Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಪಾನ್ ಕಾನ್ಸುಲ್ ಜನರಲ್ ಜೊತೆ ಸಚಿವ ಶರಣ ಪ್ರಕಾಶ್ ಪಾಟೀಲ್ ಚರ್ಚೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಪಾನ್ ಕಾನ್ಸುಲ್ ಜನರಲ್ ಜೊತೆ ಸಚಿವ ಶರಣ ಪ್ರಕಾಶ್ ಪಾಟೀಲ್ ಚರ್ಚೆ

Bengaluru City

ಜಪಾನ್ ಕಾನ್ಸುಲ್ ಜನರಲ್ ಜೊತೆ ಸಚಿವ ಶರಣ ಪ್ರಕಾಶ್ ಪಾಟೀಲ್ ಚರ್ಚೆ

Public TV
Last updated: May 14, 2025 8:44 pm
Public TV
Share
2 Min Read
SHARANA PRAKASH PATIL
SHARE

– ಕರ್ನಾಟಕದ ಕೌಶಲ್ಯಪೂರ್ಣ ಕಾರ್ಯಪಡೆಯತ್ತ ಕಣ್ಣು ನೆಟ್ಟ ಜಪಾನ್‌

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಕರ್ನಾಟಕದ ಕೌಶಲ್ಯಪೂರ್ಣ ವೃತ್ತಿಪರರ ಅಗತ್ಯವಿದೆ ಎಂದು ಜಪಾನ್ ಮನವಿ ಮಾಡಿದೆ. ಈ ನಿಟಿನಲ್ಲಿ ಕ್ರಮ ಕೈಗೊಳ್ಳಲು ಮುಂದಾಗಿದ್ದೇವೆ. ಜಪಾನ್ ಜೊತೆ ಸಹಕಾರಕ್ಕೆ ಬದ್ಧ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್(Sharan Prakash Patil) ತಿಳಿಸಿದರು.

ಬುಧವಾರ ಬೆಂಗಳೂರಿನ(Bengaluru) ವಿಕಾಸ ಸೌಧದಲ್ಲಿ ಜಪಾನ್‌ನ ಕಾನ್ಸುಲ್-ಜನರಲ್(Consul General of Japan) ನಕೇನ್ ಸ್ಟಮೊ ಅವರೊಂದಿಗೆ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ತಾಂತ್ರಿಕ ಮತ್ತು ವಿಶೇಷ ಕೋರ್ಸ್ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸುವ ತುರ್ತು ಅಗತ್ಯವಿದೆ ಎಂದು ಹೇಳಿದರು. ಇದನ್ನೂ ಓದಿ: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ಬಿಡುಗಡೆಯಾಗಿಲ್ಲ: ಸಿಎಂ ಕಿಡಿ

ನಮ್ಮ ಸರ್ಕಾರವು ಈಗಾಗಲೇ ಕೇಂದ್ರೀಕೃತ ಕೌಶಲ್ಯವರ್ಧನೆಯ ಮೂಲಕ ಐಟಿಐ ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳ ಉದ್ಯೋಗ ಸಾಮರ್ಥ್ಯವನ್ನು ಹೆಚ್ಚಿಸಲು ಮುಂದಾಗಿದೆ. ಜಾಗತಿಕ ಉದ್ಯೋಗ(Global Employment) ಅವಕಾಶಗಳ ಮೇಲೆ ಒತ್ತು ನೀಡುವ ಮೂಲಕ ಜಪಾನೀಸ್, ಜರ್ಮನ್ ಮತ್ತು ಇಂಗ್ಲಿಷ್ ಸೇರಿದಂತೆ ವಿದೇಶಿ ಭಾಷಾ ತರಬೇತಿಯನ್ನು ಪರಿಚಯಿಸುವ ಯೋಜನೆಯನ್ನು ಘೋಷಿಸಿದೆ. ಇಲಾಖೆಯ ನಿಯೋಗವು ಶೀಘ್ರದಲ್ಲೇ ಜಪಾನ್‌ಗೆ ಭೇಟಿ ನೀಡಿ ಅದರ ಕಾರ್ಯಪಡೆಯ ಮಾದರಿಯನ್ನು ಅಧ್ಯಯನ ಮಾಡಲಿದೆ ಎಂದರು. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್ – 31 ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಜಪಾನ್‌ನ ಕಾನ್ಸುಲ್-ಜನರಲ್ ನಕೇನ್ ಸ್ಟಮೊ ಅವರು ಮಾತನಾಡಿ, ವಿವಿಧ ಕ್ಷೇತ್ರಗಳಲ್ಲಿ ಕೌಶಲ್ಯಪೂರ್ಣ ವೃತ್ತಿಪರರರು, ನರ್ಸ್ಗಳ ಅಗತ್ಯವಿದೆ. ಜಪಾನ್‌ನಲ್ಲಿ ಕಾರ್ಯಪಡೆಯ ಕೊರತೆ ಇದೆ. ವಿಶೇಷವಾಗಿ ಆರೋಗ್ಯ ರಕ್ಷಣೆ, ಐಟಿ ಮತ್ತು ತಾಂತ್ರಿಕ ಕ್ಷೇತ್ರದಲ್ಲಿ ಕೌಶಲ್ಯಗಾರರ ಅಗತ್ಯವಿದೆ. ರಾಜ್ಯದಿಂದ ಪ್ರತಿಭೆಗಳನ್ನು ನೇಮಿಸಿಕೊಳ್ಳಲು ಉತ್ಸುಕವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಭಾರತ ಕೆಣಕಿ ಹೋಳಾದ ಪಾಕಿಸ್ತಾನ – ಸ್ವತಂತ್ರ ದೇಶ ಘೋಷಿಸಿಕೊಂಡ ಬಲೂಚಿಸ್ತಾನ

ಜಪಾನ್‌ನಲ್ಲಿ ಈಗ ವಯಸ್ಸಾದವರ ಸಂಖ್ಯೆ ಹೆಚ್ಚಾಗಿದೆ. ಜನಸಂಖ್ಯೆ ಕ್ಷೀಣಿಸುತ್ತಿದೆ. 2030ರ ವೇಳೆಗೆ, ಐಟಿ ವಲಯದಲ್ಲಿ 7,90,000 ವೃತ್ತಿಪರರ ಕೊರತೆ ಎದುರಾಗುವ ನಿರೀಕ್ಷೆಯಿದೆ. ವೈಟ್-ಕಾಲರ್ ತಜ್ಞರ ಜೊತೆ ಕೌಶಲ್ಯಪೂರ್ಣ ತಂತ್ರಜ್ಞರ ಅಗತ್ಯವಿದೆ. ದಾದಿಯರ ಅಗತ್ಯವೂ ಹೆಚ್ಚುತ್ತಿದೆ ಎಂದರು. ಇದನ್ನೂ ಓದಿ: ಸೋಫಿಯಾ‌ ವಿರುದ್ಧ ಅವಹೇಳನಕಾರಿ ಹೇಳಿಕೆ – ಮಧ್ಯಪ್ರದೇಶದ ಮಂತ್ರಿ ವಿರುದ್ಧ ಎಫ್‌ಐಆರ್‌ಗೆ ಸೂಚನೆ

ಬೆಂಗಳೂರಿನಲ್ಲಿ ಜಪಾನ್‌ನ ಕಂಪನಿಗಳು ಸ್ಥಳೀಯ ನರ್ಸಿಂಗ್ ಪದವೀಧರರ ಸುಗಮ ಉದ್ಯೋಗಕ್ಕೆ ಅನುಕೂಲವಾಗುವಂತೆ ಸಿಎಸ್‌ಆರ್ ಉಪಕ್ರಮಗಳ ಅಡಿಯಲ್ಲಿ ಜಪಾನೀಸ್ ಭಾಷೆ ಮತ್ತು ಕೌಶಲ್ಯ ತರಬೇತಿಯನ್ನು ನೀಡಲು ಸಿದ್ಧವಾಗಿವೆ. ಕೈಗಾರಿಕಾ ಉತ್ಪಾದನೆ, ನಿರ್ಮಾಣ, ಹಡಗು ನಿರ್ಮಾಣ, ಯಂತ್ರೋಪಕರಣಗಳ ನಿರ್ವಹಣೆ, ಆಟೋ ದುರಸ್ತಿ, ವಾಯುಯಾನ, ಆತಿಥ್ಯ, ಸಾರಿಗೆ, ರೈಲ್ವೆ, ಕೃಷಿ, ಮೀನುಗಾರಿಕೆ, ಜಲಚರ ಸಾಕಣೆ, ಆಹಾರ ಸೇವೆಗಳು, ಅರಣ್ಯ ಮತ್ತು ಮರ ಸಂಸ್ಕರಣೆ ಮುಂತಾದ ಕ್ಷೇತ್ರಗಳಲ್ಲಿ ಬೇಡಿಕೆ ಇದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: Boycott Turkey – ಸೇಬು, ಚೆರ‍್ರಿ, ಮಾರ್ಬಲ್‌ಗಳ ಆಮದು ಬ್ಯಾನ್‌ಗೆ ನಿರ್ಧಾರ

ಈ ನಿಟ್ಟಿನಲ್ಲಿ ಕರ್ನಾಟಕದೊಂದಿಗೆ ಜಪಾನ್ ಸಹಕರಿಸಲು ಸಿದ್ಧವಾಗಿದೆ. ಕಾರ್ಯಪಡೆಯ ಅಭಿವೃದ್ಧಿಯಲ್ಲಿ ಎಲ್ಲಾ ರೀತಿಯ ಬೆಂಬಲವನ್ನು ನೀಡಲಾಗುವುದು ಎಂದರು.

TAGGED:bengaluruGlobal employmentjapanSharan Prakash Patilಜಪಾನ್ಜಾಗತಿಕ ಉದ್ಯೋಗಬೆಂಗಳೂರುಶರಣ ಪ್ರಕಾಶ್ ಪಾಟೀಲ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

krs party worker arrest
Latest

ಗೃಹಸಚಿವರನ್ನು ಪ್ರಶ್ನೆ ಮಾಡಿದ ಕೆಆರ್‌ಎಸ್ ಪಕ್ಷದ ‌ಮುಖಂಡ ಬಂಧನ

Public TV
By Public TV
33 minutes ago
Bhutnal Lake
Bengaluru City

ಪ್ರವಾಸಕ್ಕೆ ಹೋಗಿದ್ದ ಬೆಂಗ್ಳೂರಿನ ಮೂವರು ಕೆರೆಯಲ್ಲಿ ಮುಳುಗಿ ಸಾವು

Public TV
By Public TV
50 minutes ago
Strait of Hormuz Ships
Latest

ಒಂದು ಬ್ಯಾರಲ್‌ ತೈಲಕ್ಕೆ 1 ಡಾಲರ್‌ ತೆರಿಗೆ – ಕ್ರಿಪ್ಟೋ ಕರೆನ್ಸಿಯಲ್ಲಿ ಟ್ಯಾಕ್ಸ್‌ ಪಾವತಿಗೆ ಇರಾನ್‌ ಡಿಮ್ಯಾಂಡ್‌

Public TV
By Public TV
2 hours ago
Sanjay Malhotra
Latest

ರೆಪೋ ದರ ಯಥಾಸ್ಥಿತಿ ಮುಂದುವರಿಸಲು RBI ನಿರ್ಧಾರ

Public TV
By Public TV
2 hours ago
Bengaluru Nayandhalli
Bengaluru City

ಆಟವಾಡ್ತಾ ಮೂರನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು – ಮಗಳ ಸ್ಥಿತಿ ಕಂಡು ತಾಯಿ ಮೂರ್ಛೆ

Public TV
By Public TV
3 hours ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಪ್ರಕರಣ – 24 ಗಂಟೆ ಕಳೆದ್ರೂ ಸಿಗದ ಸುಳಿವು

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?