ಬೆಂಗಳೂರು: ಸಿದ್ದರಾಮಯ್ಯ ಅವರು ನಮಗೆ ಬೇಕೆ ಬೇಕು. ಮುಂದಿನ ಚುನಾವಣೆ ಗೆಲ್ಲಬೇಕು ಅಂದರೆ ಸಿದ್ದರಾಮಯ್ಯ ಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವ್ರು ನಮಗೆ ಬೇಕೆ ಬೇಕು. ಹಿಂದೆಯೂ ಇದನ್ನ ಹೇಳಿದ್ದೆ, ಈಗಲೂ ಹೇಳ್ತೇನೆ. ಚುನಾವಣೆಗೆ ನಿಲ್ಲದಿದ್ದರೂ, ರಾಜಕೀಯ ನಿವೃತ್ತಿಯಾದರೂ ಅವರು ಬೇಕು. ಮುಂದಿನ ನಾಯಕತ್ವ ಬೆಳೆಸೋವರೆಗೂ ರಾಜಕಾರಣದಲ್ಲಿ ಇರಬೇಕು ಎಂದು ಆಶಯ ವ್ಯಕ್ತಪಡಿಸಿದರು.
Advertisement
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಗೊತ್ತಿಲ್ಲ. ಈ ಬಗ್ಗೆ ಖರ್ಗೆ ಅವರು ತೀರ್ಮಾನ ಮಾಡ್ತಾರೆ. ಕರ್ನಾಟಕ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ. ಬೇರೆ ರಾಜ್ಯಗಳ ಚರ್ಚೆ ನಡೆಯುತ್ತಿದೆ. ನಮ್ಮ ರಾಜ್ಯದ ಚರ್ಚೆ ಬಂದಾಗ ಅಭಿಪ್ರಾಯ ಹೇಳುತ್ತೇವೆ ಎಂದರು.
Advertisement
ನಮ್ಮ ಆಶಯ ಕೂಡ ಅದೇ ಇದೆ. ಚುನಾವಣೆಯಿಂದ ನಿವೃತ್ತಿ ಆದರೂ, ಸಕ್ರಿಯ ರಾಜಕೀಯದಲ್ಲಿ ಸಿದ್ದರಾಮಯ್ಯ ಇರಬೇಕು. ಮುಂದಿನ ಚುನಾವಣೆ ಗೆಲ್ಲಬೇಕು ಅಂದ್ರೆ, ಸಿದ್ದರಾಮಯ್ಯ ಬೇಕು. ಚುನಾವಣೆ ಗೆಲ್ಲಲು ಅನಕೂಲ ಆಗುತ್ತೆ. ಇನ್ನೊಂದು ಅವಧಿಯ ವರೆಗೆ ರಾಜಕೀಯದಲ್ಲಿ ಅವರು ಇರಬೇಕು ಎಂದು ಒತ್ತಾಯಿಸಿದರು.
Advertisement
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿ, ಉಸ್ತುವಾರಿಗಳ ಬದಲಾವಣೆ ಬಗ್ಗೆ ಗೊತ್ತಿಲ್ಲ. ನಮ್ಮ ವ್ಯಾಪ್ತಿಯಲ್ಲಿ ಅದು ಇಲ್ಲ. ರಾಹುಲ್ ಗಾಂಧಿ ನಿರ್ಧಾರ ಮಾಡ್ತಾರೆ
ಬೇರೆ ರಾಜ್ಯಗಳ ಉಸ್ತುವಾರಿ ಬದಲಾವಣೆ ಆಗಿದೆ. ಸುರ್ಜೇವಾಲ ಈಗ ಇದ್ದಾರೆ, ಅದರ ಬಗ್ಗೆ ಏನು ಹೇಳಲ್ಲ ಎಂದು ಸ್ಪಷ್ಟಪಡಿಸಿದರು.
Advertisement
ಪೂರ್ಣಾವಧಿ ಸಿಎಂ ಕುರಿತು, ಬೇರೆಯ ಸಚಿವರ ಸಹಮತ ಮತ್ತು ಅವರ ಹೇಳಿಕೆ ಹೇಳಿದ ಮೇಲೆ ಆಯ್ತಲ್ಲ ನಮ್ಮದೇನು ಇದೆ. ಪವರ್ ಶೇರಿಂಗ್ ವಿಚಾರ ನನಗೆ ಅದರ ಬಗ್ಗೆ ಮಾಹಿತಿ ಇಲ್ಲ. ಪವರ್ ಶೇರಿಂಗ್ ವರೆಗೆ ಡಿಕೆಶಿ ಕೆಪಿಸಿಸಿಯಲ್ಲಿ ಮುಂದುವರಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ಕಮಾಂಡ್ ಮಟ್ಟದಲ್ಲಿ ನಡೆಯುವ ವಿಚಾರ ಅದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.