Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಠ್ಯ ಪುಸ್ತಕ ಪರಿಷ್ಕರಣೆಯ ಗೊಂದಲಗಳಿಗೆ ಸಚಿವ ಬಿ.ಸಿ.ನಾಗೇಶ್ ತೆರೆ – ಏನಿರುತ್ತೆ, ಏನಿರಲ್ಲ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಠ್ಯ ಪುಸ್ತಕ ಪರಿಷ್ಕರಣೆಯ ಗೊಂದಲಗಳಿಗೆ ಸಚಿವ ಬಿ.ಸಿ.ನಾಗೇಶ್ ತೆರೆ – ಏನಿರುತ್ತೆ, ಏನಿರಲ್ಲ?

Bengaluru City

ಪಠ್ಯ ಪುಸ್ತಕ ಪರಿಷ್ಕರಣೆಯ ಗೊಂದಲಗಳಿಗೆ ಸಚಿವ ಬಿ.ಸಿ.ನಾಗೇಶ್ ತೆರೆ – ಏನಿರುತ್ತೆ, ಏನಿರಲ್ಲ?

Public TV
Last updated: May 23, 2022 6:32 pm
Public TV
Share
3 Min Read
bc nagesh
SHARE

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆಯಿಂದ ಉಂಟಾಗಿದ್ದ ಗೊಂದಲಗಳು, ವಿವಾದಗಳಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತೆರೆ ಎಳೆದಿದ್ದಾರೆ.

ಒಂದು ಗಂಟೆಗೂ ಹೆಚ್ಚು ಸಮಯ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಉಂಟಾಗಿದ್ದ ಗೊಂದಲಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿದ್ದ ನಾರಾಯಣ ಗೌಡರಿಗೆ ಕೈ ಪಾಲಿಕೆ ಸದಸ್ಯರಿಂದ ಫುಲ್ ಕ್ಲಾಸ್

siddaramaiah bc nagesh

ಕಾಂಗ್ರೆಸ್ ಅವಧಿಯಲ್ಲಿ ಪರಿಷ್ಕರಣೆ ಸಮಿತಿ ಅಧ್ಯಕ್ಷರಾಗಿದ್ದ ಬರಗೂರು ರಾಮಚಂದ್ರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ, ಪಠ್ಯಕ್ಕೆ ವಿರೋಧ ಮಾಡಿದ್ದ ಸಾಹಿತಿಗಳು, ಕಾಂಗ್ರೆಸ್ ನಾಯಕರ ವಿರುದ್ಧ ದಾಖಲೆ ಸಮೇತ ಬಿಡುಗಡೆ ಮಾಡಿ ವಾಗ್ದಾಳಿ ನಡೆಸಿದ್ದಾರೆ. ನಾರಾಯಣ ಗುರು, ಭಗತ್ ಸಿಂಗ್ ಪಠ್ಯಗಳನ್ನು ಕೈ ಬಿಟ್ಟಿಲ್ಲ ಅಂತ ಸ್ಪಷ್ಟಪಡಿಸಿದ್ದಾರೆ.

ಹೆಡ್ಗೆವಾರ್ ಪಠ್ಯ ಸೇರ್ಪಡೆ, ಕೆಂಪೇಗೌಡರ ಜೀವನ ಚರಿತ್ರೆ, ಟಿಪ್ಪು ವೈಭವೀಕರಣದ ಬಗ್ಗೆ ದಾಖಲೆ ಸಮೇತ ಸ್ಪಷ್ಟೀಕರಣ ನೀಡಿದ್ದಾರೆ. ಇದನ್ನೂ ಓದಿ: ಪತ್ನಿಗೆ 90,000 ಮೌಲ್ಯದ ಉಡುಗೊರೆ ನೀಡಿದ ಭಿಕ್ಷುಕ

bc nagesh
ಸಾಂದರ್ಭಿಕ ಚಿತ್ರ

ಪಠ್ಯದಲ್ಲಿ ಏನಿದೆ, ಏನಿಲ್ಲ? – ಸಚಿವರು ಹೇಳಿದ್ದೇನು?

  • ನಾರಾಯಣಗುರು ಪಠ್ಯವನ್ನ 10ನೇ ತರಗತಿ ಇತಿಹಾಸ ಪುಸ್ತಕದಿಂದ ಕನ್ನಡ ಪುಸ್ತಕಕ್ಕೆ ಸೇರ್ಪಡೆ ಮಾಡಲಾಗಿದೆ. ಇತಿಹಾಸ ಪುಸ್ತಕದಲ್ಲಿ ಹೆಚ್ಚು ಪಠ್ಯ ಇತ್ತೆಂಬ ಕಾರಣಕ್ಕೆ ಕನ್ನಡಕ್ಕೆ ಸೇರ್ಪಡೆ ಮಾಡಲಾಗಿದೆ. 6ನೇ ತರಗತಿ ಪಠ್ಯದಲ್ಲಿರೋ ನಾರಾಯಣಗುರು ಪಠ್ಯವೂ ಹಾಗೇ ಉಳಿಸಿಕೊಳ್ಳಲಾಗಿದೆ.
  • ಭಗತ್ ಸಿಂಗ್ ಪಠ್ಯ ತೆಗೆದಿಲ್ಲ. ಭಗತ್ ಸಿಂಗ್ ಜೊತೆ ಕ್ರಾಂತಿಕಾರಿಗಳಾದ ರಾಜ್‌ಗುರು, ಸುಖ್‌ದೇವ್ ಪಠ್ಯವನ್ನು ಸೇರ್ಪಡೆ ಮಾಡಲಾಗಿದೆ. ಚಕ್ರವರ್ತಿ ಸೂಲಿಬೆಲಿ ಅವರು ಬರೆದಿರು `ತಾಯಿ ಭಾರತೀಯರ ಅಮರಪುತ್ರರು’ ಪಠ್ಯವನ್ನು ಸೇರ್ಪಡೆ ಮಾಡಲಾಗಿದೆ.
  • ಡಾ.ಜಿ.ರಾಮಕೃಷ್ಣರ ಭಗತ್ ಸಿಂಗ್ ಪಠ್ಯವೂ ಕೈ ಬಿಟ್ಟಿಲ್ಲ. ಮೈಸೂರು ಒಡೆಯರ್ ಪಠ್ಯವನ್ನ ಬರಗೂರು ರಾಮಚಂದ್ರಪ್ಪ ಸಮಿತಿ ಕೈ ಬಿಟ್ಟಿತ್ತು. 5 ಪುಟದ ಪಠ್ಯವನ್ನ 4 ಪುಟಕ್ಕೆ ಇಳಿಸಿತ್ತು. ಇದನ್ನ ಸರಿ ಮಾಡಿದ್ದೇವೆ.
  • ಬರಗೂರು ಸಮಿತಿ ಒಂದು ಪುಟ ಇದ್ದ ಟಿಪ್ಪು ಸುಲ್ತಾನ್ ಪಠ್ಯವನ್ನು 6 ಪುಟಕ್ಕೆ ಹೆಚ್ಚಿಸಿತ್ತು. ಓಟ್ ಬ್ಯಾಂಕ್‌ಗಾಗಿ ಒಡೆಯರ್ ಪಠ್ಯ ಕೈ ಬಿಟ್ಟು ಟಿಪ್ಪು ಸುಲ್ತಾನ್ ಪಠ್ಯ ಸೇರ್ಪಡೆ ಮಾಡಿತ್ತು. ಟಿಪ್ಪು ವೈಭವೀಕರಣವನ್ನು, ಅದರಲ್ಲಿದ್ದ ತಪ್ಪುಗಳನ್ನು ತಪ್ಪು ಸರಿ ಮಾಡಲಾಗಿದೆ. ಟಿಪ್ಪುವಿನ ನಿಜವಾದ ಮುಖವಾಡವನ್ನ ಪಠ್ಯದಲ್ಲಿ ಸೇರಿಸಿದ್ದೇವೆ.
  • ಪೆರಿಯಾರ್ ಪಠ್ಯ ಮುಂದುವರಿಸಲಾಗಿದೆ. ರಾಮನ ಬಗ್ಗೆ ಆಕ್ಷೇಪಾರ್ಹ ಮತ್ತು ರಾವಣನ ಪರ ಇದ್ದ ಸಾಲುಗಳನ್ನ ತೆಗೆಯಲಾಗಿದೆ. ಕುವೆಂಪು ಪಠ್ಯವನ್ನ ನಾವು ಬದಲಾವಣೆ ಮಾಡಿಯೇ ಇಲ್ಲ. ಬರಗೂರು ಸಮಿತಿ ಕುವೆಂಪು ಪಠ್ಯವನ್ನು ಕೈ ಬಿಟ್ಟಿತ್ತು. ನಾವು ಹೆಚ್ಚುವರಿಯಾಗಿ 2 ಪಠ್ಯ ಸೇರ್ಪಡೆ ಮಾಡಿದ್ದೇವೆ.
  • ಕುವೆಂಪು ಅವರ `ರಾಮಾಯಣ ದರ್ಶನಂ’ ಮಹಾಕಾವ್ಯವನ್ನು ಪಠ್ಯದಲ್ಲಿ ಸೇರಿಸಲಾಗಿದೆ. ಇತಿಹಾಸದ ಬಗ್ಗೆ ಬರಗೂರು ರಾಮಚಂದ್ರಪ್ಪ ತಪ್ಪು ಮಾಹಿತಿ ಕೊಟ್ಟಿದ್ದರು. ಅದನ್ನೂ ಸರಿ ಮಾಡಿದ್ದೇವೆ.
  • ಬ್ರಿಟಿಷರ ವಿರುದ್ದ ಹೋರಾಟ ಮಾಡಿದ್ದ, ಸಂಗೊಳ್ಳಿ ರಾಯಣ್ಣ, ಮದಕರಿ ನಾಯಕರು, ಕಿತ್ತೂರು ಚೆನ್ನಮ್ಮ, ರಾಣಿ ಅಬ್ಬಕ್ಕ ಅವರ ಪಠ್ಯ ಬರಗೂರು ಸಮಿತಿ ಕೈ ಬಿಟ್ಟಿತ್ತು. ಅವರ ಪಠ್ಯ ಸೇರ್ಪಡೆ ಮಾಡಿದ್ದೇವೆ.
  • ಹಿಂದೂ ಮಹಾ ಸಾಗರವನ್ನು ಇಂಡಿಯನ್ ಓಷನ್ ಅಂತ ಬದಲಾವಣೆ ಮಾಡಿದ್ರು. ಅದನ್ನು ಸರಿ ಮಾಡಿದ್ದೇವೆ. ಬರಗೂರು ರಾಮಚಂದ್ರಪ್ಪ ಸಮಿತಿ ಅಂಬೇಡ್ಕರ್, ಮಹಾತ್ಮ ಗಾಂಧೀಜಿಯವರ ಪಠ್ಯವನ್ನು ತೆಗೆದು ಹಾಕಿತ್ತು. ಅದನ್ನ ಸೇರಿಸಲಾಗಿದೆ. ಜೊತೆಗೆ ಬರಗೂರು ಸಮಿತಿ ವಿವೇಕಾನಂದರ ಬಗ್ಗೆಯಿದ್ದ ವಿಕೃತಿಯನ್ನು ಸರಿ ಮಾಡಿದ್ದೇವೆ.
  • `ಏರುತಿಹುದು, ಹಾರುತಿಹುದು ನಮ್ಮ ಬಾವುಟ’ ಹಾಗೂ ನಾಡಪ್ರಭು ಕೆಂಪೇಗೌಡರ ಪಠ್ಯವನ್ನು ಸೇರಿಸಿದ್ದೇವೆ. ಚರ್ಚ್‌ಗಳು, ದೇವಾಲಯಗಳ ಬಗ್ಗೆ ಪಠ್ಯ ಇತ್ತು. ಇದ್ರಲ್ಲಿ ದೇವಾಲಯ ಫೋಟೋವೇ ಇರಲಿಲ್ಲ. ಅದನ್ನ ಸರಿ ಮಾಡಿದ್ದೇವೆ. ಸಿಂಧೂ ನಾಗರಿಕತೆ ಪಠ್ಯ ಸೇರ್ಪಡೆ ಮಾಡಿದ್ದೇವೆ. ಮೊಘಲರು, ಬ್ರಿಟಿಷರ ವಿರುದ್ಧ ಹೋರಾಡಿದ ವೀರರ ಬಗ್ಗೆಯೂ ಪಠ್ಯ ಸೇರ್ಪಡೆ ಮಾಡಲಾಗಿದೆ.
  • ಹೆಡ್ಗೆವಾರ್ ಬಗ್ಗೆ ಈಗ ಮಾತಾಡೋರು ಯಾರು ಹುಟ್ಟಿರಲಿಲ್ಲ. ಅದಕ್ಕಾಗಿ ಅವರ ಪಠ್ಯ, ಒಂದು ಭಾಷಣ ಸೇರ್ಪಡೆ ಮಾಡಿದ್ದೇವೆ. ದೇಶ ಭಕ್ತಿ ಬಗ್ಗೆ, ದೇಶಕ್ಕೆ ಸಮರ್ಪಣೆ ಭಾವದ ಬಗ್ಗೆ ತಿಳಿಸಲು ಹೆಡ್ಗೆವಾರ್ ಬಗ್ಗೆ ಸೇರಿಸಲಾಗಿದೆ. ಆರ್‌ಎಸ್‌ಎಸ್ ಬಗ್ಗೆ ಸೇರಿಸಿಲ್ಲ.
  • ಪ್ರಸ್ತುತ ಸಾಹಿತಿಗಳಲ್ಲೂ ಜಾತಿ ಬಣ್ಣ ಹುಡುಕುವ ಕೆಲಸ ಮಾಡೋದು ಸರಿಯಲ್ಲ. ಬರಗೂರು ಸಮಿತಿ ಸಂದೇಶ ನಿಡಗುಂಡ, ಶಿವಯೋಗಿ, ಸಾ.ಶಿ.ಮರುಳಯ್ಯ, ಸಿದ್ದಯ್ಯ ಪುರಾಣಿಕರನ್ನ ಪಠ್ಯ ಕೈ ಬಿಟ್ಟಿದ್ದರು. ಅದನ್ನೂ ಈಗ ಸೇರಿಸಲಾಗಿದೆ.

TAGGED:Baraguru RamachandrappaBC Nageshbjpcongresseducation ministersiddaramaiahtippu sulthanಕಾಂಗ್ರೆಸ್ಟಿಪ್ಪು ಸುಲ್ತಾನ್ಪಠ್ಯಪುಸ್ತಕಬರಗೂರು ರಾಮಚಂದ್ರಪ್ಪಬಿ.ಸಿ.ನಾಗೇಶ್ಬಿಜೆಪಿಮೈಸೂರು ಒಡೆಯರ್‌ಶಿಕ್ಷಣ ಸಚಿವಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Malashri Shirdi Sai Baba
ಶಿರಡಿ ಸಾಯಿಬಾಬಾನಿಗೆ ಚಿನ್ನದ ಕಿರೀಟ ನೀಡಿದ ನಟಿ ಮಾಲಾಶ್ರೀ
Cinema Latest Sandalwood Top Stories
Rukmini Vasanth
ಹುಟ್ಟುಹಬ್ಬದ ಸಂಭ್ರಮದಲ್ಲಿ ಕಾಂತಾರದ ಕನಕಾವತಿ
Cinema Latest Sandalwood Top Stories
gilli kavya 1
ಕಣ್ಣೀರಿಟ್ಟ ‘ಕಾವು’ – ವಿಲನ್‌ ಕೊಟ್ಟ ಟಾಸ್ಕಲ್ಲಿ ಗೆದ್ರಾ ಗಿಲ್ಲಿ?
Cinema Latest Top Stories TV Shows
Yash Radhika
ನನ್ನೆಲ್ಲ ಪ್ರಶ್ನೆಗೂ ನೀನೇ ಉತ್ತರ – ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ರಾಕಿಂಗ್‌ ಜೋಡಿ
Cinema Latest Sandalwood Top Stories

You Might Also Like

BY Vijayendra
Belgaum

ಧರ್ಮಸ್ಥಳ ಷಡ್ಯಂತ್ರದ ಸೂತ್ರಧಾರಿಗಳು ಸಿಎಂ ಸುತ್ತನೇ ಇದ್ದಾರೆ: ವಿಜಯೇಂದ್ರ

Public TV
By Public TV
4 minutes ago
Rahul Gandhi
Latest

CIC ಆಯ್ಕೆ| ಮೋದಿ, ಶಾ ಜೊತೆ ಸಭೆ – ಸರ್ಕಾರ ಪ್ರಸ್ತಾಪಿಸಿದ ಹೆಸರುಗಳಿಗೆ ರಾಹುಲ್ ಆಕ್ಷೇಪ

Public TV
By Public TV
4 minutes ago
BASAVARAJ HORATTI
Belgaum

ಸಭಾಪತಿ ಹೊರಟ್ಟಿ ವಿರುದ್ಧ ಭ್ರಷ್ಟಾಚಾರ ಆರೋಪ; ವಿಧಾನ ಪರಿಷತ್ ಕಲಾಪದಲ್ಲಿ ಖಂಡನೆ

Public TV
By Public TV
27 minutes ago
Krishna Byre Gowda
Belgaum

ಭೂ ಪರಿವರ್ತನೆ ನಿಯಮಗಳ ಸರಳೀಕರಣಕ್ಕೆ ಕಾಯ್ದೆ ತಿದ್ದುಪಡಿ: ಕೃಷ್ಣ ಬೈರೇಗೌಡ

Public TV
By Public TV
32 minutes ago
r ashok
Bagalkot

ಉತ್ತರ ಕರ್ನಾಟಕದ ರೈತರಿಗೆ ಅನ್ಯಾಯ, ಬೆಳೆ ಹಾನಿ, ಮಳೆ ಹಾನಿ ಪರಿಹಾರ ಇಲ್ಲ, ಶ್ವೇತಪತ್ರ ಬಿಡುಗಡೆ ಮಾಡಲಿ: ಅಶೋಕ್‌ ಆಗ್ರಹ

Public TV
By Public TV
32 minutes ago
Ramalinga Reddy 1
Belgaum

RTO ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ತಡೆಗೆ ಕಠಿಣ ಕ್ರಮ- ರಾಮಲಿಂಗಾರೆಡ್ಡಿ

Public TV
By Public TV
38 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?