Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಸತ್‌ನಲ್ಲಿ ಸ್ಮೋಕ್ ಬಾಂಬ್ ದಾಳಿ ಹಿಂದೆ ಬಿಜೆಪಿ ಕೈವಾಡ: ಸಚಿವ ತಂಗಡಗಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Koppal | ಸಂಸತ್‌ನಲ್ಲಿ ಸ್ಮೋಕ್ ಬಾಂಬ್ ದಾಳಿ ಹಿಂದೆ ಬಿಜೆಪಿ ಕೈವಾಡ: ಸಚಿವ ತಂಗಡಗಿ

Koppal

ಸಂಸತ್‌ನಲ್ಲಿ ಸ್ಮೋಕ್ ಬಾಂಬ್ ದಾಳಿ ಹಿಂದೆ ಬಿಜೆಪಿ ಕೈವಾಡ: ಸಚಿವ ತಂಗಡಗಿ

Public TV
Last updated: December 22, 2023 11:47 pm
Public TV
Share
2 Min Read
shivaraj tangadagi protest
SHARE

ಆರೋಪಿಗಳು ಅಬ್ದುಲ್, ನಜೀರ್, ಖಾನ್ ಆಗಿದ್ರೆ ಬಿಜೆಪಿಗರು ಚಿತ್ರಣವನ್ನೇ ಬೇರೆಯಾಗಿಸ್ತಿದ್ರು

ಕೊಪ್ಪಳ: ದೆಹಲಿಯ ಪಾರ್ಲಿಮೆಂಟ್ ಒಳಗೆ‌ ನುಗ್ಗಿ ಅಧಿವೇಶನದ ವೇಳೆ ನಡೆದ ಸ್ಮೋಕ್ ಬಾಂಬ್ ದಾಳಿಯ ಹಿಂದೆ ಬಿಜೆಪಿ ನಾಯಕರ ಕೈವಾಡ ಇದೆ ಎಂದು‌ ಸಚಿವ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ (Shivaraj Tangadagi) ಆರೋಪಿಸಿದರು.

ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ, ಅಧಿವೇಶನದಿಂದ ಸಂಸದರನ್ನು ಅಮಾನತು ಮಾಡಿದ ನಡೆ ಖಂಡಿಸಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಇಂದು (ಶುಕ್ರವಾರ) ಮಾತನಾಡಿದರು. ಕೇಂದ್ರ ಸರ್ಕಾರದ ಭದ್ರತೆ ವೈಫಲ್ಯದಿಂದಲೇ ಸ್ಮೋಕ್ ಬಾಂಬ್ ದಾಳಿ ನಡೆದಿದೆ.‌ ಘಟನೆ ಕುರಿತು ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ, ಉತ್ತರಿಸುವಂತೆ ಪಟ್ಟು ಹಿಡಿದ ಒಟ್ಟು 145 ಸಂಸದರನ್ನು ಅಮಾನತು ಮಾಡಿ, ಹೊರಗೆ ಹಾಕಲಾಗಿದೆ. ಬಿಜೆಪಿಗರು ತಮ್ಮ ಲೋಪ ಮುಚ್ಚಿ ಹಾಕಲು ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ಕಗ್ಗೊಲೆ, ಸರ್ವಾಧಿಕಾರಿ ಧೋರಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ದಾಳಿಯ ಮಾಸ್ಟರ್‌ ಮೈಂಡ್‌ ಮೈಸೂರಿಗ ಮನೋರಂಜನ್‌: ದೆಹಲಿ ಪೊಲೀಸರು

Huge Parliament Security Breach Lok Sabha Speaker ombirla bans visitor gallery passes 1

ದಾಳಿ ಮಾಡಿದವರಿಗೆ ನಮ್ಮ ರಾಜ್ಯದ ಸಂಸದ ಪ್ರತಾಪ್ ಸಿಂಹ ಪಾಸ್ ನೀಡಿದ್ದಾರೆ.‌ ಆದರೆ‌ ಪೊಲೀಸರು ಪ್ರತಾಪ್ ಸಿಂಹ ಅವರ ವಿಚಾರಣೆ ನಡೆಸಿಲ್ಲ. ಅವರ ಮೇಲೆ ಕ್ರಮ ಆಗಿಲ್ಲ. ಒಂದೊಮ್ಮೆ ಆರೋಪಿತರ ಹೆಸರುಗಳು ಅಬ್ದುಲ್, ನಜೀರ್, ಖಾನ್ ಆಗಿದ್ದರೆ ಬಿಜೆಪಿಗರು ಇದರ ಚಿತ್ರಣವೇ ಬೇರೆ ಆಗಿಸುತ್ತಿದ್ದರು. ಈ ಬಗ್ಗೆ ಮಾತನಾಡದ ಮೈಸೂರಿನ ಸಿಂಹ ಈಗ ಕಾಡಿಗೆ ಹೋಗಿದೆ ಎಂದು ಸಂಸದ ಪ್ರತಾಪ್ ಸಿಂಹ ಬಗ್ಗೆ ಲೇವಡಿ ಮಾಡಿದರು.

ರಾಜ್ಯಸಭೆ ಛೇರ್ಮನ್ ಹಾಗೂ ಉಪ ರಾಷ್ಟ್ರಪತಿ ಬಗ್ಗೆ ಅಣಕು ಮಾಡಿದರು ಎಂದು ಸ್ಥಳೀಯ ಬಿಜೆಪಿ ನಾಯಕರು ಪ್ರತಿಭಟನೆ ಮಾಡಿದ್ದಾರೆ. ಹಾಗಿದ್ದರೆ ಅಣಕು ಮಾಡುವವರನ್ನೆಲ್ಲ ದೇಶದಿಂದ ಹೊರಗೆ ಹಾಕಿ. ಅಣಕು ಮಾಡುವುದೊಂದು ಕಲೆ. ರಾಜಕೀಯ ನಾಯಕರನ್ನು ಅಣಕು ಮಾಡುವುದು ಸಹಜ. ಇದು ಪ್ರತಿಭಟನಾ ಸ್ವಾತಂತ್ರ್ಯಕ್ಕೆ ಧಕ್ಕೆ. ಕಲಾವಿದರಿಗೆ ಅವಮಾನ ಮಾಡಿದಂತೆ.‌ ಸಂಸತ್ ಭವನಕ್ಕೆ ಭದ್ರತೆ ಕೊಡಲು ವಿಫಲರಾದವರು ದೇಶಕ್ಕೇನು ಭದ್ರತೆ ನೀಡುತ್ತಾರೆ? ನೀವು ದೇಶ ಭಕ್ತರಲ್ಲ, ಮೋದಿ ಭಕ್ತರು ಎಂದು ಕಿಡಿಕಾರಿದರು. ಇದನ್ನೂ ಓದಿ: ಸ್ವಂತ ಮನೆಯಲ್ಲಿ ಪಿಜಿ ಮಾದರಿ ವಾಸ ಮಾಡ್ತಿದ್ದ ಮನೋರಂಜನ್

PRATAP SIMHA

ಅಧಿವೇಶನದಲ್ಲಿ ರೈತರು, ನಿರುದ್ಯೋಗ‌ ಸಮಸ್ಯೆ ಬಗ್ಗೆ ಮಾತನಾಡುವುದಿಲ್ಲ.‌ ಬದಲಿಗೆ ರಾಮನ ಬಗ್ಗೆ ಮಾತನಾಡುತ್ತಿದ್ದಾರೆ. ಪ್ರಧಾನಿ ಮೋದಿ ಕಳೆದ ಒಂಬತ್ತು ವರ್ಷದಲ್ಲಿ ಮಾಧ್ಯಮದ ಮುಂದೆ ಬಂದು ಮಾತನಾಡಿಲ್ಲ. ಮನ್ ಕಿ ಬಾತ್‌ನಿಂದ ದೇಶದ ಜನರ ಹೊಟ್ಟೆ ತುಂಬಲ್ಲ. ದೇಶದಲ್ಲಿ ಹಿಟ್ಲರ್ ಆಡಳಿತವಿದೆ ಎಂದು ಕುಟುಕಿದರು.

ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮಾತನಾಡಿ, ಸಂಸದರನ್ನು ಅಧಿವೇಶನದಿಂದ ಅಮಾನತು ಮಾಡಿರುವುದು ಸರ್ವಾಧಿಕಾರಿ ಧೋರಣೆ. ಈ ದುರ್ಘಟನೆ ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಕೇಂದ್ರ ಸರ್ಕಾರದ ಸಂಪೂರ್ಣ ವೈಫಲ್ಯ ಕಾರಣ. ಪುಲ್ವಾಮಾ ದಾಳಿ, ಸಂಸದರ ಅಮಾನತು ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ. ಅಹಂ, ಅಹಂಕಾರ, ಮದ, ಮತ್ಸರಗಳಿಂದ ತುಂಬಿರುವ ಕೇಂದ್ರ ಸರ್ಕಾರ ವಿರೋಧ ಪಕ್ಷದ ನಾಯಕರ ಮೇಲೆ ಇ.ಡಿ, ಸಿಬಿಐ ದಾಳಿ ಮಾಡಿಸುತ್ತಿದೆ. ಇದು ದೇಶದ ಜನತೆಗೆ ನೀಡಿರುವ ಕೆಟ್ಟ ಸಂದೇಶ ಎಂದರು.

TAGGED:KoppalParliament Security BreachShivaraj Tangadagiಕೊಪ್ಪಳಲೋಕಸಭಾ ಭದ್ರತಾ ಲೋಪಶಿವರಾಜ್ ತಂಗಡಗಿ
Share This Article
Facebook Whatsapp Whatsapp Telegram

Cinema news

vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema
Samhita Vinya
ಸಾಲು ಸಾಲು ಚಿತ್ರಗಳಲ್ಲಿ ಸಂಹಿತಾ ವಿನ್ಯಾ ಬ್ಯುಸಿ – ‘ಮಿಕ್ಸಿಂಗ್ ಪ್ರೀತಿ’ ಫೆ.20 ರಂದು ತೆರೆಗೆ
Crime Latest Sandalwood

You Might Also Like

Krishna Byre Gowda
Districts

ಹೊಳೆನರಸೀಪುರ | ಶಾಲೆಗೆ ತೆರಳಿ ಬಿಸಿಯೂಟ ಸವಿದ ಸಚಿವ ಕೃಷ್ಣಭೈರೇಗೌಡ

Public TV
By Public TV
21 minutes ago
Rajasthan Bhiwadi Blast
Crime

ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ – 7 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ

Public TV
By Public TV
25 minutes ago
Three guilty in murder case and Israeli Tourist Rape case
Court

ಇಸ್ರೇಲ್‌ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ, ಓರ್ವನ ಹತ್ಯೆ ಕೇಸ್‌ – ಮೂವರ ಅಪರಾಧ ಸಾಬೀತು

Public TV
By Public TV
28 minutes ago
mahadevappa
Bengaluru City

ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ? – ನಾಯಕತ್ವ ಚರ್ಚೆಯನ್ನು ನಾಯಿಗೆ ಹೋಲಿಸಿದ ಮಹದೇವಪ್ಪ

Public TV
By Public TV
55 minutes ago
SUBBAREDDY
Bengaluru City

ಬಾಗೇಪಲ್ಲಿ `ಕೈ’ ಶಾಸಕ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು: ಹೈಕೋರ್ಟ್‌ ಆದೇಶ

Public TV
By Public TV
1 hour ago
M.K. Faizy
Court

PFI ಅಕ್ರಮ ಹಣ ವರ್ಗಾವಣೆ ಕೇಸ್ – ದೆಹಲಿ ಹೈಕೋರ್ಟ್‌ನಿಂದ ಎಸ್‌ಡಿಪಿಐ ಅಧ್ಯಕ್ಷ ಫೈಜಿಗೆ ಜಾಮೀನು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?