ಸಂಗೀತ ಮಾಂತ್ರಿಕ ಇಳಯರಾಜರನ್ನು ರಾಜ್ಯಸಭೆಗೆ ಸ್ವಾಗತಿಸಿದ ಪ್ರಲ್ಹಾದ್ ಜೋಶಿ

Public TV
1 Min Read
PRALHAD JOSHI 2

ನವದೆಹಲಿ: ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಸಂಗೀತ ಮಾಂತ್ರಿಕ ಇಳಯರಾಜ ಅವರು ರಾಜ್ಯಸಭೆಯಲ್ಲಿಂದು ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನ ಸ್ವೀಕರಿಸಿದ ನಂತರ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರನ್ನ ಭೇಟಿಯಾದ ಇಳಯರಾಜ ಅವರು ಮಾತುಕತೆ ನಡೆಸಿದರು. ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಅತ್ಯಂತ ಗೌರವಯುತವಾಗಿ ಇಳಯರಾಜ ಅವರನ್ನು ಬರಮಾಡಿಕೊಂಡು ಸನ್ಮಾನಿಸಿ ಅಭಿನಂದಿಸಿದರು.

PRALHAD JOSHI 1

ನಂತರ ಇಳಯರಾಜ ಅವರನ್ನು ಕುರಿತು ನಮ್ಮ ದೇಶದ ಹೆಮ್ಮೆಯಾಗಿರುವ ಸಂಗೀತ ಮಾಂತ್ರಿಕ ಇಳಯರಾಜ ಅವರನ್ನು ರಾಜ್ಯಸಭೆಯಲ್ಲಿ ಕಾಣಲು ಸಿಕ್ಕ ಅವಕಾಶ ಅತ್ಯಂತ ಸಂತೋಷ ಉಂಟುಮಾಡಿದೆ ಎಂದು ಭೇಟಿ ವೇಳೆ ತಮ್ಮ ಧನ್ಯತಾಭಾವ ವ್ಯಕ್ತಪಡಿಸಿದ್ದಾರೆ. ಈ ಭೇಟಿಯ ವೇಳೆ ಕೇಂದ್ರ ಸಚಿವ ಪಿಯುಷ್ ಗೊಯಲ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ಇದನ್ನೂ ಓದಿ: ನಾಲ್ವರು ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಅಮಾನತು

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *