ಕಂಪ್ಲಿ ಗಣೇಶ್ ಮೊಬೈಲ್ ಸ್ವಿಚ್ ಆಫ್ ಮಾಡ್ಕೊಂಡು ಎಲ್ಲೋ ಕುಳಿತವ್ರೆ: ಎಂ.ಬಿ.ಪಾಟೀಲ್

Kampli Ganesh MB Patil

ಹುಬ್ಬಳ್ಳಿ: ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆಗೈದ ಆರೋಪಿ ಕಂಪ್ಲಿ ಶಾಸಕ ಗಣೇಶ್ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಎಲ್ಲೋ ಕುಳಿತಿದ್ದಾರೆ. ಹೀಗಾಗಿ ಅವರ ಬಂಧನ ವಿಳಂಬವಾಗುತ್ತಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪೊಲೀಸ್ ಇಲಾಖೆ ವೀಕ್ ಇಲ್ಲ. ಕಂಪ್ಲಿ ಗಣೇಶ್ ಅವರ ಬಂಧನಕ್ಕೆ ಎಲ್ಲ ಪ್ರಯತ್ನ ನಡೆದಿದೆ. ನೀವು ನೋಡುತ್ತೀರಿ ನಾವು ಶೀಘ್ರದಲ್ಲಿಯೇ ಅವರನ್ನು ಬಂಧಿಸುತ್ತೇವೆ. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ತಿಳಿಸಿದರು.

MB Patil

ಆಪರೇಷನ್ ಕಮಲದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ನಮ್ಮ ಪಕ್ಷದ ಯಾವುದೇ ಶಾಸಕರು ಬಿಜೆಪಿ ಹೋಗುವುದಿಲ್ಲ. ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಶಾಸಕರಾದ ಉಮೇಶ್ ಜಾದವ್, ನಾಗೇಂದ್ರ ಸೇರಿದಂತೆ ಎಲ್ಲರೂ ನಮ್ಮ ಸಂಪರ್ಕದಲ್ಲಿದ್ದಾರೆ. ಬಿಜೆಪಿಯವರು ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಹಗಲು ಕನಸು ಕಾಣುತ್ತಿದ್ದಾರೆ ವ್ಯಂಗ್ಯವಾಡಿದರು.

ಲೋಕಸಭಾ ಚುನಾವಣಾ ಸಿದ್ಧತೆಯ ನಿಟ್ಟಿನಲ್ಲಿ ಮಾಜಿ ಸಿಎಂ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಇಂದು ಕಾಂಗ್ರೆಸ್‍ನ ಎಲ್ಲಾ ಸಚಿವರು ಸೇರಲಿದ್ದಾರೆ. ಜೊತೆಗೆ ಈ ಕುರಿತು ಚೆರ್ಚೆ ನಡೆಸಲು ನಾಳೆಯೂ ಸಭೆ ಕರೆಯಲಾಗಿದೆ. ಜೆಡಿಎಸ್- ಕಾಂಗ್ರೆಸ್ ಮೈತ್ರಿಯಲ್ಲೇ ಲೋಕಸಭಾ ಚುನಾವಣೆ ನಡೆಯಲಿದೆ ಎಂದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Comments

Leave a Reply

Your email address will not be published. Required fields are marked *