ಮಂಡ್ಯ: ಲೋಕಸಭಾ ಚುನಾವಣೆ ಮತದಾನಕ್ಕೆ ಎರಡು ದಿನ ಇರುವಾಗಲೇ ಸಚಿವ ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಬಿಜೆಪಿ ಸೇರಲು ಸಜ್ಜಾಗಿದ್ದಾರೆ. ಬಿಜೆಪಿ ಜೊತೆ ಸೇರಿ ಸುಮಲತಾ ಅವರು ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ಜೊತೆ ಸುಮಲತಾ ಚರ್ಚೆ ಮಾಡಿರುವ ವಿಡಿಯೋ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದಾರೆ.
ಸುಮಲತಾ ಅವರು ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಂದು ಜೆಡಿಎಸ್ ಅವರು ಹೇಳುತ್ತಿದ್ದಾರೆ. ಆದರೆ ಸುಮಲತಾ ಅವರು ಪ್ರಚಾರದ ಸಮಯದಲ್ಲಿ ತಾವು ಬಿಜೆಪಿ ಸೇರುವುದಿಲ್ಲ ಎಂದು ಮತದಾರರಿಗೆ ಸ್ಟಷ್ಟನೆ ನೀಡುತ್ತಿದ್ದಾರೆ.