Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Corona

ಕೊಡಗಿನಲ್ಲಿ ವಾರದ 4 ದಿನಗಳು ಮಾತ್ರ ಅಂಗಡಿಗಳು ಓಪನ್

Public TV
Last updated: April 28, 2020 5:07 pm
Public TV
Share
2 Min Read
MDK SOMANNA
SHARE

ಮಡಿಕೇರಿ: ಜಿಲ್ಲೆಯಲ್ಲಿ ಬೆಳಗ್ಗೆ 6 ರಿಂದ 4 ಗಂಟೆವರೆಗೆ ಅಗತ್ಯ ವಸ್ತುಗಳನ್ನು ದಿನಸಿ ಅಂಗಡಿಗಳಲ್ಲಿ ಮಾರಾಟ ಮಾಡಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೊವೀಡ್-19 ಸಂಬಂಧ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಸೋಮಣ್ಣ, ಜಿಲ್ಲೆ ಕೊರೊನಾ ವಿಷಯದಲ್ಲಿ ಹಸಿರು ವಲಯದಲ್ಲಿ ಇರುವುದರಿಂದ ವಾರದಲ್ಲಿ 4 ದಿನಗಳು ಅಂದರೆ ಭಾನುವಾರ, ಸೋಮವಾರ, ಬುಧವಾರ ಹಾಗೂ ಶುಕ್ರವಾರ ಬೆಳಗ್ಗೆ 6 ರಿಂದ 4 ಗಂಟೆವರೆಗೆ ಅಗತ್ಯ ವಸ್ತುಗಳನ್ನು ಮಾರಾಟ ಮಾಡಬಹುದು ಎಂದು ತಿಳಿಸಿದರು.

mdk 7

ಸಂತೆ, ಜಾತ್ರೆ, ಪ್ರವಾಸಿ ತಾಣಗಳು, ಚರ್ಚ್, ಮಸೀದಿ, ಪ್ರಾರ್ಥನಾ ಮಂದಿರಗಳು ಹಾಗೆಯೇ ಮದ್ಯ ಸೇರಿದಂತೆ ತಂಬಾಕು ಉತ್ಪನ್ನಗಳು ಎಂದಿನಂತೆ ಸಂಪೂರ್ಣ ಬಂದ್ ಆಗಿರಲಿವೆ. ಹೋಟೆಲ್‍ಗಳಲ್ಲಿ ಕೇವಲ ಪಾರ್ಸೆಲ್ ವ್ಯವಸ್ಥೆ ಇರಲಿದೆ. ಜಿಲ್ಲಾಡಳಿತ, ಶಾಸಕರು ಹಾಗೂ ಜನಪ್ರತಿನಿಧಿಗಳ ದೂರ ದೃಷ್ಟಿ ಚಿಂತನೆ, ಮುಂದಾಲೋಚನೆಯಿಂದ ಜಿಲ್ಲೆಯಲ್ಲಿ ಪ್ರಾರಂಭವಾದ ಒಂದು ಕೊರೊನಾ ಪ್ರಕರಣವನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಸೋಮಣ್ಣ ಹೇಳಿದರು.

ಮಂಡ್ಯ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ಧಾರವಾಡದಲ್ಲಿ ಅಂಗಡಿ ಮತ್ತು ಕೈಗಾರಿಕೆಗೆ ಅನುಮತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರ ನಿರ್ಧಾರಕ್ಕೆ ಬಿಡಲಾಗಿದೆ.

MDK 2 3

ಇದೇ ವೇಳೆ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ಕೆಲವೇ ದಿನಗಳಲ್ಲಿ ಮಳೆ ಪ್ರಾರಂಭವಾಗಲಿದೆ. ನದಿಗಳಲ್ಲಿ ಹೂಳು ತುಂಬಿದೆ. ಕಳೆದೆರಡು ವರ್ಷಗಳಿಂದ ಸುರಿದ ಮಳೆಯಿಂದ ಕುಶಾಲನಗರ ಭಾಗದಲ್ಲಿ ತೀರ ಸಂಕಷ್ಟ ಎದುರಿಸುವಂತಾಗಿತ್ತು. ಆದ್ದರಿಂದ ಸಚಿವರು ಹೊಲ, ಗದ್ದೆಗಳಲ್ಲಿ ತುಂಬಿರುವ ಮರಳನ್ನು ತೆಗೆಯಲು ಆದೇಶ ನೀಡಬೇಕು. ಕೆಲವರು ಮನೆಗಳಿಗೆ ಜೆಲ್ಲಿ, ಎಂ.ಸ್ಯಾಂಡ್ ತೆಗೆಯಲು ಅನುಮತಿ ಕೊಡುತ್ತಿಲ್ಲ ಎಂದರು.

ಮಳೆಗಾಲ ಸಮೀಪದಲ್ಲಿದೆ. ಸರ್ಕಾರವೇ ಅಧಿಕೃತವಾಗಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ಕೊಟ್ಟಿರುವುದರಿಂದ ಮನೆಗಳ ನಿರ್ಮಾಣಕ್ಕೆ ಸಮಸ್ಯೆ ಕೊಡಬೇಡಿ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗೆ ಸಚಿವ ಸೊಮಣ್ಣ ತಾಕೀತು ಮಾಡಿದರು.

MDK 1 6

ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ, ಜಿಲ್ಲೆಯ ಹಲವು ಕಾಮಗಾರಿಗಳನ್ನು ಮೈಸೂರಿನವರಿಗೆ ಕೊಡಲಾಗಿದೆ. ಕುಟ್ಟ-ಮಾಕುಟ್ಟ ರಸ್ತೆ ಕೆಲಸವನ್ನು ಮಳೆಗಾಲಕ್ಕೂ ಮೊದಲೇ ಪೂರ್ಣಗೊಳಿಸಬೇಕು. ಕೋ ಆಪರೇಟಿವ್ ಸೊಸೈಟಿಗಳಲ್ಲಿ ಸರ್ಕಾರ 1 ಲಕ್ಷದವರಗೆ ಸಾಲ ಮನ್ನಾ ಮಾಡಿದೆ. ಆದರೆ ಈ ಯೋಜನೆ ಜಿಲ್ಲೆಯಲ್ಲಿ ಹಲವರಿಗೆ ತಲುಪಿಲ್ಲ. ಹಲವೆಡೆ ಉತ್ತಮ ಬಾಳೆ ಬೆಳೆ ಬೆಳೆದಿದ್ದು, ಇದರ ಮಾರಾಟಕ್ಕೆ ಜಿಲ್ಲಾಡಳಿತ ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಸಂಪಾಜೆ ಚೆಕ್‍ಪೋಸ್ಟ್ ಬಳಿ ಕಾಸರಗೋಡು ಭಾಗದಿಂದ ಜಿಲ್ಲೆಯ ಒಳಗೆ ಬರುತ್ತಿದ್ದಾರೆ. ಚೆಕ್‍ಪೋಸ್ಟ್ ಒಳಗೆ ಬರುವ ಮೊದಲು ಗುರುತಿನ ಚೀಟಿ ನೋಡಿ. ಹೊರ ಜಿಲ್ಲೆಗಳಿಂದ ಹಂದಿ ಹಾಗೂ ಮೀನುಗಳನ್ನು ತರಿಸಿಕೊಳ್ಳುವುದು ಬೇಡ. ಈಗಾಗಲೇ ಮಂಗಳೂರಿನಿಂದ ಮೀನುಗಳು ಬರುತ್ತಿದ್ದು, ಇದಕ್ಕೆಲ್ಲ ಕಡಿವಾಣ ಹಾಕಬೇಕು ಎಂದು ಶಾಸಕ ಬೋಪಯ್ಯ ಹೇಳಿದರು.

mdk 8

ಅಗತ್ಯ ವಸ್ತುಗಳನ್ನು ಮಾತ್ರ ಚೆಕ್‍ಪೋಸ್ಟ್ ಮೂಲಕ ಬರುತ್ತಿದ್ದಾರೆ. ಅಗತ್ಯ ವಸ್ತುಗಳನ್ನು ತರಬೇಕಾದರೆ ಆರೋಗ್ಯ ತಪಾಸಣೆ ದೃಢೀಕರಣ ಪತ್ರ ಪರಿಶೀಲಿಸಲು ಕಷ್ಟ ಆಗುತ್ತದೆ ಎಂದು ಎಸ್‍ಪಿ ಸುಮನ್ ಡಿ.ಪನ್ನೇಕರ್ ತಿಳಿಸಿದರು. ಇದೊಂದು ಸೂಕ್ಷ್ಮ ವಿಚಾರ. ಕೆಲವು ನಿಬಂಧನೆಗಳಿಗೆ ನಾವೂ ಒಳಪಡಬೇಕಾಗಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಸಹಕರಿಸಬೇಕು. ಎಂದರು.

TAGGED:CoronaLockdownmadikerimeetingPublic TVShopsSomannaಅಂಗಡಿಗಳುಕೊರೊನಾಪಬ್ಲಿಕ್ ಟಿವಿಮಡಿಕೇರಿಲಾಕ್‍ಡೌನ್ಸಭೆಸೋಮಣ್ಣ
Share This Article
Facebook Whatsapp Whatsapp Telegram

Cinema Updates

Arjun Janya
ಅರ್ಜುನ್ ಜನ್ಯ ನಿರ್ದೇಶನದ ಚಿತ್ರಕ್ಕೆ ಉಗಾಂಡ ಕಲಾವಿದರ ಮೆರಗು
16 minutes ago
Timmana Mottegalu 4
ತಿಮ್ಮನ ಮೊಟ್ಟೆಗಳು ಟ್ರೈಲರ್‌ಗೆ ಭಾರೀ ಮೆಚ್ಚುಗೆ
24 minutes ago
Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
17 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
19 hours ago

You Might Also Like

Rajasthan Youth Tea Selling 1
Latest

ಅತ್ತೆ ಮನೆ ಮುಂದೆ ಅಳಿಯನ ಟೀ ಅಂಗಡಿ – ಕೈಗೆ ಕೋಳ ಧರಿಸಿ ಚಹಾ ಮಾರಾಟ

Public TV
By Public TV
29 minutes ago
Nikhil Kumaraswamy 1 2
Bengaluru City

ಕೇಂದ್ರ ಜಾತಿಗಣತಿ ಮಾಡೋವಾಗ ರಾಜ್ಯ ಸರ್ಕಾರದಿಂದ ಜಾತಿಗಣತಿ ಬೇಡ: ನಿಖಿಲ್ ಕುಮಾರಸ್ವಾಮಿ

Public TV
By Public TV
33 minutes ago
Nikhil Kumaraswamy
Bengaluru City

ರಾಜ್ಯಕ್ಕೆ ಅನುದಾನದ ಕೊರತೆ ಆಗಿದ್ದರೆ ಪ್ರಧಾನಿಗಳ ಜೊತೆ ಸಿಎಂ ಮಾತಾಡಲಿ: ನಿಖಿಲ್ ಕುಮಾರಸ್ವಾಮಿ

Public TV
By Public TV
40 minutes ago
Ram Mohan Naidu
Latest

ಏರ್‌ ಇಂಡಿಯಾ ವಿಮಾನ ದುರಂತ ತನಿಖೆಗೆ ಉನ್ನತ ಮಟ್ಟದ ಸಮಿತಿ – 3 ತಿಂಗಳ ಡೆಡ್‌ಲೈನ್: ಸಚಿವ ರಾಮಮೋಹನ್ ನಾಯ್ಡು

Public TV
By Public TV
44 minutes ago
Payal Khatik 2
Latest

Plane Crash | ಇಂಜಿನಿಯರ್‌ ಆಗುವ ಕನಸು ಕಂಡಿದ್ದ ಆಟೋ ಚಾಲಕನ ಮಗಳ ದುರಂತ ಅಂತ್ಯ

Public TV
By Public TV
54 minutes ago
Harangi Dam
Districts

ಕೊಡಗಿನಲ್ಲಿ ಮಳೆ – ಹಾರಂಗಿ ಜಲಾಶಯದಿಂದ ಕಾವೇರಿ ನದಿಗೆ 4,000 ಕ್ಯೂಸೆಕ್ ನೀರು ಬಿಡುಗಡೆ

Public TV
By Public TV
58 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?