ಬೆಂಗಳೂರು: ಸಚಿವ ಡಾ. ಜಿ.ಪರಮೇಶ್ವರ್ (G.Parameshwar) ಕರೆದಿದ್ದ ಡಿನ್ನರ್ ಮೀಟಿಂಗ್ (Dinner Meeting) ಅನ್ನು ಮುಂದೂಡಲಾಗಿದೆ.
ಪರಮೇಶ್ವರ್ ಅವರು, ದಲಿತ ನಾಯಕರ ಜೊತೆಗಿನ ಡಿನ್ನರ್ ಮೀಟಿಂಗ್ ಅನ್ನು ಹೈಕಮಾಂಡ್ ಸೂಚನೆ ಮೇರೆಗೆ ಮುಂದೂಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ. ಇದನ್ನೂ ಓದಿ: ಸರ್ಕಾರ ಕೊಟ್ಟ ಹಣ ಖರ್ಚು ಮಾಡದ ಅಧಿಕಾರಿಗಳ ವಿರುದ್ಧ ಸಿಎಂ ಕೆಂಡಾಮಂಡಲ
ಪ್ರಕಟಣೆಯಲ್ಲೇನಿದೆ?
ಇದೇ ಜ.8 ರಂದು ರಾಜ್ಯ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಚಿವರು, ಶಾಸಕರು, ಸಂಸದರು ಹಾಗೂ ಮುಖಂಡರ ಸಭೆಯನ್ನು ಬೆಂಗಳೂರಿನ ರ್ಯಾಡಿಸನ್ ಬ್ಲೂ ಹೋಟೆಲ್ನಲ್ಲಿ ಆಯೋಜಿಸಲಾಗಿದ್ದು ಸರಿಯಷ್ಟೆ. ಸದರಿ ಸಭೆಯನ್ನು ಕಾಂಗ್ರೆಸ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯದ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲ ಅವರ ಸೂಚನೆ ಮೇರೆಗೆ ಮುಂದೂಡಲಾಗಿದೆ. ಸದರಿ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದಿದೆ.
ಬೆಳಗಾವಿಯಲ್ಲಿ ಇತ್ತೀಚೆಗೆ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಡಿನ್ನರ್ ಮೀಟಿಂಗ್ ನಡೆದಿತ್ತು. ಸಿಎಂ ಆಪ್ತರ ಜೊತೆ ನಡೆಸಿದ ಮೀಟಿಂಗ್ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಸೃಷ್ಟಿಸಿತ್ತು. ಆ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿದ್ದರು. ಇದನ್ನೂ ಓದಿ: ಯಾವುದೇ ಸಮುದಾಯಗಳಿಗೆ ಸಮಸ್ಯೆ ಆಗದಂತೆ ಜಾತಿಗಣತಿ ವರದಿ ಬಗ್ಗೆ ನಿರ್ಧಾರ: ಈಶ್ವರ್ ಖಂಡ್ರೆ