ಬಜೆಟ್ ಮಂಡನೆ ವೇಳೆ, ಆರಾಧ್ಯ ದೇವರ ಪೂಜೆಯಲ್ಲಿ ಡಿಕೆಶಿ ಹಾಜರ್

Public TV
1 Min Read
DKS TEMPLE

ತುಮಕೂರು: ಕುಮಾರಸ್ವಾಮಿಯವರು ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡಿಸುತ್ತಿದ್ದ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿ ಆರಾಧ್ಯ ದೇವರ ಪೂಜೆಯಲ್ಲಿ ಹಾಜರಾಗಿದ್ದರು.

ಕಾಡುಸಿದ್ದೇಶ್ವರ ಮಠದ ಶಿವಯೋಗಿ ಸ್ವಾಮೀಜಿಯವರ ನೂತನ ಶಿಲಾ ಮಠದ ಲೋಕಾರ್ಪಣೆ ಪ್ರಯುಕ್ತ ನಡೆಯುತ್ತಿರುವ ಹೋಮ-ಹವನ ಕಾರ್ಯಕ್ರಮದಲ್ಲಿ ಡಿಕೆಶಿ ಕುಟುಂಬ ಭಾಗಿಯಾಗಿತ್ತು.

TMK DKSHI HOMA 1

ಬಜೆಟ್ ದಿನದಂದು ಗೈರು ಹಾಜರಿ ಆಗುತ್ತಿರುವ ಬಗ್ಗೆ ಜೂನ್ 27 ರಂದು ಮಾಧ್ಯಮಗಳ ಜೊತೆ ಮಾತನಾಡಿದ್ದ ಶಿವಕುಮಾರ್, ಜುಲೈ 5 ರಂದು ನೊಣವಿನಕೆರೆ ಗುರುಗಳ ಆಶ್ರಮದಲ್ಲಿ ದೊಡ್ಡ ಕಾರ್ಯಕ್ರಮ ಆಯೋಜಿಸಲಾಗಿದೆ. ಚುನಾವಣೆಗೆ ಮುನ್ನವೇ ಕಾರ್ಯಕ್ರಮ ನಿಗದಿಯಾಗಿತ್ತು. ರಾಜ್ಯಪಾಲರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಹಾಗಾಗಿ ಅಂದು ಬಜೆಟ್ ಮಂಡನೆ ಇದ್ದರೂ ಒಂದು ದಿನದ ಮಟ್ಟಿಗೆ ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ರಾಜ್ಯಪಾಲರ ಜತೆಗೆ ಅಥವಾ ಹೆಲಿಕಾಪ್ಟರ್ ನಲ್ಲಿ ಬಂದು ಹೋಗುವ ಪ್ರಯತ್ನ ಮಾಡುತ್ತೇನೆ. ಇದಕ್ಕೆ ಯಾವುದೇ ಅಪಾರ್ಥ ಕಲ್ಪಿಸುವುದು ಬೇಡ ಎಂದು ಮನವಿ ಮಾಡಿಕೊಂಡಿದ್ದರು.

ತಿಪಟೂರು ತಾಲೂಕಿನ ನೊಣವಿನಕೆರೆಯ ಕಾಡುಸಿದ್ದೇಶ್ವರ ಸಚಿವ ಡಿಕೆಶಿ ಅವರ ಆರಾಧ್ಯ ದೈವವಾಗಿದೆ. ಯಾವುದೇ ಶುಭ ಕಾರ್ಯವನ್ನು ಕೈಗೊಳ್ಳುವ ಮೊದಲು ಅವರು ಕಾಡುಸಿದ್ದೇಶ್ವರ ಮಠದ ಶಿವಯೋಗಿ ಸ್ವಾಮೀಜಿಯವರ ಆಶೀರ್ವಾದ ಪಡೆಯುತ್ತಾರೆ.

TMK DKSHI HOMA 2

Share This Article
Leave a Comment

Leave a Reply

Your email address will not be published. Required fields are marked *