ಸಚಿವ ಡಿಕೆಶಿ ಆರೋಗ್ಯದಲ್ಲಿ ಚೇತರಿಕೆ- ಇಂದು ಸಂಜೆ ಡಿಸ್ಚಾರ್ಜ್?

Public TV
2 Min Read
DKSHIVAKUMAR

ಬೆಂಗಳೂರು: ಫುಡ್ ಪಾಯ್ಸನ್ ನಿಂದ ಬಳಲುತ್ತಿದ್ದ ಸಚಿವ ಡಿಕೆಶಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಇಂದು ಡಿಸ್ಚಾರ್ಜ್ ಆಗುವ ಸಾಧ್ಯತೆಗಳಿವೆ.

ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಡಿಕೆಶಿಯವರಿಗೆ ಚಿಕಿತ್ಸೆ ಮುಂದುವರಿದಿದೆ. ಸದ್ಯ ಡಿಕೆಶಿ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇಂದು ಬೆಳಗ್ಗೆ ಅಥವಾ ಸಂಜೆ ವೇಳೆ ಡಿಸ್ಚಾರ್ಜ್ ಆಗೋ ಸಾಧ್ಯತೆ ಇದೆ. ಮೂರು ದಿನಗಳ ಕಾಲ ವಿಶ್ರಾಂತಿ ಪಡೆದುಕೊಳ್ಳಬೇಕಾಗಿ ವೈದ್ಯರು ಸೂಚನೆ ನೀಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

DK SHIVAKUMAR PRESS MEET

ಏನಾಗಿತ್ತು?:
ಕಲಬುರಗಿಯಲ್ಲಿ ಪ್ರವಾಸ ಮುಗಿಸಿದ ಬಳಿಕ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಬೆಂಗಳೂರಿಗೆ ಬಂದ ಬಳಿಕ ತೀವ್ರವಾಗಿ ವಾಂತಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅಂದು ನಡೆದಿದ್ದ ಕನಕಪುರ ಕಾರ್ಯಕ್ರಮ ರದ್ದುಗೊಳಿಸಿ, ಕಗ್ಗಲೀಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಆ ಬಳಿಕ ಸಚಿವರಿಗೆ ಕನಕಪುರದ ಸ್ವಗೃಹದಲ್ಲಿ ಐವರು ವೈದ್ಯಾಧಿಕಾರಿಗಳಿಂದ ತಪಾಸಣೆ ನಡೆಸಲಾಗಿತ್ತು.

ಹೈದರಾಬಾದ್ ನಿಂದ ಹೊರಟಿದ್ದ ವಿಮಾನದಲ್ಲಿ ಸ್ಯಾಂಡ್ ವಿಚ್ ತಿಂದ ಪರಿಣಾಮ ಸಚಿವರ ಆರೋಗ್ಯದಲ್ಲಿ ಏರುಪೇರಾಗಿತ್ತು ಎನ್ನಲಾಗಿತ್ತು. ಪರಿಣಾಮ ನಿತ್ರಾಣಗೊಂಡಿರುವ ಶಿವಕುಮಾರ್ ಅವರಿಗೆ ವೈದ್ಯರು ಗ್ಲುಕೋಸ್ ಹಾಕಿ, ಚಿಕಿತ್ಸೆ ನೀಡಿದ್ದರು. ಸದ್ಯ ನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇದನ್ನೂ ಓದಿ: ನಾನು ತಪ್ಪು ಮಾಡಿದ್ರೆ ಜೈಲಿಗೆ ಹಾಕಿ, ಗಲ್ಲಿಗೂ ಏರಲು ಸಿದ್ಧ: ಡಿಕೆಶಿ ಗುಡುಗು

ಡಿಕೆಶಿಗೆ ಬಂಧನದ ಭೀತಿ:
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‍ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯ ಡಿ.ಕೆ.ಶಿವಕುಮಾರ್ ವಿರುದ್ಧ ಕೇಸ್ ದಾಖಲಿಸಿಕೊಂಡಿದೆ. ಸದ್ಯ ಡಿಕೆಶಿಗೆ ಬಂಧನದ ಭೀತಿ ಎದುರಾಗಿದ್ದು, ಹಿರಿಯ ವಕೀಲರ ಜೊತೆ ಕಾನೂನು ಪ್ರಕ್ರಿಯೆಯ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಶಿವಕುಮಾರ್ ಜೊತೆಗೆ ಸಚಿನ್ ನಾರಾಯಣ್, ಶರ್ಮ ಟ್ರಾವೆಲ್ಸ್‍ನ ಸುನೀಲ್ ಕುಮಾರ್ ಶರ್ಮ, ದೆಹಲಿಯ ಕರ್ನಾಟಕ ಭವನದ ಸಿಬ್ಬಂದಿ ಆಂಜನೇಯ ಹನುಮಂತಯ್ಯ ಮತ್ತು ರಾಜ್ಯ ಸರಕಾರದ ನಿವೃತ್ತ ಸಿಬ್ಬಂದಿ ರಾಜೇಂದ್ರ ಅವರನ್ನು ಆರೋಪಿಯನ್ನಾಗಿಸಿ ಕೇಸ್ ದಾಖಲಾಗಿದೆ.  ಇದನ್ನೂ ಓದಿ: ಕರ್ನಾಟಕ ಕಾಂಗ್ರೆಸ್‍ನ ಮತ್ತೊಂದು ಎಟಿಎಂ-ಕೆಜಿ ಲೆಕ್ಕದಲ್ಲಿ ಹವಾಲ ಹಣ ರವಾನೆ: ಸಂಬಿತ್ ಪಾತ್ರ

collage 2

ದೆಹಲಿ ನಿವಾಸದಲ್ಲಿ ಪತ್ತೆಯಾದ 8.5 ಕೋಟಿ ರೂ. ಸಿಕ್ಕ ಹಣದ ಸಂಬಂಧ ಆದಾಯ ತೆರಿಗೆ ಇಲಾಖೆ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿತ್ತು. ಆದಾಯ ತೆರಿಗೆ ಇಲಾಖೆಯ ದಾಳಿ ವೇಳೆ ಸಿಕ್ಕ ಮಾಹಿತಿ ಆಧರಿಸಿ ನೀಡಿರುವ ದೂರಿನಲ್ಲಿ ಹವಾಲ ಹಣದ ವಿವರವನ್ನು ಉಲ್ಲೇಖಿಸಿತ್ತು. ಇಲಾಖೆಗೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಐಟಿ ಇಲಾಖೆ ಹಿರಿಯ ಅಧಿಕಾರಿಗಳು ಈ ಹಿಂದೆ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿದ್ದರು. ಆದಾಯ ತೆರಿಗೆ ಇಲಾಖೆಯ ದಾಳಿ ವೇಳೆ ಸಿಕ್ಕ ಮಾಹಿತಿ ಆಧರಿಸಿ ನೀಡಿರುವ ದೂರಿನಲ್ಲಿ ಹವಾಲ ಹಣದ ವಿವರವನ್ನು ಉಲ್ಲೇಖಿಸಿದ್ದಾರೆ. ಈ ದೂರಿನಲ್ಲಿ ಹವಾಲ ಹಣದ ಮೂಲಕ ಕೋಟಿ ಕೋಟಿ ಹಣವನ್ನು ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಕಳುಹಿಸಿಕೊಟ್ಟಿದ್ದಾರೆ ಎಂಬ ಆರೋಪಗಳನ್ನು ಮಾಡಲಾಗಿದೆ.

vlcsnap 2018 09 19 06h59m34s87

ಐಟಿ ದಾಳಿಯಾದ ಬಳಿಕ ಪತ್ತೆಯಾದ ಡೈರಿಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಡಿಕೆ ಶಿವಕುಮಾರ್ ಮತ್ತು ಆರೋಪಿಗಳನ್ನು ವಿಚಾರಣೆ ನಡೆಸಿದ್ದರು. ಕೆಜಿ ಎಂಬ ಕೋಡ್ ವರ್ಡ್ ಬಳಸಿ ನಗದು ವ್ಯವಹಾರ ನಡೆಸುತ್ತಿದ್ದಾರೆ ಎನ್ನುವ ಅನುಮಾನದ ಮೇರೆಗೆ ಅಧಿಕಾರಿಗಳು ಆರೋಪಿಗಳಿಗೆ ಪ್ರಶ್ನೆ ಕೇಳಿದ್ದಾರೆ. ಆದರೆ ಈ ಪ್ರಶ್ನೆಗಳಿಗೆ ಆರೋಪಿಗಳಿಂದ ಸರಿಯಾದ ಉತ್ತರ ಸಿಕ್ಕಿರಲಿಲ್ಲ ಎನ್ನುವ ಮಾಹಿತಿ ಮೂಲಗಳಿಂದ ಸಿಕ್ಕಿತ್ತು. ಈ ಕುರಿತು ಇಂದು ಡಿ.ಕೆ.ಶಿವಕುಮಾರ್ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ. ಈ ಸಂಬಂಧ ಘಟಾನುಘಟಿ ವಕೀಲರೊಂದಿಗೆ ಸಚಿವರು ನಿರಂತರ ಸಂಪರ್ಕದಲ್ಲಿದ್ದಾರೆ ಎನ್ನಲಾಗಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *