Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಕಲಿ ವೈದ್ಯರನ್ನ ದೂರವಿಟ್ಟಾಗ ಮಾತ್ರ ನಾಟಿ ವೈದ್ಯ ಪದ್ಧತಿ ಮುಖ್ಯವಾಹಿನಿಗೆ ಬರಲು ಸಾಧ್ಯ: ದಿನೇಶ್ ಗುಂಡೂರಾವ್

Public TV
Last updated: October 26, 2023 7:42 pm
Public TV
Share
3 Min Read
dinesh gundu rao programe
SHARE

ಬೆಂಗಳೂರು: ಆಧುನಿಕ ವೈದ್ಯಕೀಯದ ಜೊತೆಗೆ ಪಾರಂಪರಿಕ ವೈದ್ಯ ಪದ್ದತಿಯನ್ನ ನಾವು ಮುಖ್ಯವಾಹಿನಿಗೆ ತರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದರು.

ನಾಗಮಂಗಲ ಆದಿಚುಂಚನಗಿರಿ ಸಂಸ್ಥಾನದಲ್ಲಿ ಇಂದು (ಗುರುವಾರ) ರಾಷ್ಟ್ರೀಯ ಪಾರಂಪರಿಕ ವೈದ್ಯರ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,‌ ಬೆಳೆಯುತ್ತಿರುವ ವಿಜ್ಞಾನ-ತಂತ್ರಜ್ಞಾನದ ಯುಗದಲ್ಲಿ ಬಹುತೇಕರು ನಾಟಿ ವೈದ್ಯ ಪದ್ದತಿಯನ್ನ ನಂಬಲ್ಲ. ಆದರೆ ಅಲೋಪತಿ ಬರುವ ಮುನ್ನ ನಮ್ಮ ರಾಜ ಮಹಾರಾಜರಿಗೆ ಚಿಕಿತ್ಸೆ ನೀಡಿ, ಕಾಯಿಲೆಗಳನ್ನ ವಾಸಿಮಾಡುತ್ತಿದ್ದುದು ನಮ್ಮ ಗಿಡಮೂಲಿಕೆಗಳ ಔಷಧಿಯ ನಾಟಿ ಪದ್ದತಿ ಎಂಬುದನ್ನ ಮರೆಯಬಾರದು ಎಂದರು.‌ ಇದನ್ನೂ ಓದಿ: ಕಬ್ಬು ಬೆಳೆಯುವ ಉತ್ಸಾಹ – 20 ವರ್ಷಗಳಿಂದ ಮುಚ್ಚಿದ ಸಕ್ಕರೆ ಫ್ಯಾಕ್ಟರಿಯನ್ನು ತೆರೆಯಲು ಸರ್ಕಾರದ ಬೆನ್ನತ್ತಿದ ರೈತರು

dinesh gundu rao hospital

ಗಿಡಮೂಲಿಕೆಗಳ ಚಿಕಿತ್ಸೆ, ಪಾರಂಪರಿಕ ವೈದ್ಯ ಪದ್ದತಿ ಮುಖ್ಯವಾಹಿನಿಗೆ ತರಬೇಕು. ಆದರೆ ತರಲಾಗುತ್ತಿಲ್ಲ.‌ ಅದಕ್ಕೆ ಮುಖ್ಯ ಕಾರಣ ನಕಲಿ ವೈದ್ಯರ ಹಾವಳಿ. ನಕಲಿ ವೈದ್ಯರ ಹಾವಳಿಯಿಂದಾಗಿಯೇ ನಾಟಿ ವೈದ್ಯ ಪದ್ದತಿ ಮುಖ್ಯವಾಹಿನಿಗೆ ಬರದೇ ಮರೆಮಾಚಿ ಹೋಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಬಡಜನರಿಗೆ ಕಡಿಮೆ ಖರ್ಚಿನಲ್ಲಿ ಆರೋಗ್ಯ ಒದಗಿಸುವಲ್ಲಿ ಪಾರಂಪರಿಕ ವೈದ್ಯರ ಕೊಡುಗೆ ಖಂಡಿತವಾಗಿಯೂ ಇದೆ. ಇವತ್ತಿಗೂ ಅನೇಕರು ಆಸ್ಪತ್ರೆಗಳಲ್ಲಿ ದುಬಾರಿ ವೆಚ್ಚದ ಚಿಕಿತ್ಸೆ ಹೇಳಿದಾಗ, ನಾಟಿ ಔಷಧಿಯ ಮೇಲೆ ನಂಬಿಕೆಯಿಟ್ಟು ಚಿಕಿತ್ಸೆ ಪಡೆಯುತ್ತಾರೆ.‌ ಗಿಡಮೂಲಿಕೆ ಔಷಧಿ ಉಪಚಾರಗಳಿಂದ ಅತಿ ಕಡಿಮೆ ಖರ್ಚಿನಲ್ಲಿ ಬಡವರಿಗೆ ಆರೋಗ್ಯ ಸೇವೆ ಒದಗಿಸಬಹುದು. ಈ ನಿಟ್ಟಿನಲ್ಲಿ ನಮ್ಮ ಪಾರಂಪರಿಕ ವೈದ್ಯ ಪದ್ದತಿ ಮುಖ್ಯವಾಹಿನಿಗೆ ಬರಬೇಕು ಎಂದು ಹೇಳಿದರು. ಇದನ್ನೂ ಓದಿ: ಮೊದ್ಲು ಕುಮಾರಸ್ವಾಮಿ ಪ್ರಮಾಣ ಮಾಡ್ಲಿ, ಆಮೇಲೆ ಮಾತಾಡ್ತೀನಿ: ದರ್ಶನಾಪುರ

dinesh gundu rao programme

ಸರ್ಕಾರಕ್ಕೆ ನಿಜವಾದ ನಾಟಿ ವೈದ್ಯರ ಮೇಲೆ ನಂಬಿಕೆಯಿದ್ದರೂ, ನಕಲಿ ವೈದ್ಯರಿಂದಾಗಿ ಈ ಪದ್ದತಿಯನ್ನ ಪ್ರೋತ್ಸಾಹಿಸಲು ಸಾಧ್ಯವಾಗುತ್ತಿಲ್ಲ. ನೈಜ ನಾಟಿ ವೈದ್ಯರನ್ನ ಗುರುತಿಸುವುದು ಒಂದು ಸವಾಲು. ಹೀಗಾಗಿ ಒಂದು ಫ್ರೆಮ್‌ವರ್ಕ್ ಮುಖ್ಯ. ನಿಯಮಾವಳಿಗಳೊಂದಿಗೆ ನಾಟಿ ವೈದ್ಯರನ್ನ ಗುರುತಿಸುವ ವ್ಯವಸ್ಥೆ ಜಾರಿಗೆ ಬರಬೇಕು. ಈ ನಿಟ್ಟಿನಲ್ಲಿ ಸರ್ಕಾರ ಚರ್ಚಿಸಿ ತೀರ್ಮಾನಗಳನ್ನ ತೆಗೆದುಕೊಳ್ಳಲು ಮುಕ್ತ ಮನಸ್ಸು ಹೊಂದಿದೆ. ಈ ನಿಟ್ಟಿನಲ್ಲಿ ನಾಟಿ ವೈದ್ಯರ ಔಷಧಿ ವಿಧಾನಗಳು, ಗಿಡಮೂಲಿಕೆಗಳ ಬಗ್ಗೆ ವಿಸ್ತ್ರತವಾಗಿ ವರದಿಯೊಂದಿಗೆ ಮನವಿ ಸಲ್ಲಿಸುವಂತೆ ಪಾರಂಪರಿಕ ವೈದ್ಯರ ಪರಿಷತ್‌ಗೆ ಸಚಿವರು ಸೂಚನೆ ನೀಡಿದರು.

ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಆರೋಗ್ಯ ಕ್ಷೇತ್ರದಲ್ಲಿ ಹಳೇ ಬೇರು ಹೊಸ ಚಿಗುರು ಎರಡು ಮುಖ್ಯ. ನಾಟಿ ವೈದ್ಯ ಪದ್ದತಿಯನ್ನ ನಿರ್ಲಕ್ಷಿಸಲು ಸಾಧ್ಯವಿಲ್ಲ. ಋಷಿಮುನಿಗಳಿಂದ ಪರಂಪರಾಗತವಾಗಿ ಬಂದಿರುವ ಭಾರತೀಯ ವೈದ್ಯ ಪದ್ದತಿಯನ್ನ ನಾವು ಉಳಿಸಿಕೊಂಡು ಹೋಗಬೇಕು. ಹಲವು ಗಿಡಮೂಲಿಕೆಗಳು ಅವಸಾನದ ಅಂಚಿನಲ್ಲಿವೆ. ಗಿಡಮೂಲಿಕೆ ರಕ್ಷಣೆಗೆ ಸರ್ಕಾರ ಮುಂದಾಗಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನಿಜಕ್ಕೂ ಆಸಕ್ತಿ ತೋರಿಸಿ ಸಮ್ಮೇಳನಕ್ಕೆ ಬಂದಿದ್ದಾರೆ ಎಂದು ಶ್ರೀಗಳು ಶ್ಲಾಘನೆ ವ್ಯಕ್ತಪಡಿಸಿದರು. ಇದನ್ನೂ ಓದಿ: ನಕಲಿ ಹುಲಿ ಉಗುರು ಧರಿಸದಂತೆ ಈಶ್ವರ್ ಖಂಡ್ರೆ ಮನವಿ – ಸರ್ಕಾರಕ್ಕೆ ಮರಳಿಸಲು ಅವಕಾಶಕ್ಕೆ ಚಿಂತನೆ

ನಾಟಿ ವೈದ್ಯರ ಸಮ್ಮೇಳನದಲ್ಲಿ‌ ಮೊದಲ ಬಾರಿಗೆ ಸರ್ಕಾರದ ಆರೋಗ್ಯ ಸಚಿವರು ಪಾಲ್ಗೊಂಡಿರುವುದು ನಿಜಕ್ಕೂ ಸಂತಸದ ಸಂಗತಿ.‌ ಏನಾದರೂ ಒಂದು ಪರಿಹಾರ ಕಂಡುಕೊಳ್ಳಬೇಕು ಎಂಬ ದೃಷ್ಟಿಕೋನವನ್ನ ದಿನೇಶ್ ಗುಂಡೂರಾವ್ ಹೊಂದಿದ್ದಾರೆ. ಈ ಹಿಂದೆ ಆಯುಷ್ ಕಾಲೇಜುಗಳಲ್ಲಿ ಪ್ರವೇಶಾತಿ ವ್ಯವಸ್ಥೆಯಲ್ಲಿ ಸಾಕಷ್ಟು ಸಮಸ್ಯೆಯಿತ್ತು. ಸಮಸ್ಯೆಯನ್ನ ಸಚಿವರ ಗಮನಕ್ಕೆ ತಂದ 10 ದಿನಗಳಲ್ಲಿ ಪರಿಹಾರವನ್ನ ಸಚಿವ ದಿನೇಶ್ ಗುಂಡೂರಾವ್ ನೀಡಿದರು. ಸಮಾಜಕ್ಕೆ ಒಳ್ಳೆಯದನ್ನ ಮಾಡಬೇಕು ಎಂಬುದನ್ನ ನಿಶ್ಚಯಿಸಿಕೊಂಡು ಗುಂಡೂರಾವ್ ಮುಂದೆ ಸಾಗುತ್ತಿದ್ದಾರೆ ಎಂದು ನಿರ್ಮಲಾನಂದನಾಥ ಶ್ರೀಗಳು ಆರೋಗ್ಯ ಸಚಿವರನ್ನು ಶ್ಲಾಘಿಸಿದರು.‌

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್

TAGGED:bengalurudinesh gundu raoFake Doctorsದಿನೇಶ್ ಗುಂಡೂರಾವ್ನಕಲಿ ವೈದ್ಯರುಬೆಂಗಳೂರು
Share This Article
Facebook Whatsapp Whatsapp Telegram

Cinema Updates

Akshay Kumar
ರಿಯಲ್ ಹೀರೋ ಅಕ್ಷಯ್‌ಕುಮಾರ್ ಮಾಡಿದ ಕಾರ್ಯ ಎಲ್ಲರಿಗೂ ಮಾದರಿ
Bollywood Cinema Latest Top Stories
jayam ravi
ಸಿಡಿದೆದ್ದ ಜಯಂ ರವಿ: ಪರಿಹಾರಕ್ಕಾಗಿ 9 ಕೋಟಿ ಬೇಡಿಕೆ
Cinema Latest South cinema Top Stories
Darshan 3
ಸುಪ್ರೀಂ ಟೆನ್ಶನ್‌ ನಡ್ವೆಯೂ ʻಡೆವಿಲ್ʼ ಸಂಭ್ರಮಕ್ಕೆ ಸಜ್ಜಾದ ಡಿಬಾಸ್‌ ಫ್ಯಾನ್ಸ್
Cinema Latest Sandalwood Top Stories
Pavithra Gowda
ಫೋಟೋಶೂಟ್ ಮೂಡ್‌ನಲ್ಲಿ ಪವಿತ್ರಾ ಗೌಡ
Cinema Latest Top Stories
Ravi Dubey
ರಾಮ-ಲಕ್ಷ್ಮಣರ ಜೊತೆ `ರಾಮಾಯಣ’ ಸೃಷ್ಟಿಕರ್ತ!
Bollywood Cinema Latest

You Might Also Like

Belagavi DC
Belgaum

ಬೆಳಗಾವಿ | 30 ವರ್ಷದ ಹಿಂದೆ ಗುತ್ತಿಗೆದಾರನಿಗೆ ಸಿಗಬೇಕಿದ್ದ ಬಿಲ್ ಬಾಕಿ ಉಳಿಸಿಕೊಂಡಿದ್ದಕ್ಕೆ ಡಿಸಿ ಕಾರು ಜಪ್ತಿ

Public TV
By Public TV
1 hour ago
Jairam Ramesh
Latest

ಪಹಲ್ಗಾಮ್‌ ದಾಳಿ, ಆಪರೇಷನ್‌ ಸಿಂಧೂರದ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾಗಲಿ: ಜೈರಾಮ್‌ ರಮೇಶ್‌ ಆಗ್ರಹ

Public TV
By Public TV
1 hour ago
Rummycircle
Districts

ಕೆಡಿಪಿ ಮೀಟಿಂಗ್‌ನಲ್ಲಿ ರಮ್ಮಿ ಆಡ್ತಿದ್ದ ಅರಣ್ಯಾಧಿಕಾರಿ – ಸಭೆಯಲ್ಲೇ ಗುಮ್ಮಿದ ಸಚಿವರು

Public TV
By Public TV
1 hour ago
GST 1
Bengaluru City

ಡಿಜಿಟಲ್ ಪೇಮೆಂಟ್ ಕೋಲಾಹಲ – ಲಕ್ಷ, ಲಕ್ಷ ಟ್ಯಾಕ್ಸ್ ನೋಟಿಸ್‌ ಕಂಡು ಹೌಹಾರಿದ ಜನ; ಕ್ಯಾಶ್‌ ವಹಿವಾಟಿಗೆ ದುಂಬಾಲು

Public TV
By Public TV
2 hours ago
BYRATHI BASAVARAJU
Bengaluru City

ಹೈಕೋರ್ಟ್ ಆದೇಶದಿಂದ ಅಡಕತ್ತರಿಯಲ್ಲಿ ಸಿಲುಕಿದ ಶಾಸಕ ಬೈರತಿ ಬಸವರಾಜ್

Public TV
By Public TV
2 hours ago
Santosh Lad
Districts

ಕೇಂದ್ರ ಬಿಜೆಪಿ ಐಸಿಯುನಲ್ಲಿದೆ, ಮೋದಿ ಏಕೆ ಬದಲಾವಣೆ ಆಗಬಾರದು – ಸಂತೋಷ್‌ ಲಾಡ್‌ ಪ್ರಶ್ನೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?