ಟಿಪ್ಪು ಸುಲ್ತಾನ್‍ಗೆ ಭಾರತರತ್ನ ಕೊಡಿ ಅಂತಾ ಸಿದ್ದರಾಮಯ್ಯ ಹೇಳ್ತಾರೆ: ಶೆಟ್ಟರ್

Public TV
1 Min Read
siddu jagadish shettar

-ಕಾಂಗ್ರೆಸ್ ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಯಾಕೆ ಕೊಡಲಿಲ್ಲ

ಕೊಪ್ಪಳ: ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮುಂದೊಂದು ದಿನ ಟಿಪ್ಪು ಸುಲ್ತಾನ್‍ಗೂ ಭಾರತರತ್ನ ಕೊಡಿ ಎಂದು ಶಿಫಾರಸ್ಸು ಮಾಡುವ ವ್ಯಕ್ತಿ. ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ವೀರ್ ಸಾರ್ವಕರ್ ಬಗ್ಗೆ ಕೀಳಾಗಿ ಮಾತನಾಡೋದನ್ನು ಬಿಡಬೇಕು ಎಂದು ಸಚಿವ ಜಗದೀಶ್ ಶೆಟ್ಟರ್ ಆಗ್ರಹಿಸಿದರು.

Tipu

ಟಿಪ್ಪು ಸುಲ್ತಾನ ಜಯಂತಿ ಆಚರಣೆ ಯಾರಿಗೂ ಇಷ್ಟ ಇರಲಿಲ್ಲ. ವೋಟ್ ಬ್ಯಾಂಕ್ ಗಾಗಿ ಟಿಪ್ಪು ಜಯಂತಿ ಆಚರಣೆ ಪ್ರಾರಂಭಿಸಿದರು. ಸಿದ್ದರಾಮಯ್ಯ ನಾಳೆ ಅವರಿಗೂ ಭಾರತ ರತ್ನ ಕೊಡಿ ಎನ್ನುತ್ತಾರೆ. ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಲು ಎಲ್ಲರೂ ಪ್ರಯತ್ನ ಮಾಡೋಣ. ಆದರೆ ಹಿಂದೆ ಯುಪಿಎ ಸರ್ಕಾರ ಇದ್ದಾಗ ಕಾಂಗ್ರೆಸ್ ನವರು ಮಲಗಿದ್ದರಾ, ಏಕೆ ಸ್ವಾಮೀಜಿಗಳಿಗೆ ನೀಡಲಿಲ್ಲ. ಸಾವರ್ಕರ್ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ಸ್ವಾತಂತ್ರ್ಯ ಸೇನಾನಿ. ಸಾವರ್ಕರ್ ಬಗ್ಗೆ ಕೀಳಾಗಿ ಮಾತಾನಡಲು ನಿಮಗೆ ಮಾನ, ಮರ್ಯಾದೆ, ನಾಚಿಕೆ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.

HBL Blast 44

ಇದೇ ವೇಳೆ ಹುಬ್ಬಳ್ಳಿ ಬಾಂಬ್ ಸ್ಫೋಟಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪ್ರಕರಣದ ಕುರಿತು ತಿಳಿದಿದೆ, ನಾನಿನ್ನು ಅಧಿಕಾರಿಗಳೊಂದಿಗೆ ಮಾತನಾಡಿಲ್ಲ. ಪೊಲೀಸರು ತನಿಖೆ ಮಾಡುತ್ತಾರೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *