ಮಂಡ್ಯ: ಮಗಳ ಮೇಲೆ ಅತ್ಯಾಚಾರ ಮಾಡಿದ್ದ ಕೆಜಿಎಫ್ ಬಾಬುಗೆ ಎಂಎಲ್ಸಿ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡಿದೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಗಂಭೀರ ಆರೋಪ ಮಾಡಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಮಾತನಾಡಿದ ಅವರು, ಬಾಬು ಹೆಂಡತಿ, ಮಗಳ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಬಾಬು ವಿರುದ್ಧ ದೂರು ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನ ಠಾಣೆಯೊಂದರಲ್ಲಿ ಎಫ್ಐಆರ್ ದಾಖಲಾಗಿದೆ. ಇಂತಹವರಿಗೆ ಕಾಂಗ್ರೆಸ್ನವರು ಟಿಕೆಟ್ ಕೊಟ್ಟಿದ್ದಾರೆ. ಇಂತಹ ಪ್ರಕರಣಗಳನ್ನು ನೋಡಿ ಕೊಟ್ಟಿದ್ದಾರೋ ಏನೋ ಗೊತ್ತಿಲ್ಲ. ಅತ್ಯಾಚಾರ ಮಾಡಿದ್ದಾರೆ ಎಂಬುವುದಕ್ಕೆ ಎಫ್ಐಆರ್ ದಾಖಲಾಗಿರುವುದು ಎಲ್ಲಾ ದಾಖಲೆಗಳು ನಮ್ಮ ಬಳಿ ಇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬರೋಬ್ಬರಿ 1,743 ಕೋಟಿ ಆಸ್ತಿ ಹೊಂದಿರುವ ಶ್ರೀಮಂತ ರಾಜಕಾರಣಿ ಕಣಕ್ಕೆ – ಕೆಜಿಎಫ್ ಬಾಬು ಆಸ್ತಿ ಎಷ್ಟಿದೆ?
ಡಿಸೆಂಬರ್ 2 ಅಥವಾ 3 ಬೆಂಗಳೂರಿನ ಎಲ್ಲಾ ಶಾಸಕರು, ಸಚಿವರು ಈ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ. ನಾನು ಹೇಳಿರುವುದು ಯಾವುದು ಸುಳ್ಳಲ್ಲ, ಎಲ್ಲಾ ನಿಜ. ಡೆವಲಪರ್ಸ್ ಯಾರು ಎಷ್ಟು ರೂಪಾಯಿ ಕೊಟ್ಟಿದ್ದಾರೆ ಎಂದು ನಮ್ಮ ಬಳಿ ಸಾಕ್ಷ್ಯಗಳಿದೆ. ಆತ 1,700 ಕೋಟಿಯನ್ನು ಡಿಕ್ಲೇರ್ ಮಾಡಿದ್ದಾನೆ. ಡಿಸಿಪಿಗೆ ಫೋನ್ ಮಾಡಿ ಅವನ ಹಿನ್ನೆಲೆಯನ್ನು ತೆಗೆದುಕೊಂಡಿದ್ದೇನೆ. ಇದನ್ನೂ ಓದಿ: ಪುನೀತ್ ಅಗಲಿ ಇಂದಿಗೆ ಒಂದು ತಿಂಗಳು – ದೊಡ್ಮನೆಯಲ್ಲಿ ವಿಶೇಷ ಪೂಜೆ
1,700 ಕೋಟಿ ಅಫಿಶಿಯಲ್ ಆಗಿ ತೋರಿಸಿದ್ದಾನೆ, ಅದರ ಎರಡರಷ್ಟು ಇದೆ. ಆತನ ಮೇಲೆ 40 ಕೇಸ್ಗಳಷ್ಟು ಎಫ್ಐಆರ್ ಇದೆ. 5 ಕೋಟಿಯಿಂದ 60 ಕೋಟಿವರೆಗೂ ಆತ ಫ್ರಾಡ್ ಮಾಡಿದ್ದಾನೆ. ಅವನನ್ನು 3 ಮೂರು ತಿಂಗಳು ಗಡಿಪಾರು ಮಾಡಿ, ಜೈಲಿನಲ್ಲೂ ಇಟ್ಟಿದ್ದೇವು ಎಂದು ಡಿಸಿಪಿ ಹೇಳಿದ್ದಾರೆ. ಇಂತಹವನನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಡಿದೆ. ಈ ಕೇಸ್ಗಳನ್ನು ನೋಡಿ ನನಗೆ ಗಾಬರಿಯಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
Minister Somashekar, KGF Babu, Congress, MLC Election, Mandya