Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮುಲು ಅಣ್ಣ ಎಲೆಕ್ಷನ್ ಶಾಂತಿಯುತವಾಗಿ ನಡೆಸಿಕೊಟ್ಟಿದ್ದಾರೆ- 3 ಜನರಿಗೆ ಡಿಕೆಶಿಯಿಂದ ಥ್ಯಾಂಕ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ರಾಮುಲು ಅಣ್ಣ ಎಲೆಕ್ಷನ್ ಶಾಂತಿಯುತವಾಗಿ ನಡೆಸಿಕೊಟ್ಟಿದ್ದಾರೆ- 3 ಜನರಿಗೆ ಡಿಕೆಶಿಯಿಂದ ಥ್ಯಾಂಕ್ಸ್

Bellary

ರಾಮುಲು ಅಣ್ಣ ಎಲೆಕ್ಷನ್ ಶಾಂತಿಯುತವಾಗಿ ನಡೆಸಿಕೊಟ್ಟಿದ್ದಾರೆ- 3 ಜನರಿಗೆ ಡಿಕೆಶಿಯಿಂದ ಥ್ಯಾಂಕ್ಸ್

Public TV
Last updated: November 6, 2018 12:12 pm
Public TV
Share
3 Min Read
DEEKESHI copy
SHARE

ಬೆಂಗಳೂರು: ಬಳ್ಳಾರಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನನಗೆ ಜವಾಬ್ದಾರಿ ವಹಿಸಿತ್ತು. ಈ ಸಂದರ್ಭದಲ್ಲಿ ಕೆಲವರು ಅಭಿನಂದಿಸಿದ್ರು, ಇನ್ನು ಕೆಲವರು ಟೀಕೆ ಟಿಪ್ಪಣಿಗಳನ್ನು ಮಾಡಿದ್ರು. ಇವುಗಳನ್ನೆಲ್ಲಾ ನಾನು ಬಹಳ ಸಂತೋಷದಿಂದಲೇ ಸ್ವೀಕರಿಸಿದ್ದೆ. ನಾನು ಈ ಚುನಾವಣೆಯಲ್ಲಿ 3 ಜನಕ್ಕೆ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ ಅಂತ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

ನಗರದಲ್ಲಿ ಬಳ್ಳಾರಿ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಜಯಗಳಿಸಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊದಲನೆಯದಾಗಿ ಶ್ರೀರಾಮುಲು ಅಣ್ಣ ಅವರಿಗೆ ಧನ್ಯವಾದ ಹೇಳುತ್ತೇನೆ. ಶ್ರೀರಾಮುಲು ಅಣ್ಣನವರು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಬಹಳ ಶಾಂತ ರೀತಿಯಿಂದ ಚುನಾವಣೆಯನ್ನು ನಡೆಯಲು ಅವಕಾಶ ಮಾಡಿಕೊಟ್ಟರು. ಹಾಗೆಯೇ ಯಾವ ಸಣ್ಣ ಕಾರ್ಯಕರ್ತರಲ್ಲಿ ಘರ್ಷಣೆಯನ್ನು ಉಂಟು ಮಾಡದೇ ಇದ್ದು, ಒಟ್ಟಿನಲ್ಲಿ ಈ ಚುನಾವಣೆ ಸುಲಲಿತವಾಗಿ ನಡೆಸಿಕೊಡಲು ಸಹಕಾರ ಮಾಡಿಕೊಟ್ಟಿದ್ದಾರೆ. ಚುನಾವಣೆಯಲ್ಲಿ ಅವರು ಗೆದ್ದಿರಬೋದು ಅಥವಾ ಸೋತಿರಬಹುದು. ಸೋಲು-ಗೆಲುವು ಇಲ್ಲಿ ಮುಖ್ಯವಲ್ಲ. ಬದಲಾಗಿ ನಮ್ಮಿಂದ ಯಾವುದೇ ಕಾರ್ಯಕರ್ತರಿಗೆ, ಮತದಾರರಿಗೆ ಹಾಗೂ ಆಡಳಿತ ವ್ಯವಸ್ಥೆಯಲ್ಲಿ ನೋವಾಗಬಾರದು ಅಂತ ಅವರು ನಮಗೆ ಸಹಕಾರ ಕೊಟ್ಟಿದ್ದಾರೆ. ಹೀಗಾಗಿ ಅವರಿಗೆ ನಾನು ಈ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸುತ್ತೇನೆ ಅಂತ ಟಾಂಗ್ ನೀಡಿದ್ರು.

DKSHI SRIRAMULU

ಬಿಜೆಪಿ ಅಭ್ಯರ್ಥಿ ಶಾಂತ ಅವರು ಶಾಂತ ಸ್ವಾಭವದವರು. ನಮ್ಮ ಮತಯಾಚನೆಯ ವೇಳೆ ಎಲ್ಲಿಯೂ ಅಡ್ಡಿಪಡಿಸಲಿಲ್ಲ. ಉಗ್ರಪ್ಪನವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದಾಗ ರಾಹುಲ್ ಗಾಂಧಿ ಒಪ್ಪಿಗೆ ಸೂಚಿಸಿದ್ದಕ್ಕೆ ಅವರಿಗೆ ಧನ್ಯವಾದ ಹೇಳುತ್ತೇನೆ. ಜೊತೆಯಲ್ಲಿ ಈ ಬಾರಿ ನಮ್ಮನ್ನು ಕೈ ಹಿಡಿದ ಜನತೆಗೆ ಹಾಗೂ ಬಳ್ಳಾರಿಯ ಬಿಜೆಪಿ ಕಾರ್ಯಕರ್ತರಿಗೂ ನಾನು ಧನ್ಯವಾದ ಹೇಳುತ್ತೇನೆ ಎಂದು ತಿಳಿಸಿದರು.

ಪಕ್ಷ-ಭೇದ, ಜಾತಿ-ಧರ್ಮ ಇವನ್ನೆಲ್ಲಾ ಬಿಟ್ಟು ಒಗ್ಗಟ್ಟಿನಿಂದ ಮತದಾರರು ಬಳ್ಳಾರಿಗೆ ಇಂದು ಧ್ವನಿಯಾಗಿರಬೇಕು, ಉಗ್ರಪ್ಪನವರು ನಮ್ಮ ವಿಚಾರವನ್ನು ಕರ್ನಾಟಕ ಸರ್ಕಾರದಲ್ಲಿ ಹೋರಾಟ ಹಾಗೂ ಪಾರ್ಲಿಮೆಂಟಿನಲ್ಲಿ ಧ್ವನಿಯೆತ್ತುವ ಭರವಸೆ ನೀಡಿದ್ದರು. ಹೀಗಾಗಿ ಮತದಾರರು ಅವರಿಗೆ ಮತ ಹಾಕಿ ಆ ಅವಕಾಶವನ್ನು ಉಗ್ರಪ್ಪ ಅವರಿಗೆ ನೀಡಿದ್ದಾರೆ ಎಂದರು.

Sriramulu Glass e1541486458852

ಯೋಗಕ್ಕಿಂತ ಯೋಗಕ್ಷೇಮ ಮುಖ್ಯ:
ಆದ್ರೆ ಇಲ್ಲಿ ನಾನು ಗೆದ್ದುಬಿಟ್ಟಿದ್ದೀನಿ ಅಂತ ಹಿಗ್ಗಲು ತಯಾರಿಲ್ಲ. ಯಾಕಂದ್ರೆ ಯೋಗಕ್ಕಿಂತ ಯೋಗಕ್ಷೇಮ ಬಹಳ ಮುಖ್ಯವಾಗುತ್ತದೆ. ಐದೂವರೆ ತಿಂಗಳ ಚುನಾವಣೆಗೆ ನಾನು ವೋಟ್ ಕೇಳಿಲ್ಲ. ಡಿಕೆಶಿ ಅವರು ಇಂದು ಬಾಂಬ್ ಸಿಡಿಸುತ್ತಾರೆ ಅಂತ ಮಾಧ್ಯಮ ಮಿತ್ರರು ಹೇಳಿದ್ದರು. ನನ್ನ ಬಾಂಬ್ ಇಂದು ಬಳ್ಳಾರಿಯ ಅಭಿವೃದ್ಧಿಗೆ ಸಿಡಿಸ್ತೀನಿ. ನನ್ನ ಕಾರ್ಯಕ್ರಮ, ಯೋಜನೆ ಹಾಗೂ ಆಚಾರ-ವಿಚಾರ ಮತ್ತು ಮಾಡಿದಂತಹ ಪ್ರಚಾರ ಎಲ್ಲವೂ ಬಳ್ಳಾರಿಯ ಜನತೆಗೆ ಸರಿಯಾದ ರೀತಿಯ ನ್ಯಾಯವನ್ನು ಒದಗಿಸಿಕೊಡಬೇಕಾಗಿದೆ. ಅಲ್ಲಿರುವಂತಹ ಧೂಳನ್ನು ತೆಗೆಯುವಂತದ್ದು, ಉದ್ಯೋಗ ಸೃಷ್ಟಿ, ವಲಸೆ ಹೋಗುತ್ತಿರುವ ಯುವಕರಿಗೆ ಉದ್ಯೋಗ, ಕುಡಿಯುವ ನೀರು, ರಸ್ತೆ ಒದಗಿಸುವಂತಹ ಬಹಳ ದೊಡ್ಡ ಸವಾಲಿದೆ. ಈ ಸವಾಲನ್ನು ಚುನಾವಣೆಯ ಗೆಲುವು ಹೆಚ್ಚಿನ ಜವಾಬ್ದಾರಿಯನ್ನು ಹೊರಿಸಿದೆ ಅಂದ್ರು.

ಜನಾರ್ದನ ಅಣ್ಣನವರು ಕೂಡ ಸಾಕಷ್ಟು ಸವಾಲುಗಳನ್ನು ಎಸೆದಿದ್ದಾರೆ. ಮಾಧ್ಯಮ ಹಾಗೂ ವಿರೋಧ ಪಕ್ಷದವರ ಸವಾಲುಗಳನ್ನೆಲ್ಲಾ ಬಹಳ ಸಂತೋಷದಿಂದಲೇ ಸ್ವೀಕಾರ ಮಾಡಿದ್ದೇವೆ ಅಂತ ಹೇಳಿದ್ರು.

Janardhan Reddy

ಸಾವು, ಸೋಲಿಗೆ ಹೆದರುವವನಲ್ಲ:
ಇದೇ ವೇಳೆ ಪಬ್ಲಿಕ್ ಟಿವಿಯಲ್ಲಿ ಶ್ರೀರಾಮುಲು ಹಾಗೂ ಡಿಕೆಶಿಯ ಪಂಥಾಹ್ವಾನ ಪ್ರಸ್ತಾಪಿಸಿದ ಡಿಕೆಶಿ, ನಾನು ಚರ್ಚೆಗೆ ಬರಲು ಸಿದ್ಧನಿದ್ದೆ, ಆದ್ರೆ ರಾಮುಲು ಅಣ್ಣ ಬರಲಿಲ್ಲ. ನಾನು ಪಲಾಯನ ಮಾಡಿಲ್ಲ. ಚುನಾವಣೆಯಲ್ಲಿ ನಿಂತವರೆಲ್ಲ ಗೆಲ್ಲಲು ಸಾಧ್ಯವಿಲ್ಲ. ಹುಟ್ಟಿದವರೆಲ್ಲ ನಿರಂತರವಾಗಿ ಬದುಕಲು ಸಾಧ್ಯವಿಲ್ಲ. ಯಾವತ್ತಾದರೂ ಒಂದು ದಿನ ಸಾಯಲೇಬೇಕು. ಹೀಗಾಗಿ ಈ ಸಾವು ಹಾಗೂ ಸೋಲಿಗೆ ಹೆದರಿಕೊಂಡು ಮನೆಯಲ್ಲಿ ಕುಳಿತುಕೊಳ್ಳುವವನು ಈ ಡಿಕೆಶಿವಕುಮಾರ್ ಅಲ್ಲ ಅಂತ ತಿಳಿಸಿದ್ರು.

ಬಳ್ಳಾರಿಗೆ ಹೋಗುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ:
ಇವತ್ತು ದೀಪಾವಳಿ. ಈ ಹಬ್ಬದ ಸಂದರ್ಭದಲ್ಲಿ ಕರ್ನಾಟಕ ಮಹಾಜನತೆಗೆ ನನ್ನ ವೈಯಕ್ತಿಕವಾಗಿ, ಸರ್ಕಾರದ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ. ಬಳ್ಳಾರಿಗೆ ಹೋಗುವ ಬಗ್ಗೆ ಇಂದು ನಾನು ನಿರ್ಧಾರ ಮಾಡಿಲ್ಲ. 5 ಕ್ಷೇತ್ರದಲ್ಲೂ ಚುನಾವಣಾ ಫಲಿತಾಂಶ ಹೊರಬಿದ್ದಿಲ್ಲ. ಇನ್ನೂ ಮತ ಎಣಿಕೆ ನಡೀತಾ ಇದೆ. ಹೀಗಾಗಿ ಕೊನೆಯ ಸುತ್ತಿನಲ್ಲಿ ರಾಜಕಾರಣದಲ್ಲಿ ಏನ್ ಬೇಕಾದ್ರೂ ಆಗಬಹುದು. ಇದರ ಅನುಭವ ನಮಗಿದೆ. ಲೀಡ್ ನಲ್ಲಿದ್ದವರು ಒಂದೇ ಬಾರಿಗೆ ಕೆಳಗಿಳಿದ ಅನೇಕ ಉದಾಹರಣೆಗಳು ಇವೆ ಅಂತ ಡಿಕೆಶಿ ತಿಳಿಸಿದ್ರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:bellarybengalurucongressDK Shivakumarelection resultKarnataka By Elections 2018ministerugrappaಉಗ್ರಪ್ಪಕರ್ನಾಟಕ ಚುನಾವಣೆ 2018ಡಿಕೆ ಶಿವಕುಮಾರ್ಪಬ್ಲಿಕ್ ಟಿವಿಬಳ್ಳಾರಿಬೆಂಗಳೂರು
Share This Article
Facebook Whatsapp Whatsapp Telegram

Cinema news

bigg boss season 12 kannada Dhanush becomes captain for the second time
ನಿಯಮ ಉಲ್ಲಂಘಿಸಿದ್ರೂ ಮನೆ ಮಂದಿಯ ಸಹಾಯದಿಂದ ಮತ್ತೆ ನಾಯಕನಾದ ಧನುಷ್‌
Cinema Latest Top Stories TV Shows
Akshay Kumar Rani Mukerji
ʻOh My God 3ʼ ಸಿನಿಮಾಗಾಗಿ ಒಂದಾದ ರಾಣಿ ಮುಖರ್ಜಿ – ಅಕ್ಷಯ್‌ ಕುಮಾರ್
Bollywood Cinema Latest
Ashwini Gowda and Gilli Nata Talk Fight
ಉಣ್ಕೊಂಡ್‌ ತಿನ್ಕೊಂಡ್ ಇರೋಕೆ ಬಿಗ್‌ಬಾಸ್ ಮನೆಗೆ ಬಂದಿದ್ಯಾ? – ಗಿಲ್ಲಿ ವಿರುದ್ಧ ಅಶ್ವಿನಿ ಕೆಂಡಾಮಂಡಲ
Cinema Latest Sandalwood
Dear Comrade
ವಿಜಯ್ ದೇವರಕೊಂಡ-ರಶ್ಮಿಕಾ ನಟನೆಯ ಸಿನಿಮಾ ಹಿಂದಿಯಲ್ಲಿ ರಿಮೇಕ್
Bollywood Cinema Latest Top Stories

You Might Also Like

FBI
Latest

ಹೊಸ ವರ್ಷದ ಮುನ್ನಾದಿನ ಅಮೆರಿಕದಲ್ಲಿ ಐಸಿಸ್‌ ಪ್ರೇರಿತ ದಾಳಿ ವಿಫಲ – ಅಪ್ರಾಪ್ತ ವಶಕ್ಕೆ

Public TV
By Public TV
17 minutes ago
Ballary Banner Riot
Bellary

ಬಳ್ಳಾರಿ ಗಲಾಟೆ ವೇಳೆ ಫೈರಿಂಗ್ ಕೇಸ್ – ಸತೀಶ್ ರೆಡ್ಡಿ ಖಾಸಗಿ ಗನ್‌ಮ್ಯಾನ್‌ಗಳು ನಾಪತ್ತೆ

Public TV
By Public TV
33 minutes ago
Mohan Bhagwat
Latest

ಬಿಜೆಪಿ ಸ್ವತಂತ್ರವಾಗಿ ಕೆಲಸ ಮಾಡುತ್ತೆ, RSS ರಿಮೋಟ್ ಕಂಟ್ರೋಲ್‌ನಿಂದಲ್ಲ: ಮೋಹನ್ ಭಾಗವತ್

Public TV
By Public TV
2 hours ago
stone pelting in front of Reddys house over banner issue police lathi charge Ballari
Bellary

ಬ್ಯಾನರ್ ಗಲಾಟೆಗೆ ಜನಾರ್ದನ ರೆಡ್ಡಿ ಪ್ರತಿದೂರು – ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR

Public TV
By Public TV
2 hours ago
shivananda patil handloom mela
Bengaluru City

ಜವಳಿ ನೀತಿಯಲ್ಲಿ ಕೈಮಗ್ಗ ಉದ್ದಿಮೆಗೆ ಉತ್ತೇಜನ: ಸಚಿವ ಶಿವಾನಂದ ಪಾಟೀಲ

Public TV
By Public TV
2 hours ago
Raichuru Ambadevi Fair
Districts

400 ವರ್ಷಗಳ ಇತಿಹಾಸವಿರುವ ಅಂಬಾದೇವಿ ಜಾತ್ರೆಯಲ್ಲಿ ಗಾಂಜಾ ಘಾಟು – ಸಾಧು ಸಂತರಿಗೆ, ಭಕ್ತರಿಗೂ ಕಿಕ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?