ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ವಿಷಯಗಳಿಗೆ ಪ್ರಭಾವ ಬೀರುವ ಸಾಮರ್ಥ್ಯವನ್ನು ಅನಂತಕುಮಾರ್ ಅವರು ಮಾತ್ರ ಹೊಂದಿದ್ದು, ಇಂದು ನಗರದಲ್ಲಿ ಮೆಟ್ರೋ ಓಡಾಡುತ್ತಿದ್ದರೆ ಅದಕ್ಕೆ ಅವರೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಅನಂತ್ ಕುಮಾರ್ ಅವರ ಅಂತಿಮ ದರ್ಶನ ಪಡೆದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಿಕ್ಕ ವಯಸ್ಸಿನಲ್ಲೇ ಅನಂತ್ ಕುಮಾರ್ ಅವರು ನಿಧನರಾಗಿದ್ದು ಅತ್ಯಂತ ನೋವು ತಂದಿದೆ. ರಾಜಕಾರಣದಲ್ಲಿ ತಮ್ಮದೇ ಅದ ಛಾಪು ಮೂಡಿಸಿದ್ದ ಅವರು ಮುಖ್ಯಮಂತ್ರಿ ಆಗಬೇಕು ಎಂಬ ಅಭಿಲಾಷೆಯನ್ನು ಹೊಂದಿದ್ದೆ ಎಂದು ಹೇಳಿದರು.
ಅತಿ ಚಿಕ್ಕ ವಯಸ್ಸಿನಲ್ಲೇ ಕೇಂದ್ರ ಸಚಿವ ಸಂಪುಟದ ಸದಸ್ಯರಾಗಿದ್ದ ಅನಂತ್ ಕುಮಾರ್ ಅವರು ಬಿಜೆಪಿ ಪಕ್ಷದ ಸಂಘಟನೆಯಲ್ಲಿ ಕೆಲಸ ಮಾಡಿದ ಪ್ರಮುಖ ನಾಯಕರು. ಅವರಿಗೆ ಭವಿಷ್ಯದಲ್ಲಿ ಇನ್ನು ಹೆಚ್ಚಿನ ಸ್ಥಾನಮಾನ ಗಳಿಸುವ ಅವಕಾಶ ಇತ್ತು. ಆದರೆ ಚಿಕ್ಕ ವಯಸ್ಸಿನಲ್ಲೇ ಸಾಧನೆ ಮಾಡಿ, ಚಿಕ್ಕ ವಯಸ್ಸಿನಲ್ಲಿಯೇ ನಮ್ಮನ್ನು ಆಗಲಿಸಿದ್ದಾರೆ ಎಂದರು.
ಇದೇ ವೇಳೇ ಮಾತನಾಡಿದ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು, ನಾನು ರಾಜಕೀಯಕ್ಕೆ ಪ್ರವೇಶಿಸಿದಾಗ ಮೊದಲು ಅಭಿನಂಧನೆ ಸಲ್ಲಿಸಿದವರು ಅನಂತಕುಮಾರ್ ಅವರು. ಬೆಂಗಳೂರಿನ ಅಭಿವೃದ್ಧಿಯಲ್ಲಿ ಅವರ ಕೊಡುಗೆ ಅಪಾರ. ಅನಂತಕುಮಾರ್ ನಿಧನದಿಂದ ತುಂಬಾಲಾರದ ನಷ್ಟವಾಗಿದೆ ಎಂದು ಹೇಳಿದರು.
https://www.youtube.com/watch?v=hpYQXErCasA
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್ಬುಕ್ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews