ಹುಬ್ಬಳ್ಳಿ: ಕೇಂದ್ರ ಸರ್ಕಾರ (Central Government) ಕರ್ನಾಟಕದ ತೆರಿಗೆ ಪಾಲನ್ನ ಶೇ.4.131 ಕ್ಕೆ ಹೆಚ್ಚಳ ಮಾಡಿದೆ. ರಾಜ್ಯ ಕಾಂಗ್ರೆಸ್ ನಾಯಕರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕದ ಶೇ.3.647 ರಷ್ಟಿದ್ದ ತೆರಿಗೆ ಪಾಲನ್ನ ಇದೀಗ ಶೇ.4.131 ಕ್ಕೆ ಹೆಚ್ಚಿಸಲಾಗಿದೆ. ಈ ಮೂಲಕ ಕರ್ನಾಟಕಕ್ಕೆ ಸಾವಿರಾರು ಕೋಟಿ ತೆರಿಗೆ ಪಾಲು ಸಿಗಲಿದೆ ಎಂದಿರುವ ಸಚಿವರು, ‘ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯ’ ಎನ್ನುತ್ತಿರುವ ಕಾಂಗ್ರೆಸ್ ನಾಯಕರ (Congress Leaders) ಆರೋಪವನ್ನ ತಳ್ಳಿಹಾಕಿದ್ದಾರೆ. ಇದನ್ನೂ ಓದಿ: KPTCL ವ್ಯವಸ್ಥಾಪಕ ನಿರ್ದೇಶಕರಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅಧಿಕಾರ ಸ್ವೀಕಾರ
2026-27ರ ಬಜೆಟ್ ಪ್ರಕಾರ, ಕರ್ನಾಟಕಕ್ಕೆ 63,049 ಕೋಟಿ ರೂ. ತೆರಿಗೆ ಹಂಚಿಕೆ ಮಾಡಲಾಗಿದೆ. ಕಳೆದ ವರ್ಷಕ್ಕಿಂತ ಹೆಚ್ಚೇ ತೆರಿಗೆ ಪಾಲು ರಾಜ್ಯಕ್ಕೆ ದೊರಕಲಿದೆ. 16ನೇ ಹಣಕಾಸು ಆಯೋಗದ ವರದಿಯು ರಾಜ್ಯಗಳ ತೆರಿಗೆ ಹಂಚಿಕೆಯನ್ನ ಶೇ.41 ರಲ್ಲಿಯೇ ಉಳಿಸಿಕೊಂಡಿದೆ. ತೆರಿಗೆ ಹಂಚಿಕೆಗಳಲ್ಲಿ ಬದಲಾವಣೆ ಇಲ್ಲದಿದ್ದರೂ ರಾಜ್ಯಗಳ ತೆರಿಗೆ ಹಂಚಿಕೆ ಪಾಲು ಬದಲಾಗಿದೆ. ಆ ಪ್ರಕಾರ ರಾಜ್ಯಗಳಿಗೆ ಹೆಚ್ಚೇ ತೆರಿಗೆ ಪಾಲು ಸಿಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಸಿದ್ರಾಮಯ್ಯ ಹೌದು ಹುಲಿಯಾ ಆಗಿ ಉಳಿದಿಲ್ಲ, ʻಹೌದು ಇಲಿಯಾʼ ಆಗಿದ್ದಾರೆ: ಅಶೋಕ್ ಲೇವಡಿ
ಬಜೆಟ್ನಲ್ಲಿ ರಾಜ್ಯಕ್ಕೆ ಅನ್ಯಾಯ; ಆರ್.ಬಿ ತಿಮ್ಮಾಪುರ
ಇನ್ನೂ ಬಜೆಟ್ ಬಗ್ಗೆ ಸಚಿವ ಆರ್.ಬಿ ತಿಮ್ಮಾಪುರ ಮಾತನಾಡಿ, ಕೇಂದ್ರ ಸರಕಾರದ ಬಜೆಟ್ ನಿರಾಸೆ ತಂದಿದೆ, ಕೇಂದ್ರ ಸರ್ಕಾರ ರಾಜ್ಯಕ್ಕೆ ಯಾವುದೇ ಅನುಕೂಲಕರ ಯೋಜನೆ ಘೋಷಣೆ ಮಾಡಿಲ್ಲ. ಕರ್ನಾಟಕಕ್ಕೆ ಸಾಕಷ್ಟು ಅನ್ಯಾಯ ಮಾಡಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಲಡಾಖ್ ಗಡಿ ಸಂಘರ್ಷ; ನರವಾಣೆ ಅಪ್ರಕಟಿತ ಪುಸ್ತಕ ಪ್ರಸ್ತಾಪಿಸಿದ ರಾಗಾ – ಲೋಕಸಭೆಯಲ್ಲಿ ಗದ್ದಲ
ಇವರ ಬಜೆಟ್ ನಲ್ಲಿ ರೈತ ಪರ ಯೋಜನೆಗಳು ಇಲ್ಲವೇ ಇಲ್ಲ. ಯುವಕರಿಗೆ ಉದ್ಯೋಗದ ಭರವಸೆ ಇಲ್ಲ. ಎಲ್ಲಿ ಚುನಾವಣೆ ನಡೆಯಲಿದೆಯೋ ಅಲ್ಲಿ ಹೆಚ್ಚಿನ ಅನುದಾನ ಘೋಷಣೆ ಆಗಿದೆ. ಕರ್ನಾಟಕಕ್ಕೆ ಬಹಳ ಅನ್ಯಾಯ ಮಾಡಿದ್ದು ನೋವು ತಂದಿದೆ. ದೇಶದ ಸಮಗ್ರ ಅಭಿವೃದ್ಧಿ ಪರ ಬಜೆಟ್ ಮಂಡನೆ ಆಗಿಲ್ಲ. ತುಂಬಾ ಪಾರ್ಲಿಮೆಂಟ್ ಸದಸ್ಯರು ಆಯ್ಕೆ ಆಗಿದ್ದಾರೆ. ನಾನು ಎಂಪಿಗಳಿಗೆ ಮನವಿ ಮಾಡುವೆ ಹೆಚ್ಚು ಹೆಚ್ಚು ಅನುದಾನ ತರಬೇಕು. ಕೇಂದ್ರದ ಮೇಲೆ ಹೆಚ್ಚು ಒತ್ತಡ ಮಾಡಬೇಕು ಎಂದರು.



