ಕಲಬುರಗಿ: ಕಲಬುರಗಿ ದೊಡ್ಡ ಜಿಲ್ಲೆಯಾಗಿರುವುದರಿಂದ ಇನ್ನೊಂದು ಸಚಿವ ಸ್ಥಾನ ನೀಡಬೇಕು ಎಂದು ಸಮಾಜಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ಸಚಿವ ಸಂಪುಟ ವಿಸ್ತರಣೆ ದೊಡ್ಡ ತಲೆನೋವಾಗಿ ಪರಿಣಮಿಸಿದ ಬೆನ್ನಲ್ಲೇ, ಪ್ರಿಯಾಂಕ ಖರ್ಗೆ ಕೂಡ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಕಲಬುರಗಿ ಜಿಲ್ಲೆ ದೊಡ್ಡ ಜಿಲ್ಲೆಯಾಗಿರುವುದರಿಂದ ಇನ್ನೊಂದು ಸಚಿವ ಸ್ಥಾನ ನೀಡಬೇಕು. ಸಚಿವ ಸ್ಥಾನ ನೀಡುವುದರಿಂದ ಜಿಲ್ಲೆಯ ಅಭಿವೃದ್ಧಿ ಕೆಲಸಗಳಿಗೆ ಪೂರಕವಾಗುತ್ತದೆ. ಈ ಬಗ್ಗೆ ಹೈಕಮಾಂಡ್ಗೂ ಕೂಡ ಮನವಿಯನ್ನು ಮಾಡಿದ್ದೇವೆ ಎಂದು ಹೇಳಿದರು.
ಮತ್ತೊಂದು ಸಚಿವ ಸ್ಥಾನಕ್ಕೆ ಪ್ರಿಯಾಂಕ್ ಅವರಿಂದಲೇ ಆಗ್ರಹ ಕೇಳಿ ಬಂದ ಹಿನ್ನೆಲೆಯಲ್ಲಿ ಜೇವರ್ಗಿ ಶಾಸಕ ಅಜಯ್ ಸಿಂಗ್ ಸೇರಿದಂತೆ ಹಲವು ಆಕಾಂಕ್ಷಿಗಳು ಮಂತ್ರಿಗಿರಿಯ ರೇಸ್ನಲ್ಲಿದ್ದಾರೆ. ಸಮ್ಮಿಶ್ರ ಸರ್ಕಾರ ಯಾವ ರೀತಿ ಮಂತ್ರಿ ಸ್ಥಾನವನ್ನು ಹಂಚಿ, ಉಳಿದ ಶಾಸಕರನ್ನು ಹೇಗೆ ಮನವೊಲಿಸುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv