ಮಾಧ್ಯಮಗಳ ಮೇಲೆ ಸಾ.ರಾ.ಮಹೇಶ್ ಗರಂ

Public TV
1 Min Read
mahesh copy

ಬೆಂಗಳೂರು: ಭಾನುವಾರವಷ್ಟೇ ಸಚಿವ ರೇವಣ್ಣ ಅವರು ಕಟೀಲು ದೇವಾಲಯದಲ್ಲಿ ಪತ್ರಕರ್ತರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದು, ಇದೀಗ ಸಚಿವ ಸಾ.ರಾ ಮಹೇಶ್ ಕೂಡ ಮಾಧ್ಯಮಗಳ ಮೇಲೆ ಆಕ್ರೋಶಗೊಂಡಿದ್ದಾರೆ.

ಕೆ.ಕೆ ಗೆಸ್ಟ್ ಹೌಸ್‍ನಲ್ಲಿ ಬಿಜೆಪಿ ಭೇಟಿ ಬಗ್ಗೆ ಸಾ.ರಾ ಮಹೇಶ್ ಅವರನ್ನು ಮಾಧ್ಯಮದವರು ಪ್ರಶ್ನೆ ಮಾಡಿದರು. ಈ ವೇಳೆ ಸಿಟ್ಟಾದ ಮಹೇಶ್, ಎಷ್ಟು ಬಾರಿ ಹೇಳುವುದು ನಿಮಗೆ. ಒಂದು ಸಲ ಹೇಳಿದರೆ ಅರ್ಥ ಆಗಲ್ವ ಎಂದು ಕೈ ಬೆರಳು ತೋರಿಸಿ ಸಿಟ್ಟಿನಿಂದ ವಿಧಾನಸಭೆಯೊಳಗೆ ಹೋದರು. ಇದನ್ನೂ ಓದಿ: ಕಟೀಲು ದೇವಾಲಯದಲ್ಲಿ ಪತ್ರಕರ್ತರಿಗೆ ಅವಾಚ್ಯ ಪದಗಳಿಂದ ಬೈದ ರೇವಣ್ಣ

BJP SaRa Mahesh 1

ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಮತ್ತು ಈಶ್ವರಪ್ಪ ಜೊತೆ ಸಾ.ರಾ ಮಹೇಶ್ ಗುರುವಾರ ರಾತ್ರಿ ಸಭೆ ನಡೆಸಿದ್ದರು. ಸಭೆ ಬಳಿಕ ಸಾರಾ ಮಹೇಶ್ ಅವರು ಕೆಕೆ ಗೆಸ್ಟ್ ಹೌಸ್ ಬಳಿ ಬಿಜೆಪಿ ನಾಯಕರ ಜೊತೆ ಮಾಧ್ಯಮಗಳಿಗೆ ಸೆರೆ ಸಿಕ್ಕಿದ್ದರು. ಈ ಮೂಲಕ ಮೂವರು ನಾಯಕರ ರಹಸ್ಯ ಭೇಟಿ ಬಯಲಾಗಿತ್ತು. ಈ ಬಗ್ಗೆ ಇಂದು ಸಾ.ರಾ.ಮಹೇಶ್ ಅವರನ್ನು ಪ್ರಶ್ನೆ ಮಾಡಿದ್ದಕ್ಕೆ ಈ ರೀತಿ ಮಾಧ್ಯಮಗಳ ಮೇಲೆ ಗರಂ ಆದರು.

vlcsnap 2019 07 15 11h45m47s56 copy

ಒಂದೆಡೆ ಅತೃಪ್ತ ಶಾಸಕರು ಮುಂಬೈನಿಂದ ಬರುತ್ತಿಲ್ಲ. ಇತ್ತ ಇಲ್ಲಿನ ಅತೃಪ್ತ ಶಾಸಕರನ್ನು ಮನವೊಲಿಸಲು ಪ್ರಯತ್ನ ಮಾಡಿದರೂ ಸಫಲವಾಗಿಲ್ಲ. ಈ ಎಲ್ಲ ಒತ್ತಡದಲ್ಲಿರುವ ದೋಸ್ತಿನಾಯಕರು ಹತಾಶೆಯಿಂದ ಮಾಧ್ಯಮದವರ ಮೇಲೆ ಸಿಟ್ಟಾಗುತ್ತಿದ್ದಾರಾ ಎಂಬ ಪ್ರಶ್ನೆ ಕಾಡಿದೆ.

Share This Article
Leave a Comment

Leave a Reply

Your email address will not be published. Required fields are marked *