Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ: ಅಶ್ವಥ್ ನಾರಾಯಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ: ಅಶ್ವಥ್ ನಾರಾಯಣ

Bengaluru City

ಸಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ: ಅಶ್ವಥ್ ನಾರಾಯಣ

Public TV
Last updated: August 27, 2021 11:52 pm
Public TV
Share
4 Min Read
ashwathnarayan 4
SHARE

ಬೆಂಗಳೂರು: ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಅಗಸ್ಟ್ 28, 29 ಮತ್ತು 30ರಂದು ರಾಜ್ಯದಲ್ಲೆಡೆ ನಡೆಯಲಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್‍ನಾರಾಯಣ್ ಶುಕ್ರವಾರ ಎಲ್ಲ ಸಿದ್ಧತೆಗಳನ್ನು ಖುದ್ದು ಪರಿಶೀಲಿಸಿದರು.

ಈ ಸಂಬಂಧ ನಗರದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಉನ್ನತ ಅಧಿಕಾರಿಗಳ ಸಭೆ ನಡೆಸಿದರು. ಬಳಿಕ ಮಲ್ಲೇಶ್ವರದ 18ನೇ ಕ್ರಾಸ್ ನಲ್ಲಿರುವ ಸರ್ಕಾರಿ ಪಿಯು ಕಾಲೇಜಿಗೆ ತೆರಳಿ ಪರೀಕ್ಷಾ ಸಿದ್ಧತೆಗಳನ್ನು ನೇರವಾಗಿ ವೀಕ್ಷಿಸಿದರು.

CET EXAM 5 medium

ಕಳೆದ ವರ್ಷದಂತೆ ಈ ವರ್ಷವೂ ಕೋವಿಡ್ ಸವಾಲಿನ ನಡುವೆಯೇ ಸಿಇಟಿ ನಡೆಯುತ್ತಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕೆಗಳನ್ನು ಸಚಿವರು ಪರಿಶೀಲನೆ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ನಡೆಯುತ್ತಿದ್ದು, ಕೋವಿಡ್ ಒತ್ತಡವನ್ನು ಮನಸ್ಸಿನಿಂದ ತೆಗೆದು ಹಾಕಿ ವಿದ್ಯಾರ್ಥಿಗಳು ಧೈರ್ಯ, ಸಂತೋಷದಿಂದ ಪರೀಕ್ಷೆ ಬರೆಯಬೇಕು. ಇದನ್ನು ಸಿಇಟಿ ಪರೀಕ್ಷೋತ್ಸವ ಎಂದು ಕರೆಯಲು ಬಯಸುತ್ತೇನೆ ಎಂದರು.  ಇದನ್ನೂ ಓದಿ: ಈ ಸರ್ಕಾರದಲ್ಲಿ ಹೆಣ್ಮಕ್ಕಳು ಮಾತ್ರವಲ್ಲ ಗಂಡು ಮಕ್ಕಳೂ ಸೇಫ್ ಅಲ್ಲ ಡಿಕೆಶಿ

ಮಹತ್ವದ ಅಂಶವೆಂದರೆ ಕೋವಿಡ್ ಕಾರಣದಿಂದ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿಯ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದ್ದು, ಸಿಇಟಿ ಅಂಕದ ಆಧಾರದ ಮೇಲೆಯೇ ರ್ಯಾಂಕ್ ನಿರ್ಧಾರ ಮಾಡಲಾಗುವುದು ಎಂದರು.

CET EXAM 1 medium

ರಾಜ್ಯದಲ್ಲಿ ಒಟ್ಟು 2,01,816 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ ಕೋವಿಡ್ ಪಾಸಿಟಿವ್ ಇರುವ 12 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. 12 ಸೋಂಕಿತ ವಿದ್ಯಾರ್ಥಿಗಳ ಪೈಕಿ 10 ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಹಾಗೂ ಕೋಲಾರ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ತಲಾ ಒಬ್ಬರು ಸಿಇಟಿ ಬರೆಲಿದ್ದಾರೆ. ಈ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಹೊರಗಡೆ ನಾಯಿಗಳಿದೆ ಎಂದು ಮಕ್ಕಳನ್ನು ಆಚೆ ಬಿಡದೇ ಇರಬೇಕೇ: ಎಚ್.ಕೆ.ಕುಮಾರಸ್ವಾಮಿ

ರಾಜ್ಯಾದ್ಯಂತ 530 ಪರೀಕ್ಷಾ ಕೇಂದ್ರಗಳ ಪೈಕಿ 86 ಕೇಂದ್ರಗಳು ಬೆಂಗಳೂರಿನಲ್ಲೇ ಇವೆ. ಉಳಿದ ಜಿಲ್ಲೆಗಳಲ್ಲಿ ಒಟ್ಟು 444 ಕೇಂದ್ರಗಳಿವೆ. ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಅಗಸ್ಟ್ 30ರಂದು ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಮಾತ್ರ ನಡೆಸಲಾಗುವುದು. ಈ ಕೇಂದ್ರಗಳಲ್ಲಿ 1,682 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಒಂದು ಕೊಠಡಿಯಲ್ಲಿ 24 ಅಭ್ಯರ್ಥಿಗಳು ಪರೀಕ್ಷೆ ಬರೆಯುವಂತೆ, ಪ್ರತಿ ಬೆಂಚಿನಲ್ಲಿ ಇಬ್ಬರು ಅಭ್ಯರ್ಥಿಗಳು ಕುಳಿತುಕೊಳ್ಳುವಂತೆ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಎರಡು ಬೆಂಚ್ ನಡುವೆ ಮೂರು ಅಡಿ ಅಂತರ ಕಾಪಾಡಿಕೊಳ್ಳಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕ್ರಮ ವಹಿಲಾಗಿದೆ.

ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಥರ್ಮಲ್ ಸ್ಕ್ಯಾನರ್, ಹ್ಯಾಂಡ್ ಸ್ಯಾನಿಟೈಸರ್ ಅಳವಡಿಸಲಾಗಿದೆ. ಬೆಂಗಳೂರಿನಲ್ಲಿರುವ ಸಿಇಟಿ ಪರೀಕ್ಷಾ ಕೇಂದ್ರಗಳಿಗೆ ಬಿಬಿಎಂಪಿ ವತಿಯಿಂದ ಸ್ಯಾನಿಟೈಸ್ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ 100 ಮಾಸ್ಕ್ ಗಳನ್ನು ಸ್ವಯಂ ಸೇವಾ ಸಂಸ್ಥೆಯಿಂದ ಎರಡು ದಿನ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.

ವಾರಾಂತ್ಯದ ಕರ್ಫ್ಯೂ ಇರುವ ಗಡಿ ಜಿಲ್ಲೆಗಳಲ್ಲಿ ಅಭ್ಯರ್ಥಿಗಳು ಮತ್ತು ಪೋಷಕರು ಸಿಇಟಿ ಪರೀಕ್ಷಾ ಕೇಂದ್ರಕ್ಕೆ ತಲುಪಲು ಅನುಕೂಲವಾಗಲು ಸಿಇಟಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪರಿಗಣಿಸಿ ಅವಕಾಶ ನೀಡಲು ಎಲ್ಲ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ. ಮುಖ್ಯವಾಗಿ ಕೇರಳ ಮತ್ತು ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ಬಹಳಷ್ಟು ಎಚ್ಚರಿಕೆ ವಹಿಸಲಾಗಿದೆ. ಇದನ್ನೂ ಓದಿ: ಮಾಜಿ ಗಂಡನ ಹೇಳಿಕೆಯಿಂದ ಚೀನಾದ ಖ್ಯಾತ ನಟಿಗೆ ಬಿತ್ತು 340 ಕೋಟಿ ರೂ. ದಂಡ

ಉಳಿದಂತೆ ಪರೀಕ್ಷೆಗೆ ಅಗತ್ಯವಾದ ಎಲ್ಲ ವ್ಯವಸ್ಥೆಗಳನ್ನೂ ಸಮರ್ಪಕವಾಗಿ ಮಾಡಲಾಗಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಗಳ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಮಾಡಿದೆ.

ಪರೀಕ್ಷೆ ವೇಳಾಪಟ್ಟಿ:
ಆಗಸ್ಟ್ 28ರಂದು ಶನಿವಾರ ಬೆಳಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ಗಣಿತ. ಆಗಸ್ಟ್ 29ರಂದು ಭಾನುವಾರ ಬೆಳಗ್ಗೆ 10.30ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. 30ರಂದು ಭಾನುವಾರ ಬೆಳಗ್ಗೆ 11.30ರಿಂದ 12.50 ರವರೆಗೆ ಹೊರನಾಡು, ಗಡಿನಾಡ ಕನ್ನಡಿಗ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಯುತ್ತದೆ.

ಅಭ್ಯರ್ಥಿಗಳು http://kea.kar.nic.in ನಲ್ಲಿ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಬೇಕು. ಅದರಲ್ಲಿ ಮುದ್ರಿತವಾಗಿರುವ ಸೂಚನೆಗಳನ್ನು ಪಾಲಿಸಿ, ಅದರಲ್ಲಿ ನಮೂದಿಸಲಾದ ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕು. ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆಗಳು, ಉತ್ತರಗಳು ಇಂಗ್ಲಿಷ್ ಮತ್ತು ಕನ್ನಡದಲ್ಲಿ ಮುದ್ರಿತವಾಗಿರುತ್ತವೆ. ವಿದ್ಯಾರ್ಥಿಗಳು ಸೂಕ್ಷ್ಮವಾಗಿ ಗಮನಿಸಬೇಕು.

ಸೋಂಕಿತರಿಗೆ ಪ್ರತ್ಯೇಕ ವ್ಯವಸ್ಥೆ
ಕಳೆದ ವರ್ಷದಂತೆ ಈ ವರ್ಷವೂ ಕೋವಿಡ್ ಸೋಂಕಿತ ವಿದ್ಯಾರ್ಥಿಗಳಿದ್ದರೆ, ಅಂಥವರಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಎಸ್‍ಒಪಿ ಪ್ರಕಾರ ಅವರಿಗೆ ಪ್ರತಿ ಜಿಲ್ಲೆಯಲ್ಲೂ ಪರೀಕ್ಷೆ ಬರೆಸಲಾಗುವುದು. ಯಾರೇ ವಿದ್ಯಾರ್ಥಿಗಳು ಸೋಂಕಿತರಿದ್ದರೆ ಧೈರ್ಯವಾಗಿ ಪರೀಕ್ಷೆ ಬರೆಯಲು ಅವಕಾಶ ಇದೆ. ಅಗತ್ಯವಾದ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿಯೂ ಅರೆವೈದ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಒಟ್ಟು 530 ವೀಕ್ಷಕರು, 1060 ವಿಶೇಷ ಜಾಗೃತ ದಳದ ಸದಸ್ಯರು, 530 ಪ್ರಶ್ನೆ ಪತ್ರಿಕೆ ಪಾಲಕರು, ಸುಮಾರು 8,409 ಕೊಠಡಿ ಮೇಲ್ವಿಚಾರಕರು ಹಾಗೂ ಒಟ್ಟು 20,415 ಅಧಿಕಾರಿಗಳು, ಸಿಬ್ಬಂದಿ ಪರೀಕ್ಷೆ ಕರ್ತವ್ಯ ನಿರ್ವಹಿಸಲಿದ್ದಾರೆ. ಪರೀಕ್ಷಾ ದಿನಗಳಂದು ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಿಗೆ, ಖಜಾನೆಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗಿದೆ.

ಆನ್ ಲೈನ್ ಮೂಲಕ ದಾಖಲೆಗಳ ಸಲ್ಲಿಕೆ
ಕಳೆದ ವರ್ಷದಂತೆ ಈ ವರ್ಷವೂ ಪರೀಕ್ಷೆ ಮುಗಿದ ನಂತರ ಅಭ್ಯರ್ಥಿಗಳು ಸಿಇಟಿ ಅರ್ಜಿಯಲ್ಲಿ ಕೋರಿರುವ ಮೀಸಲಾತಿಗೆ ಅಗತ್ಯ ದಾಖಲೆಗಳನ್ನು ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಸಚಿವ ಡಾ.ಅಶ್ವತ್ಥನಾರಾಯಣ ತಿಳಿಸಿದರು.

ಹೀಗೆ ಆನ್ ಲೈನ್ ಮೂಲಕ ಸಲ್ಲಿಸಿರುವ ದಾಖಲೆಗಳನ್ನು ಆನ್ ಲೈನ್ ಮೂಲಕವೇ ಪರಿಶೀಲನೆ ಮಾಡಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈ ಬಗ್ಗೆ ವಿವರವಾದ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್ ನಲ್ಲಿ ಪ್ರಕಟಿಸಲಾಗುವುದು. ಜೊತೆಗೆ ವಿಶೇಷ ವರ್ಗದ ಅಭ್ಯರ್ಥಿಗಳಿಗೆ ದಾಖಲಾತಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗುವುದು. ಎಲ್ಲ ಅಭ್ಯರ್ಥಿಗಳಿಗೆ ಅರ್ಜಿಯಲ್ಲಿರುವ ಮಾಹಿತಿಯನ್ನು ತಿದ್ದುಪಡಿ ಮಾಡಿಕೊಳ್ಳಲೂ ಅಂತಿಮ ಅವಕಾಶವನ್ನು ನೀಡಲಾಗುತ್ತಿದೆ. ಅದಕ್ಕಾಗಿ ಒಂದು ವಾರ ಕಾಲಾವಕಾಶ ನೀಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

TAGGED:Ashwath NarayanbengaluruCET Examexam centerPublic TVstudentsಅಶ್ವಥ್ ನಾರಾಯಣ್ಪಬ್ಲಿಕ್ ಟಿವಿಪರೀಕ್ಷೆ ಕೇಂದ್ರಬೆಂಗಳೂರುವಿದ್ಯಾರ್ಥಿಗಳುಸಿಇಟಿ ಪರೀಕ್ಷೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

Child Rights Protection Commission files complaint against Mallikarjuna Mutya for inappropriate behavior with minor girl
Bellary

ಬಾಲಕಿ ಜೊತೆ ಅನುಚಿತ ವರ್ತನೆ, ದೂರು ದಾಖಲು – ಮಲ್ಲಿಕಾರ್ಜುನ ಮುತ್ಯಾಗೆ ಸಂಕಷ್ಟ

Public TV
By Public TV
6 hours ago
Official India to host its first MotoGP race in 2023 at the Buddh International Circuit
Automobile

ಯುಪಿ ಸರ್ಕಾರದ ಜೊತೆ ಸಹಿ – 2027ಕ್ಕೆ ಭಾರತದಲ್ಲಿ MotoGP ರೇಸ್‌?

Public TV
By Public TV
7 hours ago
big bulletin 25 February 2026 part 1
Big Bulletin

ಬಿಗ್‌ ಬುಲೆಟಿನ್‌ 25 February 2026 ಭಾಗ-1

Public TV
By Public TV
7 hours ago
big bulletin 25 February 2026 part 2
Big Bulletin

ಬಿಗ್‌ ಬುಲೆಟಿನ್‌ 25 February 2026 ಭಾಗ-2

Public TV
By Public TV
7 hours ago
big bulletin 25 February 2026 part 3
Big Bulletin

ಬಿಗ್‌ ಬುಲೆಟಿನ್‌ 25 February 2026 ಭಾಗ-3

Public TV
By Public TV
7 hours ago
Mitchell Santner
Cricket

ವಿಶ್ವಕಪ್‌ನಿಂದ ಶ್ರೀಲಂಕಾ ಔಟ್‌ – ನ್ಯೂಜಿಲೆಂಡ್‌ ಸೆಮಿ ಆಸೆ ಜೀವಂತ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?