ಸಚಿವ ಡಿಕೆಶಿ ಕ್ಷಮೆಯಾಚಿಸಿದ್ದು ದಡ್ಡತನ: ರಮೇಶ್ ಜಿಗಜಿಣಗಿ

Public TV
1 Min Read
DK SHI Jigajinagi

ವಿಜಯಪುರ: ಲಿಂಗಾಯತ ಪ್ರತ್ಯೇಕ ಧರ್ಮ ರಚನೆ ವಿಚಾರವಾಗಿ ಈ ಸಂದರ್ಭದಲ್ಲಿ ಜಲಸಂಪ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಕ್ಷಮೆ ಯಾಚಿಸಿದ್ದು ಅವರ ದಡ್ಡತನ ಎಂದು ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಹೇಳಿದ್ದಾರೆ.

ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಇಷ್ಟು ದಿನ ಡಿಕೆ ಶಿವಕುಮಾರ್ ಅವರು ಮಲಗಿದ್ರಾ? ಈ ಸಂದರ್ಭದಲ್ಲಿ ಏಕೆ ಕ್ಷಮೆ ಕೇಳಬೇಕು? ಎಲ್ಲದಕ್ಕೂ ಕಾರಣ ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣೆ ಅಷ್ಟೇ. ಜನರ ಕರುಣೆ ಪಡೆಯಲು ಡಿಕೆ ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ. ಆದರೆ ಇದರಿಂದ ಏನು ಪ್ರಯೋಜನ ಆಗುವುದಿಲ್ಲ ಎಂದು ತಿಳಿಸಿದರು.

minister Ramesh Jigajinagi

ಧರ್ಮ ಇಬ್ಭಾಗ ಮಾಡುವ ಕುರಿತ ಪ್ರಯತ್ನದ ಬಗ್ಗೆ ಜನರು ಈಗಾಗಲೇ ಒಂದು ತೀರ್ಮಾನ ಮಾಡಿದ್ದಾರೆ. ಆದರೆ ಇವರು ಜನರಿಗೆ ಒಂದು ತಪ್ಪು ಹಾದಿ ಹಿಡಿಸಲು ಇದೊಂದು ಇದು ಒಂದು ದೊಡ್ಡ ನಾಟಕ. ಧರ್ಮದ ವಿಚಾರದಲ್ಲಿ ಎಂದು ರಾಜಕಾರಣಿಗಳು ಕೈ ಹಾಕಬಾರದು ಎಂದು ಕಿವಿ ಮಾತು ಹೇಳಿದರು. ಇದನ್ನೂ ಓದಿ: ಶಿವಕುಮಾರ್ Vs ಎಂಬಿ ಪಾಟೀಲ್ – ಕಾಂಗ್ರೆಸ್‍ನಲ್ಲಿ ಮತ್ತೆ ಧರ್ಮ ಯುದ್ಧ ಶುರು

ಇದೇ ವೇಳೆ ಬಳ್ಳಾರಿ ಉಪಚುನಾವಣೆಯ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಬಳ್ಳಾರಿ ಚುನಾವಣೆಯಲ್ಲಿ ನನಗೂ ಉಸ್ತುವಾರಿ ಹಾಕಿದ್ದಾರೆ. ನಾನು ಹಲವು ಬಾರಿ ಅಲ್ಲಿಗೆ ಭೇಟಿ ನೀಡಿದ್ದೇನೆ. ಚುಣಾವಣೆಯ ಕಾರ್ಯತಂತ್ರದ ಬಗ್ಗೆಯೂ ಎರಡು ಬಾರಿ ಪಕ್ಷದಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗಿದೆ. ನಮ್ಮ ಪಕ್ಷದ ಅಭ್ಯರ್ಥಿ ಶಾಂತಕ್ಕ ಅವರು 1 ಲಕ್ಷ ಮತಗಳ ಅಂತರದಲ್ಲಿ ಗೆಲುವು ಪಡೆಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನು ಓದಿ : ನಾವು ತಪ್ಪು ಮಾಡಿದ್ದೇವೆ, ನನ್ನ ಹೇಳಿಕೆಗೆ ಈಗಲೂ ಬದ್ಧ: ಡಿಕೆ ಶಿವಕುಮಾರ್

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *