ಹೊಟ್ಟೆಗೆ ಏನು ತಿಂತೀರಿ, ಹಣ ಎಲ್ಲಿ ಹೋಯ್ತು – ಅಧಿಕಾರಿಗೆ ಸಚಿವ ಸಿ.ಟಿ.ರವಿ ಕ್ಲಾಸ್

Public TV
1 Min Read
bdr ct ravi

ಬೀದರ್: ಹೊಟ್ಟೆಗೆ ಏನು ತಿಂತೀರಿ ಎಂದು ಅಧಿಕಾರಿಯೊಬ್ಬರಿಗೆ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ಬೀದರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಪ್ರಸಂಗ ನಡೆದಿದ್ದು, ಸಿ.ಟಿ.ರವಿ ಅಧಿಕಾರಿಗೆ ಫುಲ್ ತರಾಟೆ ತಗೆದುಕೊಂಡಿದ್ದಾರೆ. ನಿರ್ಮಿತಿ ಕೇಂದ್ರದ ಕಾಮಗಾರಿ ಸ್ಥಗಿತವಾಗಿರುವುದು ನಿನಗೆ ಗೋತ್ತಿದೆಯೋ ಇಲ್ವಾ? ನೀವು ಹಾಗೂ ನಿರ್ಮಿತಿ ಕೇಂದ್ರದವರು ಸೇರಿ ಇಲಾಖೆ ಮುಳುಗಿಸಬೇಕು ಎಂದು ಮಾಡಿದ್ದೀರಾ ಎಂದು ಪ್ರಶ್ನಿಸಿ ಬೆವರಿಳಿಸಿದ್ದಾರೆ.

ಹಣ ವಾಪಸ್ ತರಸಿ ಹಾಗೂ ಅಧಿಕಾರಿ ಮೇಲೆ ಕ್ರಮ ತೆಗೆದುಕೊಳ್ಳಿ ಎಂದು ಮೇಲಧಿಕಾರಿಗೆ ಸಚಿವರು ಸೂಚನೆ ನೀಡಿದರು. ನಿರ್ಮಿತಿ ಕೇಂದ್ರದ ಕಾಮಗಾರಿ ಸ್ಥಗಿತವಾಗಿದ್ದರೂ ಒಂದು ಕೋಟಿ ರೂ. ಬಿಡುಗಡೆ ಮಾಡುವಂತೆ ನಿರ್ಮಿತಿ ಕೇಂದ್ರ ಅಧಿಕಾರಿಗಳಿಗೆ ಪತ್ರ ಬರೆಯುತ್ತೀರಿ. ದುಡ್ಡು ತೆಗೆದುಕೊಂಡು ಏನು ಮಾಡುತ್ತೀರಿ? ನಿಮಗೇನು ತಿಳಿಯುವುದಿಲ್ಲವೇ? ಹಿಂದೆ ಬಿಡುಗಡೆ ಮಾಡಿದ ಆ ಒಂದು ಕೋಟಿ ರೂ. ಎಲ್ಲಿ ಹೋಯಿತು ಎಂದು ಪ್ರಶ್ನಿಸಿದ್ದಾರೆ.

bdr ct ravi 2 6

ಪತ್ರ ಬರೆದಿದ್ದರಿಂದ ಕೆಂಡಾಮಂಡಲರಾದ ಸಚಿವರು ಅಧಿಕಾರಿಗೆ ಫುಲ್ ತರಾಟೆ ತೆಗೆದುಕೊಂಡು ಒಂದು ಕೋಟಿ ಹಣ ಎಲ್ಲಿ ಹೋಗಿದೆ ಎಂದು ಪ್ರಶ್ನಿಸಿದರು. ಈ ಹಣ ನಿನ್ನ ಸಂಬಳದಲ್ಲಿ ಕಡತಗೊಳಿಸಬೇಕೇ ಎಂದು ಅಧಿಕಾರಿ ವಿರುದ್ಧ ಗರಂ ಆದರು. ಒಂದು ಕೋಟಿ ರೂ. ಹಣ ಎಲ್ಲಿ ಹೋಗಿದೆ? ಪರಿಶೀಲನೆ ನಡೆಸಿ ಈ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಸಚಿವರು ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳುತ್ತಿದ್ದರೂ ಅಧಿಕಾರಿಗಳು ಮಾತ್ರ ತುಟಿ ಪಿಟಿಕ್ ಎನ್ನದೆ ಮೌನಕ್ಕೆ ಶರಣಾಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *