Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಸಚಿವ ಚಲುವರಾಯಸ್ವಾಮಿ ಮನವಿ: ಕೇಂದ್ರದಿಂದ ಸಮ್ಮತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಸಚಿವ ಚಲುವರಾಯಸ್ವಾಮಿ ಮನವಿ: ಕೇಂದ್ರದಿಂದ ಸಮ್ಮತಿ

Bengaluru City

ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಸಚಿವ ಚಲುವರಾಯಸ್ವಾಮಿ ಮನವಿ: ಕೇಂದ್ರದಿಂದ ಸಮ್ಮತಿ

Public TV
Last updated: January 18, 2025 10:20 pm
Public TV
Share
4 Min Read
N Chaluvarayaswamy
SHARE

ಬೆಂಗಳೂರು: ರಾಜ್ಯದ ಕೃಷಿ (Agriculture) ಕ್ಷೇತ್ರದ ಬಲವರ್ಧನೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಪೂರಕವಾಗಿ ಬೇಕಾಗಿರುವ ವಿವಿಧ ಸಹಾಯ ಮತ್ತು ಆರ್ಥಿಕ ಸಹಕಾರವನ್ನು ಶೀಘ್ರ ಒದಗಿಸುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ (N Chaluvarayaswamy) ಕೇಂದ್ರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ನೆರವಿನ ಭರವಸೆಯನ್ನೂ ಸಹ ಪಡೆದಿದ್ದಾರೆ.

Held a detailed meeting with Shri @ChouhanShivraj avaru, Union Minister of Agriculture and Farmers Welfare & Minister of Rural Development, on Policy Interventions & Financial Assistance for Karnataka in Agriculture, Watershed Development, and in transforming University of… pic.twitter.com/LQf0U7alG9

— N Chaluvarayaswamy (@NCheluvarayaS) January 18, 2025

ಬೆಂಗಳೂರಿನ (Bengaluru) ಕುಮಾರಕೃಪಾ ಅತಿಥಿ ಗೃಹದಲ್ಲಿ ಕಂದಾಯ ಸಚಿವರಾದ ಕೃಷ್ಣಭೈರೇಗೌಡ, ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ್‌ ಖರ್ಗೆ ಅವರೊಂದಿಗೆ ಕೇಂದ್ರ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರು, ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಅವರನ್ನು ಭೇಟಿ ಮಾಡಿ, ಮನವಿ ಅರ್ಪಿಸಿ ಚಲುವರಾಯಸ್ವಾಮಿರವರು ರಾಜ್ಯದ ಬೇಡಿಕೆಗಳನ್ನು ಮಂಡಿಸಿದರು. ಇದನ್ನೂ ಓದಿ: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್‌ ಕೇಸ್‌ – ಸಂಜಯ್‌ ರಾಯ್‌ ದೋಷಿ

ರಾಜ್ಯದಲ್ಲಿ ಕೃಷಿ ಇಲಾಖೆ ಶೇ.99 ರಷ್ಟು ಆರ್ಥಿಕ ಹಾಗೂ ಭೌತಿಕ ಗುರಿ ಸಾಧನೆ ಮಾಡಿದ್ದು, ಕೇಂದ್ರ ಪುರಸ್ಕೃತ ಯೋಜನೆಗಳಲ್ಲೂ ಶೇ.124ರಷ್ಟು ಅನುದಾನ ಬಳಸಿಕೊಂಡಿದೆ. ಈ ಹಿನ್ನಲೆಯಲ್ಲಿ ಈ‌ ಬಾರಿಯೂ ಇದೇ ರೀತಿ ಹಣಕಾಸಿನ ನೆರವು ಒದಗಿಸಬೇಕೆಂದು ಸಚಿವರು ಕೋರಿದರು. ಕೇಂದ್ರ ಕೃಷಿ ಸಚಿವರು ಇದಕ್ಕೆ ಮುಕ್ತ ಮನಸ್ಸಿನ ಸಮ್ಮತಿ ಸೂಚಿಸಿದರು.

N Chaluvarayaswamy 2

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಿಂದ ರೈತರಿಗೆ ಕೃಷಿ ಯಾಂತ್ರಿಕರಣಕ್ಕೆ ಹೆಚ್ಚಿನ ಅನುಕೂಲವಾಗುತ್ತಿದ್ದು, ಈ ಭಾರಿ ಇನ್ನಷ್ಟು ಅಧಿಕ ಆರ್ಥಿಕ ನೆರವು ಒದಗಿಸುವಂತೆ ಮನವಿ ಮಾಡಿದ ಅವರು ಆನೇಕಲ್ ತಾಲ್ಲೂಕಿನ, ಕಾಚನಾಯಕನಹಳ್ಳಿ ಗ್ರಾಮದಲ್ಲಿ ಗುರುತಿಸಲಾಗಿರುವ 20 ಎಕರೆ ಪ್ರದೇಶದಲ್ಲಿ ಫೆಸ್ಟಿಸೈಡ್ಸ್ ಫಾರ್ಮುಲೇಷನ್ ಟೆಕ್ನಾಲಜಿ ಸಂಸ್ಥೆ ಪ್ರಾರಂಭಕ್ಕೆ ಅನುಮೋದನೆ ಒದಗಿಸುವಂತೆ ಕೋರಿದರು. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಅಪ್ಪಂದಿರ ಮನೆಯಿಂದ ಈ ಸರ್ಕಾರ ಅನುದಾನ ಕೊಡ್ತಿಲ್ಲ – ಪ್ರಿಯಾಂಕ್ ಖರ್ಗೆ ವಿರುದ್ಧ ಅಶೋಕ್ ಕಿಡಿ

ಸಾವಯವ, ಸಿರಿಧಾನ್ಯ ಉತ್ಪಾದನೆ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿ ಮತ್ತು ಮಾರಾಟದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು ಇದನ್ನು ಇನ್ನಷ್ಟು ಉತ್ತಮಪಡಿಸಲು ಕೇಂದ್ರ ಸರ್ಕಾರದ ನೆರವು ಮತ್ತು ಪ್ರೋತ್ಸಾಹದ ಅಗತ್ಯವಿದೆ ಎಂದಿರುವ ಅವರು ಜ.23 ರಿಂದ 25ರ ವರೆಗೆ ನಗರದ ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳದಲ್ಲಿ ಭಾಗವಹಿಸುವಂತೆ ಶಿವರಾಜ್ ಸಿಂಗ್ ಚೌಹಾಣ್‌ ರನ್ನ ಅಹ್ವಾನಿಸಿದರು.

ಹಿಂಗಾರು ಜೋಳಕ್ಕೆ ನೀಡಲಾಗುತ್ತಿರುವ ಬೆಂಬಲ ಬೆಲೆ ಸೌಲಭ್ಯವನ್ನು ಮುಂಗಾರಿನಿಂದಲೇ ಅನುಷ್ಠಾನಗೊಳಿಸಲು ನಿರ್ದೇಶನ ನೀಡಬೇಕು. ರಾಗಿ, ಜೋಳದಂತೆ ಇತರೆ ಸಿರಿಧಾನ್ಯಗಳನ್ನ (ತೃಣ ಧಾನ್ಯಗಳು) ಕನಿಷ್ಠ ಬೆಂಬಲ ಬೆಲೆ ಯೋಜನೆ ವ್ಯಾಪ್ತಿಗೆ ಸೇರ್ಪಡೆಗೊಳಿಸಬೇಕೆಂದು ಚಲುವರಾಯಸ್ವಾಮಿ ಅವರು ಕೇಂದ್ರ ಕೃಷಿ ಸಚಿವರಿಗೆ ಮನವಿ ಮಾಡಿದರು.

ಈ ಹಿಂದೆ ಜಾರಿಗೆ ಬಂದ ಆತ್ಮ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದೆ. ಆದರೆ ರಾಜ್ಯದಲ್ಲಿ ನಂತರ ಹೆಚ್ಚುವರಿಯಾಗಿ 59 ತಾಲ್ಲೂಕುಗಳು ರಚನೆಯಾಗಿರುವುದರಿಂದ ಹೊಸದಾಗಿ 177 ಸಹಾಯಕ ತಾಂತ್ರಿಕ ನಿರ್ವಾಹಕರು ಅಗತ್ಯವಿದ್ದು ಅದಕ್ಕೆ ಮಂಜೂರಾತಿಯೊಂದಿಗೆ ಅನುದಾನ ಒದಗಿಸುವಂತೆ ಚಲುವರಾಯಸ್ವಾಮಿ ಕೋರಿದರು. ಇದನ್ನೂ ಓದಿ: ಭಾರತೀಯ ಆಟೋ ಕ್ಷೇತ್ರಕ್ಕೆ ಹಸಿರು ಬಲ – ಕೇಂದ್ರದ ಒತ್ತಾಸೆಯಿಂದ ಇವಿ ವಾಹನ ಮಾರಾಟ ಹೆಚ್ಚಳ: ಹೆಚ್‌ಡಿಕೆ

ಗುಣಮಟ್ಟ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಾಲಿ ಇರುವ ವಿವಿಧ ಕಾಯ್ದೆಗಳಿಗೆ ತಿದ್ದುಪಡಿ ತರುವುದು, ಬೀಜ ಕಾಯ್ದೆಯಡಿ ದಂಡ ಮತ್ತು ಪರವಾನಿಗೆ ಶುಲ್ಕ ಹೆಚ್ಚಳ ಕುರಿತು ರಾಷ್ಟ್ರೀಯ ಆಹಾರ ಸುರಕ್ಷತಾ ಕಾಯ್ದೆ ಪಿಎಂಕೆಎಸ್‌ವೈ – ಪಿಡಿಎಂಸಿ ವ್ಯವಸ್ಥೆಗಳ ಸುಧಾರಣೆಗಳ ಬಗ್ಗೆ ಚಲುವರಾಯಸ್ವಾಮಿರವರು ಕೇಂದ್ರ ಸಚಿವರ ಗಮನ ಸೆಳೆದರು.

ಅಲ್ಲದೇ ಜಲಾನಯನ ಅಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಈಗಾಗಲೇ ವಿಶ್ವಬ್ಯಾಂಕ್ ನೆರವಿನೊಂದಿಗೆ 567.98 ರೂ. ಕೋಟಿಗಳ ವೆಚ್ಚದಲ್ಲಿ ಯೋಜನೆ ಜಾರಿಗೊಳಿಸಿದೆ. ರಾಜ್ಯದಲ್ಲಿ ಇನ್ನೂ 59.69 ಹೆಕ್ಟೇರ್ ಪ್ರದೇಶವನ್ನು ಜಲಾನಯನ ಅಭಿವೃದ್ಧಿ ಯೋಜನೆಯ ವ್ಯಾಪ್ತಿಗೆ ಸೇರಿಸಬೇಕಾಗಿದ್ದು, ಹೊಸದಾಗಿ 92 ಯೋಜನೆಗಳ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಿದ್ದು, ಅನುಮೋದನೆ ಮತ್ತು ಅನುದಾನ ಒದಗಿಸುವಂತೆ ಮನವಿ ಮಾಡಿದರು. ಇದನ್ನೂ ಓದಿ: 60 ಜನ ಕಾಂಗ್ರೆಸ್‌ನವರು ನಮ್ಮೊಟ್ಟಿಗೆ ಬರಲು ರೆಡಿಯಾಗಿದ್ದರು – ಯತ್ನಾಳ್ ಬಾಂಬ್

ಕರ್ನಾಟಕದ ಕೃಷಿ ಸಚಿವರು, ಕಂದಾಯ ಸಚಿವರು ಮತ್ತು ಗ್ರಾಮೀಣಾಭಿವೃದ್ಧಿ ಸಚಿವರ ಅಭಿಪ್ರಾಯ, ಮನವಿಗಳನ್ನು ಸ್ವೀಕರಿಸಿ ಚರ್ಚೆ ನಡೆಸಿದ ನಂತರ ಮಾತನಾಡಿದ ಕೇಂದ್ರ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರು ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯದ ಅಭಿವೃಧ್ಧಿಯ ದೃಷ್ಟಿಯಿಂದ ಒಟ್ಟಾಗಿ ಕಾರ್ಯನಿರ್ವಹಿಸೋಣ, ರಾಜ್ಯಕ್ಕೆ ಬೇಕಾದ ಎಲ್ಲಾ ರೀತಿಯ ನೆರವನ್ನು ಒದಗಿಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.

ಆರ್ಥಿಕ ವರ್ಷ ಕೊನೆಯಾಗುತ್ತಿದ್ದು, ಒದಗಿಸುವ ಅನುದಾನವನ್ನು ಸಂಪೂರ್ಣವಾಗಿ ವೆಚ್ಚ ಮಾಡಿ ಹಣ ಸದ್ಭಳಕೆ ಪ್ರಮಾಣ ಪತ್ರವನ್ನು ನೀಡಿದ ಕೂಡಲೇ ಕೃಷಿ ಹಾಗೂ ಇತರೆ ಇಲಾಖೆಗಳಿಗೆ ಹೆಚ್ಚುವರಿ ಅನುದಾನ ಒದಗಿಸಲಾಗುವುದು ಆತ್ಮ ಯೋಜನೆಯಡಿ ಅಗತ್ಯ ಪ್ರಮಾಣದ ಸಿಬ್ಬಂದಿಯನ್ನು ಸಹ ಒದಗಿಸಲಾಗುವುದು ಎಂದು ಶಿವರಾಜ್ ಸಿಂಗ್ ಚೌಹಾಣ್‌ ಅವರು ಹೇಳಿದರು.

ಲೋಕಸಭಾ ಸದಸ್ಯರಾದ ಬಿ.ವೈ.ರಾಘವೇಂದ್ರ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೂ ಸಹ ಈ ಸಭೆಯಲ್ಲಿ ಭಾಗವಹಿಸಿದ್ದರು.

TAGGED:agriculturebengalurufarmersFarmers Welfaren chaluvarayaswamyRural DevelopmentShivraj Singh Chouhanಕೃಷಿಮ ರೈತರುಗ್ರಾಮೀಣಾಭಿವೃದ್ಧಿಚಲುವರಾಯಸ್ವಾಮಿಬೆಂಗಳೂರುಶಿವರಾಜ್ ಸಿಂಗ್ ಚೌಹಾಣ್
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

mattighatt falls
Districts

ಶಿರಸಿಯ ಮತ್ತಿಘಟ್ಟ ಫಾಲ್ಸ್‌ನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Public TV
By Public TV
7 hours ago
Hardik Pandya Suryakumar Yadav
Cricket

ʻThis is for Indiaʼ – ಗೆದ್ದ ಬೆನ್ನಲ್ಲೇ ಸೂರ್ಯ ಮೊದಲ ಮಾತು

Public TV
By Public TV
7 hours ago
India Pakistan
Cricket

ಒಂದೇ ದಿನ ಪಾಕ್‌ ವಿರುದ್ಧ ಎರಡು ಪಂದ್ಯ ಗೆದ್ದ ಭಾರತ 

Public TV
By Public TV
8 hours ago
Pregnency in space station
Latest

ಭೂಮಿಯಾಚೆಗಿನ ಬದುಕು – ಬಾಹ್ಯಾಕಾಶದಲ್ಲಿ ಮಹಿಳೆ ಮಗುವಿಗೆ ಸುರಕ್ಷಿತವಾಗಿ ಜನ್ಮ ನೀಡಬಹುದಾ?

Public TV
By Public TV
8 hours ago
Tilak Varma Suryakumar Yadav
Cricket

ವಿಶ್ವಕಪ್‌ನಲ್ಲಿ ಪಾಕ್‌ ವಿರುದ್ಧ ಭಾರತಕ್ಕೆ 16-1 ಮುನ್ನಡೆ

Public TV
By Public TV
8 hours ago
MB patil
Districts

ಕಲೆ-ಸಂಸ್ಕೃತಿಗೆ ಬಂಜಾರ ಸಮಾಜದ ಕೊಡುಗೆ ಅಪಾರ: ಎಂ.ಬಿ. ಪಾಟೀಲ್

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?