ಹುಬ್ಬಳ್ಳಿ: ಕುಟುಂಬ ಪಕ್ಷಗಳ ನಿಲುವಿನಿಂದ ಬೇಸತ್ತು ಕೆಲವರು ಬಿಜೆಪಿಗೆ ಬರುತ್ತಾರೆ ಕಾದು ನೋಡಿ, ಪರಿಸ್ಥಿತಿಗೆ ಅನುಗುಣವಾಗಿ ಯಾರ್ಯಾರು ಬರುತ್ತಾರೆ ಎನ್ನುವುದು ಗೊತ್ತಾಗುತ್ತದೆ ಎಂದು ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲದ ಸುಳಿವನ್ನು ಸಚಿವ ಅಶ್ವಥ್ ನಾರಾಯಣ್ ಬಿಟ್ಟುಕೊಟ್ಟಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ಬೇರೆ ಪಕ್ಷಗಳಿಗಿಂತ ಬಿಜೆಪಿಯಲ್ಲಿ ಉತ್ತಮ ಭವಿಷ್ಯವಿದೆ. ಅದೇ ರೀತಿ ಅವಕಾಶಗಳಿವೆ. ಹೀಗಾಗಿ ಇನ್ನೂ ಹಲವು ಜನ ಬಿಜೆಪಿಗೆ ಸೇರಲಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಎಸ್ಡಿಪಿಐ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ಪೊಲೀಸರು
ಇದೇ ವೇಳೆ ಉತ್ತರಪ್ರದೇಶದಲ್ಲಿನ ಹಿಂಸಾಚಾರ ಪ್ರತಿಭಟನೆ ಬಗ್ಗೆ ಮಾತನಾಡಿದ ಅವರು, ಒಂದು ಹೇಳಿಕೆಯನ್ನಿಟ್ಟುಕೊಂಡು ರಾಜಕಾರಣ ಮಾಡಲಾಗುತ್ತಿದೆ. ಇದು ಸರಿಯಲ್ಲ. ದೇಶದ ಐಕ್ಯತೆ ವಿಚಾರದಲ್ಲಿ ಹಿಂಸಾಚಾರ ನಡೆಸುವುದು ಸರಿಯಲ್ಲ ಎಂದರು. ರಾಜ್ಯಸಭೆ ಚುನಾವಣೆಯಲ್ಲಿ ಗೆಲುವಿನಲ್ಲಿ ಎ ಟೀಂ, ಬಿ ಟೀಂ ಎನ್ನುವ ಪ್ರಶ್ನೆಯೇ ಇಲ್ಲ. ನಮ್ಮ ಸಂಖ್ಯಾಬಲ ಜಾಸ್ತಿ ಇದೆ. ಹೀಗಾಗಿ ಸಹಜವಾಗಿ ಗೆಲುವು ಸಿಕ್ಕಿದೆ ಎಂದಿದ್ದಾರೆ. ಇದನ್ನೂ ಓದಿ: ಜಮ್ಮು- ಕಾಶ್ಮೀರದಲ್ಲಿ ಎನ್ಕೌಂಟರ್ – ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಓರ್ವ ಹತ್ಯೆ