ಹುಬ್ಬಳ್ಳಿ: ಪೌರಾಡಳಿತ ಸಚಿವ ಸಿ.ಎಸ್ ಶಿವಳ್ಳಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ತಡರಾತ್ರಿ ಹುಬ್ಬಳ್ಳಿ ಕಿಮ್ಸ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಭಾನುವಾರ ಹುಬ್ಬಳ್ಳಿ ತಾಲೂಕಿನ ಕರಡಿಕೊಪ್ಪ ಗ್ರಾಮದ ಕಾಯಕ್ರಮ ಮುಗಿಸಿ ವಾಪಸ್ ಬರುವಾಗ ಸಚಿವರು ವಾಂತಿ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾರ್ಯಕ್ರಮದ ನಂತರ ಸಚಿವರು ಉಪ್ಪಿಟ್ಟು ಸೇವಿಸಿದ್ದರು. ಉಪ್ಪಿಟ್ಟು ಸೇವಿಸಿದ್ದರಿಂದಲೇ ವಾಂತಿ ಆರಂಭವಾಗಿದೆ ಎನ್ನಲಾಗಿದೆ. ಸಚಿವರ ಗನ್ ಮ್ಯಾನ್ ಹಾಗೂ ಆಪ್ತಕಾರ್ಯದರ್ಶಿ ಸೇರಿದಂತೆ ನಾಲ್ಕು ಜನರಿಗೆ ವಾಂತಿಯಾಗಿದೆ. ಆಸ್ಪತ್ರೆಯಲ್ಲಿ ವೈದ್ಯರು ಹೊಟ್ಟೆ ಕ್ಲೀನ್ ಮಾಡಿ ಚಿಕಿತ್ಸೆ ನೀಡುತ್ತಿದ್ದಾರೆ. ಆದ್ರೆ ವೈದ್ಯರು ಯಾವುದೇ ವಿಚಾರವನ್ನು ಇದೂವರೆಗೂ ಸ್ಪಷ್ಟಪಡಿಸಿಲ್ಲ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv