು ಪರಿಚಯಿಸಿದರು. ಆದರೆ ಇದನ್ನು ಬಳಸಿಕೊಳ್ಳುತ್ತಿರುವವರ ಸಂಖ್ಯೆ ಕಡಿಮೆ ಇದೆ. ಇಂದು ತಂತ್ರಜ್ಞಾನದಿಂದಾಗಿ ಜನರ ಬೆರಳ ತುದಿಗೆ ಆಡಳಿತದ ಸೇವೆಗಳನ್ನು ತಲುಪಿಸಬಹುದಾಗಿದೆ. ಇದಕ್ಕೆ ಪೂರಕವಾಗಿ ಕಾರ್ಯಕರ್ತರು ಜನರೊಂದಿಗೆ ಸಂಪರ್ಕದಲ್ಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಗಳ ಪ್ರಯೋಜನ ಪಡೆಯುವಂತೆ ಮಾಡಬೇಕು ಎಂದು ತಿಳಿಸಿದರು.

ಜನರು ಖಾತೆ ಮಾಡಿಸುವುದು ಸೇರಿದಂತೆ ಇತರೆ ಸರ್ಕಾರಿ ಕೆಲಸಗಳಿಗೆ ಬ್ರೋಕರ್ ಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿ ಇಲ್ಲದಂತೆ ಮಾಡಬೇಕು. ಕಾರ್ಯಕರ್ತರು ನಾಯಕರ ಹಿಂದೆ ಓಡಾಡುವುದನ್ನು ಬಿಟ್ಟು ಜನರ ಮಧ್ಯೆ ಇದ್ದು ಕೆಲಸ ಮಾಡಬೇಕು. ಎಲ್ಲಿ ಅಗತ್ಯವೋ ಅಂತಹ ಕಡೆಗಳಲ್ಲಿ ಇದ್ದು ಕೆಲಸಗಳನ್ನು ಮಾಡಬೇಕು ಎಂದರು. ಇದನ್ನೂ ಓದಿ: ರೈತರು, ನೆರೆ ಸಂತ್ರಸ್ತರಿಗೆ ಪರಿಹಾರಕ್ಕೆ ಅಧಿವೇಶನದಲ್ಲಿ ಒತ್ತಾಯ: ಸತೀಶ್ ಜಾರಕಿಹೊಳಿ

ನಗರ ಪ್ರದೇಶಗಳಲ್ಲಿ ಹೆಚ್ಚಿನ ಜನ ಪಡಿತರ ಕಾರ್ಡ್ ನಿಂದ ವಂಚಿತರಾಗಿದ್ದು, ಕಾರ್ಯಕರ್ತರು ಅರ್ಹರಿಗೆ ಕಾರ್ಡ್ ಸಿಗುವಂತೆ ಮುತುವರ್ಜಿ ವಹಿಸಬೇಕು. ಅರ್ಹ ವಸತಿ ರಹಿತರು ಮುಖ್ಯಮಂತ್ರಿಗಳ ಗೃಹ ವಸತಿ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳನ್ನು ಹಾಕುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಕೊರೊನಾ ತಡೆಗಟ್ಟಲು ಸರ್ಕಾರ ಉಚಿತವಾಗಿ ನೀಡುತ್ತಿರುವ ಲಸಿಕೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಜನರಿಗೆ ತಲುಪಿಸುವುದರ ಬಗ್ಗೆಯೂ ಕಾರ್ಯಕರ್ತರು ಒತ್ತು ಕೊಡಬೇಕು. ಅಲ್ಲದೆ ಸರ್ಕಾರದ ಕಾರ್ಯನಿರ್ವಹಣೆ ಬಗ್ಗೆ ವ್ಯವಸ್ಥಿತ ರೀತಿಯಲ್ಲಿ ಅಭಿಪ್ರಾಯ ಸಂಗ್ರಹದ ಕೆಲಸ ಆಗಬೇಕು. ನಾಯಕರ ಕಿವಿಯಲ್ಲಿ ಏನೋ ಹೇಳಿಬಿಟ್ಟರೆ ಅದು ಅಭಿಪ್ರಾಯ ತಿಳಿಸಿದಂತೆ ಆಗುವುದಿಲ್ಲ. ಬೂತ್ ಮಟ್ಟದಿಂದ ಶುರುವಾಗುವ ಅಭಿಪ್ರಾಯ ಸಂಗ್ರಹವನ್ನು ಆಡಳಿತ ನಡೆಸುವವರಿಗೆ ತಲುಪಿಸಲು ಕ್ರಮಬದ್ಧ ವ್ಯವಸ್ಥೆಯನ್ನು ಅನುಸರಿಸಬೇಕು ಎಂದು ಅಶ್ವಥ್ ನಾರಾಯಣ ತಿಳಿಸಿದರು.

ಜನರ ನಂಬಿಕೆಯೇ ಪಕ್ಷದ ಜೀವಾಳ. ಹಣ ಬಲವೊಂದೇ ನಾಯಕತ್ವದ ಮಾನದಂಡ ಆಗಲಾರದು. ಹೊಟ್ಟೆಪಾಡಿಗಾಗಿ ರಾಜಕೀಯ ಮಾಡುವ ಪರಿಸ್ಥಿತಿ ಬರಬಾರದು. ಬದಲಿಗೆ ಉತ್ತಮ ನಾಯಕತ್ವ ಕೊಡುವುದಕ್ಕಾಗಿ ರಾಜಕೀಯ ಕ್ಷೇತ್ರವು ವೇದಿಕೆಯಾಗಬೇಕು. ಈ ಬಗ್ಗೆ ರಾಜಕೀಯ ಮುಖಂಡರಲ್ಲಿ ಮತ್ತು ಕಾರ್ಯಕರ್ತರಲ್ಲಿ ಸ್ಪಷ್ಟತೆ ಇರಬೇಕು ಎಂದರು.

ಬೆಂಗಳೂರು ಉತ್ತರ ಸಂಸದ ಡಿ.ವಿ.ಸದಾನಂದಗೌಡ, ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಅಬಕಾರಿ ಸಚಿವ ಗೋಪಾಲಯ್ಯ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಗೋಪಿನಾಥ್ ರೆಡ್ಡಿ, ರಾಜಣ್ಣ, ಮಹಿಳಾ ಮೋರ್ಚಾದ ಅಧ್ಯಕ್ಷೆ ಗೀತಾ ವಿವೇಕಾನಂದ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ವಿಧಾನ ಪರಿಷತ್ ಸದಸ್ಯ ನಾರಾಯಣ ಸ್ವಾಮಿ, ಮಾಜಿ ಶಾಸಕ ಮುನಿರಾಜು, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ನೆ.ಲ.ನರೇಂದ್ರ ಬಾಬು ಹಾಗೂ ಮತ್ತಿತರರು ಇದ್ದರು.

TAGGED:Ashwath NarayanbengalurubjpPublic TVworkersಅಶ್ವಥ್ ನಾರಾಯಣ್ಕಾರ್ಯಕರ್ತರುಪಬ್ಲಿಕ್ ಟಿವಿಬಿಜೆಪಿಬೆಂಗಳೂರು
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

IPL MI LSG
Cricket

ಲಕ್ನೋ ವಿರುದ್ಧ ಮುಂಬೈಗೆ 6 ವಿಕೆಟ್‌ಗಳ ಜಯ

Public TV
ByPublic TV
2 hours ago
Vijay 2
Latest

8 ಗ್ರಾಂ ಚಿನ್ನ, 6 ಸಿಲಿಂಡರ್‌ ಉಚಿತ, ಪದವೀಧರರಿಗೆ 4,000 ಭತ್ಯೆ – ʻವಿಜಯʼ ಭರವಸೆಯತ್ತ ಜನರ ಚಿತ್ತ!

Public TV
ByPublic TV
2 hours ago
Himanta Sarmas BJP To Win 70 80 Of Assams 126 Seats NDA Sweep Exit Poll
Latest

WE ARE BACK, back with a BANG! – ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಜಯ – 3ನೇ ಅವಧಿಗೂ ಶರ್ಮಾ ಸಿಎಂ ಆಗೋದು ಫಿಕ್ಸ್‌

Public TV
ByPublic TV
3 hours ago
SUVENDU ADHIKARI
Latest

ಬಂಗಾಳದಲ್ಲಿ ಬಿಜೆಪಿ ಗೆಲುವು, ಟಿಎಂಸಿ ಸೋಲಿಗೆ ಕಾರಣಗಳೇನು?

Public TV
ByPublic TV
3 hours ago
big bulletin 04 may 2026 part 1
Big Bulletin

ಬಿಗ್‌ ಬುಲೆಟಿನ್‌ 04 May 2026 ಭಾಗ-1

Public TV
ByPublic TV
3 hours ago
big bulletin 04 may 2026 part 2
Big Bulletin

ಬಿಗ್‌ ಬುಲೆಟಿನ್‌ 04 May 2026 ಭಾಗ-2

Public TV
ByPublic TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?