ಮಡಿಕೇರಿ: ಗ್ಯಾಸ್ ಸಿಲಿಂಡರ್ (Gas Cylinder) ಸ್ಫೋಟಗೊಂಡು ದಂಪತಿ ಮೃತಪಟ್ಟ ಹಿನ್ನೆಲೆಯಲ್ಲಿ ಇದೀಗ ಅವರು ನಡೆಸುತ್ತಿದ್ದ ವೃದ್ಧಾಶ್ರಮ ಅನಾಥವಾಗಿದೆ.
ಸದ್ಯ ಹಿರಿಜೀವಗಳ ಸಂಕಷ್ಟದ ಸ್ಥಿತಿಯನ್ನು ಕಂಡ ಪಬ್ಲಿಕ್ ಟಿವಿ, ತಕ್ಷಣವೇ ಕೊಡಗು ಉಸ್ತುವಾರಿ ಸಚಿವ ಹಾಗೂ ಸಣ್ಣ ನೀರಾವರಿ ಸಚಿವರಾಗಿರುವ ಬೋಸರಾಜ್ ಅವರಿಗೆ ಕರೆ ಮಾಡಿ ಆಶ್ರಮದ ಸ್ಥಿತಿ ಬಗ್ಗೆ ವಿವರಣೆ ನೀಡಿದೆ. ಈ ಬೆನ್ನಲ್ಲೇ ಉಸ್ತುವಾರಿ ಸಚಿವರು ಪಬ್ಲಿಕ್ ಟಿವಿ ಮನವಿಗೆ ಸ್ಪಂದಿಸಿ ಆಶ್ರಮಕ್ಕೆ ಯಾವುದೇ ನ್ಯೂನತೆಗಳು ಅಗದಂತೆ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ದಂಪತಿ ಸಾವು- ಅನಾಥವಾದ ವೃದ್ಧಾಶ್ರಮ
ಬೆಂಗಳೂರಿನ ವಿಕಾಸಸೌಧದಲ್ಲಿ ಮಾತಾನಾಡಿದ ಅವರು, ಅನಿಲ ಸೋರಿಕೆಯಿಂದ ಉಂಟಾದ ಬೆಂಕಿ ಅವಘಡದಲ್ಲಿ ಪತಿ-ಪತ್ನಿ ಇಬ್ಬರು ಮೃತಪಟ್ಟಿರುವುದು ವಿಷಾದನೀಯ. ಆದರೆ ಪಬ್ಲಿಕ್ ಟಿವಿ ಅವರು ತಕ್ಷಣವೇ ಆಶ್ರಮ ಬಗ್ಗೆ ಮಾಹಿತಿ ನೀಡಿದ್ದು, ಎಲ್ಲಾ ರೀತಿಯಲ್ಲಿ ಆಶ್ರಮಕ್ಕೆ ಸ್ಪಂದಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಹೀಗಾಗಿ ಎಲ್ಲಾ ಅಧಿಕಾರಿಗಳು ಭೇಟಿ ನೀಡಿ ತಕ್ಷಣವೇ ಸ್ಪಂದಿಸುತ್ತಾರೆ ಎಂದು ತಿಳಿಸಿದ್ದಾರೆ.
Web Stories