ಬೆಳಗಾವಿ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಅವರಾ ಅಥವಾ ಹಿರಿಯ ನಟ ಅಂಬರೀಶ್ ಅವರ ಪತ್ನಿ ಸುಮಲತಾ ಅವರು ಸ್ಪರ್ಧಿಸುತ್ತಾರಾ ಎನ್ನುವ ಬಗ್ಗೆ ರಾಜಕೀಯದಲ್ಲಿ ಚರ್ಚೆಯಾಗುತ್ತಿದೆ. ಈ ಮಧ್ಯೆ ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ಸಿಗೆ ಬಿಟ್ಟುಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಮಂಡ್ಯದಲ್ಲಿ ಜೆಡಿಎಸ್ ಇದೆ. ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧಿಸುವ ಪ್ರಶ್ನೆಯಿಲ್ಲ. ಹೀಗಾಗಿ ನಾವು ಮಂಡ್ಯ ಲೋಕಸಭೆಯನ್ನು ಜೆಡಿಎಸ್ ಗೆ ಬಿಟ್ಟು ಕೊಡುತ್ತೇವೆ. ಅಲ್ಲಿ ಯಾರು ಸ್ಪರ್ಧಿಸಬೇಕೆಂಬುದನ್ನ ಜೆಡಿಎಸ್ ನವರು ತೀರ್ಮಾನ ಮಾಡಬೇಕು. ನಾನು ಹೇಳಲು ಸಾಧ್ಯವಿಲ್ಲ. ಇನ್ನೂ ಸುಮಲತಾ ಅವರು ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ನನಗೆ ಗೊತ್ತಿಲ್ಲ ಎಂದು ಹೇಳಿದರು.
ಇದೇ ವೇಳೆ ರಮೇಶ್ ಜಾರಕಿಹೊಳಿ ಸೇರಿ ನಾಲ್ವರು ಶಾಸಕರನ್ನ ಅರ್ಹನಗೊಳಿಸುವ ವಿಚಾರವಾಗಿ ಮಾತನಾಡಿದ ಅವರು, ಪಕ್ಷ ಈಗಾಗಲೇ ಅವರಿಗೆ ನೋಟಿಸ್ ಕೊಟ್ಟಿದೆ. ಮತ್ತೆ ಅವರಿಗೆ ಹಾಜರಾಗಲು ಪಕ್ಷ ಅವಕಾಶಕೊಟ್ಟಿದೆ. ಹೀಗಾಗಿ ಅಲ್ಲಿಗೆ ರಮೇಶ್ ಜಾರಕಿಹೊಳಿ ಅವರು ಬಂದು ತಮ್ಮ ಸಮಸ್ಯೆ ಹೇಳಬಹುದು. ಇಲ್ಲವಾದರೆ ಪಕ್ಷ ತನ್ನದೆ ಆಗ ತೀರ್ಮಾನವನ್ನು ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.
ಸಿಎಂ ಕುಮಾರಸ್ವಾಮಿ ಅವರೇ ಬಜೆಟ್ ಮಂಡನೆ ಮಾಡುತ್ತಾರೆ. ಈಗಾಗಲೇ ಫೆಬ್ರವರಿ 8 ಕ್ಕೆ ಬಜೆಟ್ ಅಂತ ಘೋಷಣೆ ಮಾಡಿದ್ದಾರೆ ಎಂದು ಸತೀಶ್ ಜಾರಕಿಹೊಳಿ ಎಂದು ಹೇಳಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv