– ಸಚಿವ ಪುಟ್ಟರಂಗ ಶೆಟ್ಟಿ ನಡೆಗೆ ಗ್ರಾಮಸ್ಥರ ಆಕ್ರೋಶ
– ಮತಕ್ಕಾಗಿ ಮನೆಗೆ ಬರೋ ನೀವು ಈ ಸಮಯದಲ್ಲಿ ಯಾಕೆ ಬರಲ್ಲ?
ಚಾಮರಾಜನಗರ: ಮಾರಮ್ಮ ದೇವಸ್ಥಾನ ಪ್ರಸಾದ ಸೇವಿಸಿ ಮೃತಪಟ್ಟ ಸದಸ್ಯರ ಕುಟುಂಬಸ್ಥರನ್ನು ತನ್ನ ಬಳಿ ಕರೆಯಿಸಿ ಪರಿಹಾರ ಧನ ನೀಡಲು ನಿರ್ಧಾರ ಮಾಡಿದ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ. ಪುಟ್ಟರಂಗಶೆಟ್ಟಿ ನಡೆಗೆ ಆಕ್ರೋಶ ವ್ಯಕ್ತವಾಗಿದೆ.
ಹನೂರಿನ ಪ್ರವಾಸಿ ಮಂದಿರದಲ್ಲಿ ಪರಿಹಾರ ಧನ ನೀಡಲು ಮಂಗಳವಾರ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಮೃತರ ಕುಟುಂಬಸ್ಥರು ಪರಿಹಾರ ಹಣ ಪಡೆಯಲು 50 ಕಿಲೋಮೀಟರ್ ಪ್ರಯಾಣ ಮಾಡಿ ಪಡೆಯಬೇಕಾದ ಸ್ಥಿತಿಗೆ ಬಂದಿದ್ದಾರೆ.
ವಿಷ ಪ್ರಸಾದ ಸೇವಿಸಿ ಒಂದೇ ಗ್ರಾಮ ಬಿದರಹಳ್ಳಿಯಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. ಹೀಗಿರುವಾಗ ಗ್ರಾಮಕ್ಕೆ ಸಚಿವರು ಬರುವ ಬದಲು ಜನರನ್ನೇ ತಮ್ಮ ಬಳಿ ಕರೆಸಿಕೊಳ್ಳುತ್ತಿದ್ದಾರೆ. ಕುಟುಂಬದವರು ಮೊದಲೇ ಕುಟುಂಬ ಸದಸ್ಯರನ್ನು ಕಳೆದುಕೊಂಡು ದುಃಖಿತರಾಗಿದ್ದು, ಹಣ ಪಡೆಯಲು ಈಗ 50 ಕಿ.ಮೀ ಪ್ರಯಾಣಿಸಬೇಕಾಗಿದೆ.
ಸಚಿವ ಸಿ. ಪುಟ್ಟರಂಗಶೆಟ್ಟಿ ಇಂದು ಮಧ್ಯಾಹ್ನ 2.30ಕ್ಕೆ ಪರಿಹಾದ ಹಣ ಕೊಡಲಿದ್ದಾರೆ. ಸಚಿವರ ಈ ನಿರ್ಧಾರಕ್ಕೆ ಜನಗಳು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ಸತ್ತವರ ಮನೆಗೆ ಸಚಿರು ಹೋಗಬೇಕೋ? ಸತ್ತವರ ಮನೆಯವರು ಸಚಿವರ ಬಳಿ ಹೋಗಬೇಕೋ? ಮತ ಹಾಕಿಸಿಕೊಳ್ಳಲು ಮನೆ ಮುಂದೆ ಬರುತ್ತಾರೆ. ಈಗ ಜನರೇ ಅವರ ಬಳಿ ಹೋಗಬೇಕೇ? ಯಾವ ಸಮಯದಲ್ಲಿ ಯಾವ ರೀತಿ ವ್ಯವಹರಿಸಬೇಕು ಎನ್ನುವ ಕನಿಷ್ಟ ಜ್ಞಾನ ಸಚಿವರಿಗಿಲ್ಲವೇ ಎಂದು ಪ್ರಶ್ನಿಸಿ ಎಂದು ಸಚಿವರ ವಿರುದ್ಧ ಕಿಡಿಕಾರಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv