Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಟ್ರಸ್ಟ್‌ಗಳ ಕಾರ್ಯನಿರ್ವಹಣೆಗೆ ಹೆಚ್ಚಿನ ಬಲ: ಶಿವರಾಜ್ ತಂಗಡಗಿ

Public TV
Last updated: June 10, 2023 3:40 pm
Public TV
Share
2 Min Read
trust 1
SHARE

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವ ವಿವಿಧ ಟ್ರಸ್ಟ್‍ಗಳ ಕಾರ್ಯನಿರ್ವಹಣೆಗೆ ಹೆಚ್ಚಿನ ಬಲ ತುಂಬಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಹೇಳಿದ್ದಾರೆ.

ಕನ್ನಡ ಭವನದ ಅಂತರಂಗದಲ್ಲಿ ವಿವಿಧ ಟ್ರಸ್ಟ್ (Different Trust) ಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳೊಂದಿಗೆ ನಡೆಸಿದ ಸಮಾಲೋಚನಾ ಸಭೆಯಲ್ಲಿ ಈ ಕುರಿತು ಮಾತನಾಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ 24 ಟ್ರಸ್ಟ್ ಗಳು ಕಾರ್ಯ ನಿರ್ವಹಿಸುತ್ತಿದ್ದು, ಪ್ರತಿವರ್ಷ ಈ ಟ್ರಸ್ಟ್‍ಗಳ ಕಾರ್ಯ ಚಟುವಟಿಕೆಗಾಗಿ ಅನುದಾನ ಒದಗಿಸಲಾಗುತ್ತಿದೆ. ಈ ಟ್ರಸ್ಟ್ ಗಳು ನಡೆಸುವ ಕಾರ್ಯ ಚಟುವಟಿಕೆಗಳು ಮತ್ತು ಅವುಗಳ ಕುಂದು ಕೊರತೆ ಹಾಗೂ ಅವುಗಳ ಪರಿಹಾರಗಳನ್ನು ಕುರಿತಂತೆ ಈ ಸಮಾಲೋಚನಾ ಸಭೆಯಲ್ಲಿ ವಿಸ್ತೃತವಾದ ಚರ್ಚೆ ನಡೆಯಿತು.

ಪ್ರತಿಯೊಂದು ಟ್ರಸ್ಟ್ ಗಳ ಬಗ್ಗೆ ಮಾಹಿತಿ ಪಡೆದ ಸಚಿವರು ಜಿಲ್ಲಾ ಪ್ರವಾಸ ಮಾಡುವ ವೇಳೆ ಆಯಾ ಜಿಲ್ಲೆಗಳಲ್ಲಿರುವ ಟ್ರಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲಿಸುವುದಾಗಿ ಭರವಸೆ ನೀಡಿದರು. ಬೆಟಗೇರಿ ಕೃಷ್ಣಶರ್ಮರ ಮನೆಯನ್ನು ಸ್ಮಾರಕವಾಗಿಸುವುದರ ಬಗ್ಗೆ ಸಚಿವರ ಗಮನ ಸೆಳೆಯಲಾಯಿತು. ಸಚಿವರು ಅದಕ್ಕೆ ಪೂರಕವಾಗಿ ಸ್ಪಂದಿಸಿ ಈ ಬಗ್ಗೆ ವಿವರಗಳನ್ನು ತರಿಸಿಕೊಳ್ಳುತ್ತೇನೆ ಎಂದು ಹೇಳಿದರು.

ಗುಬ್ಬಿ ವೀರಣ್ಣ ರಂಗಮಂದಿರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಾಜಿ ಸಂಸದೆ ಬಿ.ಜಯಶ್ರೀ, ಅನುದಾನ ಹೆಚ್ಚಳಕ್ಕೆ ಮನವಿ ಮಾಡಿದರು ಹಾಗೂ ಅದರ ಕಾರ್ಯ ಚಟುವಟಿಕೆ ವೀಕ್ಷಿಸಲು ಮಾನ್ಯ ಸಚಿವರನ್ನು ಆಹ್ವಾನಿಸಿದರು. ಅವರಿಗೆ ಪೂರಕವಾಗಿ ಸ್ಪಂದಿಸಿದ ಸಚಿವರು ಭೇಟಿಗೆ ಒಪ್ಪಿಗೆ ಸೂಚಿಸಿ ಅನುದಾನ ಹೆಚ್ಚಳ ಕುರಿತಂತೆ ಪರಿಶೀಲಿಸುವುದಾಗಿ ಭರವಸೆ ನೀಡಿದರು.

ಗಳದನಾಥ ಮತ್ತು ರಾಜ ಪುರೋಹಿತ ಟ್ರಸ್ಟ್ ಗಳು ಕಟ್ಟಡ ನಿರ್ಮಾಣಕ್ಕೆ ಎರಡು ಕೋಟಿ ಪ್ರಸ್ತಾವನೆ ಸಲ್ಲಿಸಿರುವುದಾಗಿ ಸಚಿವರ ಗಮನಕ್ಕೆ ತಂದರು. ಹಾಲಬಾವಿ ಟ್ರಸ್ಟ್ ನವರು ಹಲಭಾವಿ ಅವರ ಹೆಸರಿನಲ್ಲಿ ಆರ್ಟ್ ಗ್ಯಾಲರಿ ಒಂದನ್ನು ನಿರ್ಮಾಣ ಮಾಡಬೇಕು ಎಂಬ ಬೇಡಿಕೆಯನ್ನು ಸಚಿವರ ಮುಂದಿಟ್ಟರು. ನಿಜಲಿಂಗಪ್ಪ ಟ್ರಸ್ಟ್ ಪರವಾಗಿ ಮಾಜಿ ಸಂಸದ ಹನುಮಂತಪ್ಪ (Ex Minister Hanumantappa) ಅವರು ಮಾತನಾಡಿ ಸರ್ಕಾರಿ ಅಧಿಕಾರಿಗಳ ನೇಮಕದ ಬಗ್ಗೆ ಪರಿಶೀಲನೆ ನಡೆಸಬೇಕೆಂದು ಕೋರಿದರು.

TRUST MEETING 1

ಕುವೆಂಪು ಟ್ರಸ್ಟ್ ನ ಕಾರ್ಯದರ್ಶಿ ಕಡಿದಾಳ್ ರಮೇಶ್ (Kadidal Ramesh) ಅವರು ಮಾತನಾಡಿ ಕುವೆಂಪು ಅವರ ಮನೆಯನ್ನು ರಾಷ್ಟ್ರದ ಅತ್ಯುತ್ತಮ ಕವಿಮನೆಯನ್ನಾಗಿ ಮಾಡಿದ್ದೇವೆ. ಇದು ಇಡೀ ರಾಷ್ಟ್ರದ ಗಮನ ಸೆಳೆಯುವಂತೆ ಮಾಡಲು ಗಣರಾಜ್ಯೋತ್ಸವ ಹಾಗೂ ಸ್ವಾತಂತ್ರ್ಯೋತ್ಸವದ ಸಂದರ್ಭಗಳಲ್ಲಿ ಮತ್ತು ದಸರಾ ಪ್ರದರ್ಶನಗಳಲ್ಲಿ ಕುವೆಂಪು ಅವರ ಮನೆಯ ಟ್ಯಾಬ್ಲೋ ಮಾಡಿ ಪ್ರದರ್ಶಿಸಿದರೆ ಒಳ್ಳೆಯ ಪ್ರಚಾರ ಸಿಗುತ್ತದೆ , ಅಲ್ಲದೆ ಲಾಲ್ ಬಾಗ್ ನಲ್ಲಿ ಪ್ರತಿವರ್ಷ ಆಯೋಜಿಸುವ ಪುಷ್ಪ ಪ್ರದರ್ಶನದಲ್ಲಿ ಕುವೆಂಪು ಅವರ ಮನೆಯ ಮಾದರಿಯನ್ನು ಮಾಡಿದರೆ ಅದು ಅಸಂಖ್ಯಜನರ ಗಮನ ಸೆಳೆಯುತ್ತದೆ ಎಂದು ಮನವಿ ಮಾಡಿದರು. ಬೇಂದ್ರೆ ಟ್ರಸ್ಟ್ ವತಿಯಿಂದ ಬೇಂದ್ರೆ ಅವರ ಜನ್ಮದಿನವನ್ನು ವಿಶ್ವಕವಿ ದಿನಾಚರಣೆ ಎಂದು ಆಚರಿಸುವಂತೆ ಕೋರಲಾಯಿತು.

ನಂತರ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ಎಲ್ಲಾ ಟ್ರಸ್ಟ್ ಗಳ ಮನವಿಗಳನ್ನು ತಾವು ಅತ್ಯಂತ ಸಕಾರಾತ್ಮಕ ದೃಷ್ಟಿಯಿಂದಲೇ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುತ್ತೇನೆ ಟ್ರಸ್ಟ್ ಗಳ ಕಾರ್ಯನಿರ್ವಹಣೆಗೆ ಅಗತ್ಯವಾದ ಅನುದಾನ ಹೆಚ್ಚಿಸಲು ತಾವು ಮುಂಬರುವ ಆಯವ್ಯಯದಲ್ಲಿ ಹೆಚ್ಚಿನ ಅನುದಾನವನ್ನು ಕೊಡುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ ಎಂದು ಭರವಸೆ ನೀಡಿದರು.

TAGGED:bengalurushivaraj tangadagi. trustಟ್ರಸ್ಟ್ಬೆಂಗಳೂರುಶಿವರಾಜ್ ತಂಗಡಗಿ
Share This Article
Facebook Whatsapp Whatsapp Telegram

Cinema Updates

kamal haasan thug life
‘ಥಗ್‌ ಲೈಫ್‌’ ಟೀಂ ಉದ್ಧಟತನ ಬಟಾಬಯಲು – ಕನ್ನಡ ಬಿಟ್ಟು 4 ಭಾಷೆಗಳಿಗೆ ಸಿನಿಮಾ ಡಬ್‌
1 hour ago
Trisha
ಥಗ್‌ ಲೈಫ್ ಚಿತ್ರಕ್ಕೆ ʻಶುಗರ್‌ ಬೇಬಿʼ ಪಡೆದ ಸಂಭಾವನೆ ಎಷ್ಟು ಗೊತ್ತಾ?
2 hours ago
pawan kalyan sharmista panoli
ಪುಣೆ ಕಾನೂನು ವಿದ್ಯಾರ್ಥಿನಿ ಪರ ನಿಂತ ಪವನ್‌ ಕಲ್ಯಾಣ್‌ – ದೀದಿ ಹೇಳಿಕೆಗೆ ಖಂಡನೆ
6 hours ago
Mukhyamantri Chandru
ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು
7 hours ago

You Might Also Like

DK Shivakumar
Bengaluru City

ಬೆಂಗಳೂರು ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆಯೇ ಹೆಚ್ಚು – ಡಿಕೆಶಿ

Public TV
By Public TV
5 minutes ago
IndiGo Flight Delhi Rain
Karnataka

ದೆಹಲಿ | ಲ್ಯಾಂಡಿಂಗ್‌ ವೇಳೆ ತೀವ್ರ ಪ್ರಕ್ಷುಬ್ಧತೆ – 38 ನಿಮಿಷ ಆಕಾಶದಲ್ಲೇ ಗಿರಕಿ ಹೊಡೆದು ಲ್ಯಾಂಡ್‌ ಆದ ಇಂಡಿಗೋ ಫ್ಲೈಟ್

Public TV
By Public TV
37 minutes ago
covid schools
Bengaluru City

ಜ್ವರ, ಕೆಮ್ಮು, ನೆಗಡಿ ಲಕ್ಷಣ ಇರೋ ಮಕ್ಕಳು ಶಾಲೆಗೆ ಹೋಗೋದು ಬೇಡ: ಶಾಲೆಗಳಿಗೆ ಸರ್ಕಾರ ಗೈಡ್‌ಲೈನ್ಸ್‌

Public TV
By Public TV
2 hours ago
Heavy Rain in Northeast states
Latest

ಕೇರಳದಿಂದ ಈಶಾನ್ಯ ರಾಜ್ಯಗಳವರೆಗೂ ನಿಲ್ಲದ ವರುಣನ ಅಬ್ಬರ – ಮಳೆಯಾರ್ಭಟಕ್ಕೆ 30ಕ್ಕೂ ಹೆಚ್ಚು ಬಲಿ

Public TV
By Public TV
2 hours ago
Dinesh Gundu Rao 2
Dakshina Kannada

ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಬೇಡ ಎಂದಿಲ್ಲ: ದಿನೇಶ್ ಗುಂಡೂರಾವ್

Public TV
By Public TV
3 hours ago
MI vs PBKS rain
Cricket

ಪಂಜಾಬ್‌ vs ಮುಂಬೈ ಕ್ವಾಲಿಫೈಯರ್ 2 ಪಂದ್ಯಕ್ಕೆ ಮಳೆ ಅಡ್ಡಿ – ಮ್ಯಾಚ್‌ ರದ್ದಾದ್ರೆ ಯಾರಿಗೆ ನಷ್ಟ?

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?