Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkaballapur

ಆರು ಮಂದಿ ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸುವೆ: ಸುಧಾಕರ್ ಭರವಸೆ

Public TV
Last updated: August 1, 2022 11:04 am
Public TV
Share
2 Min Read
SUDHAKAR NEW
SHARE

ಚಿಕ್ಕಬಳ್ಳಾಪುರ: ಸಿಕ್ಕ ಸಿಕ್ಕ ಸಾರ್ವಜನಿಕರಿಗೆ ಚಾಕು ಇರಿದು ಪರಾರಿಯಾಗಿದ್ದ ಸೈಕೋಪಾತ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಘಟನೆಯಲ್ಲಿ ಗಾಯಗೊಂಡ 6 ಮಂದಿಯ ಚಿಕಿತ್ಸಾ ವೆಚ್ಚ ಭರಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಭರವಸೆ ನೀಡಿದ್ದಾರೆ ಮತ್ತು ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

CKB ARREST copy

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಚಿಕ್ಕಬಳ್ಳಾಪುರ ನಗರದಲ್ಲಿ ಭಾನುವಾರ ರಾತ್ರಿ ನಡೆದ ಹಲ್ಲೆ ಪ್ರಕರಣದಲ್ಲಿ ದುಷ್ಕರ್ಮಿಯನ್ನು ಸಾಕ್ಷಿ ಸಮೇತ ಪತ್ತೆಹಚ್ಚಲಾಗಿದ್ದು, ತಡರಾತ್ರಿ 3 ಗಂಟೆ ಹೊತ್ತಿಗೆ ಬಂಧಿಸಲಾಗಿದೆ. ಹಲ್ಲೆಯಲ್ಲಿ ಗಾಯಗೊಂಡಿದ್ದ 6 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆ ಪೈಕಿ ಒಬ್ಬರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ನಾಡದೇವಿ ಚಾಮುಂಡೇಶ್ವರಿ ಹಬ್ಬಕ್ಕೆ ದಿನಗಣನೆ – ಮೈಸೂರು ದಸರಾಕ್ಕೆ ಬಹಿಷ್ಕಾರ ಹಾಕಿದ ಮಾವುತ ಕಾವಾಡಿಗಳು

ಚಿಕ್ಕಬಳ್ಳಾಪುರ ನಗರದಲ್ಲಿ ನೆನ್ನೆ ರಾತ್ರಿ ನಡೆದ ಹಲ್ಲೆ ಪ್ರಕರಣದಲ್ಲಿ ದುಷ್ಕರ್ಮಿಯನ್ನು ಸಾಕ್ಷಿ ಸಮೇತ ಪತ್ತೆಹಚ್ಚಲಾಗಿದ್ದು ತಡರಾತ್ರಿ 3ಗಂಟೆ ಹೊತ್ತಿಗೆ ಬಂಧಿಸಲಾಗಿದೆ.

ಹಲ್ಲೆಯಲ್ಲಿ ಗಾಯಗೊಂಡಿದ್ದ 6 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆ ಪೈಕಿ ಒಬ್ಬರಿಗೆ ಬೆಂಗಳೂರಿನ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

1/2

— Dr Sudhakar K (@mla_sudhakar) August 1, 2022

6 ಜನ ಗಾಯಾಳುಗಳು ಜೀವಾಪಾಯದಿಂದ ಪಾರಾಗಿದ್ದು ಅವರ ಚಿಕಿತ್ಸಾ ಜವಾಬ್ದಾರಿಯನ್ನು ನಾನು ಸಂಪೂರ್ಣವಾಗಿ ವಹಿಸಲು ನಿರ್ಧರಿಸಿದ್ದೇನೆ. ದುಷ್ಕರ್ಮಿಯನ್ನು ಶೀಘ್ರವಾಗಿ ಪತ್ತೆಹಚ್ಚಿ ಬಂಧಿಸಲು ರಾತ್ರಿಯಿಡೀ ಶ್ರಮಿಸಿದ ಎಸ್‍ಪಿ ನಾಗೇಶ್, ಡಿವೈಎಸ್‍ಪಿ ವಾಸುದೇವ್, ಸರ್ಕಲ್ ಇನ್ಸ್‌ಪೆಕ್ಟರ್​ ರಾಜು ಮತ್ತು ಎಲ್ಲ ಪೊಲೀಸ್ ಸಿಬ್ಬಂದಿಗೆ ಧನ್ಯವಾದ ತಿಳಿಸಿದ್ದಾರೆ.

ಏನಿದು ಪ್ರಕರಣ?
ಚಿಕ್ಕಬಳ್ಳಾಪುರ ನಗರದ ನಿವಾಸಿ ಅರ್ಜುನ್ ನಗರದ ಬಲಮುರಿ ವೃತ್ತ ಬಜಾರ್ ರಸ್ತೆಯಲ್ಲಿ ಸಿಕ್ಕ ಸಿಕ್ಕ ಸಾರ್ವಜನಿಕರಿಗೆ ಚಾಕು ಇರಿದು ಪರಾರಿಯಾಗಿದ್ದನು. ಇದೀಗ ಸೈಕೋಪಾತ್ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.  ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಸಿಕ್ಕ-ಸಿಕ್ಕವರ ಮೇಲೆ ಚಾಕು ಇರಿದು ಪರಾರಿಯಾಗಿದ್ದವ ಅರೆಸ್ಟ್

ಅರ್ಜುನ್ ಕಂದವಾರದ ಬಳಿಯ ದೇವಸ್ಥಾನವೊಂದರಲ್ಲಿ ಮಲಗುತ್ತಿದ್ದು, ಕಳೆದ 3 ದಿನಗಳ ಹಿಂದೆ ಪಕ್ಕದಲ್ಲಿ ಮಲಗಿದ್ದ ಒಬ್ಬನ ಬಳಿ ಮೊಬೈಲ್ ಕಳವು ಮಾಡಿದ್ದ ಎನ್ನಲಾಗಿದೆ. ಮೊಬೈಲ್ ವಾಪಸ್ ಕೇಳಿದ್ದಕ್ಕೆ ಮೊಬೈಲ್ ಮಾಲೀಕನಿಗೆ ಚಾಕು ತೋರಿಸಿ ಬೆದರಿಸಿದ್ದು, ತದನಂತರ ಮೊಬೈಲ್ ಮಾಲೀಕ ನಾಲ್ವರ ಸ್ನೇಹಿತರ ಜೊತೆ ಹೋಗಿ ಅರ್ಜುನ್‍ಗೆ ಹಲ್ಲೆ ಮಾಡಿ ಬೆದರಿಸಿ ಮೊಬೈಲ್ ವಾಪಸ್ ಪಡೆದುಕೊಂಡಿದ್ರಂತೆ. ಇದೇ ವಿಚಾರದಲ್ಲಿ ನಿನ್ನೆಯೂ ಸಹ ಜೂನಿಯರ್ ಕಾಲೇಜು ಬಳಿ ಗಲಾಟೆ ನಡೆದಿದ್ದು, ಅರ್ಜುನ್ ಗಲಾಟೆ ನಂತರ ಜೂನಿಯರ್ ಕಾಲೇಜು ಕಡೆಯಿಂದ ಬಲಮುರಿ ವೃತ್ತದ ಮೂಲಕ ಬಜಾರ್ ರಸ್ತೆಗೆ ಬೈಕ್ ಮೂಲಕ ಬಂದು ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿ ಪರಾರಿಯಾಗಿದ್ದ. ಘಟನೆಯಲ್ಲಿ ಓರ್ವ ಮಹಿಳೆ ಸೇರಿ 6 ಮಂದಿ ಆಸ್ಪತ್ರೆ ಪಾಲಾಗಿದ್ದು, ಘಟನೆಯಿಂದ ಚಿಕ್ಕಬಳ್ಳಾಪುರ ನಗರದ ಜನತೆ ಬೆಚ್ಚಿಬಿದ್ದಿದ್ದರು.

Live Tv
[brid partner=56869869 player=32851 video=960834 autoplay=true]

TAGGED:accusedchikkaballapurpoliceSudhakartweetಆರೋಪಿಚಿಕ್ಕಬಳ್ಳಾಪುರಟ್ವೀಟ್ಪೊಲೀಸರುಸುಧಾಕರ್
Share This Article
Facebook Whatsapp Whatsapp Telegram

You Might Also Like

Fire Accident Dubai UAE
Latest

ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ – 4,000 ಜನರ ಸ್ಥಳಾಂತರ

Public TV
By Public TV
6 minutes ago
US Senator
Latest

ಅಮೆರಿಕದ ರಾಜಕಾರಣಿಗಳ ಮನೆಯೊಳಗೇ ಗುಂಡಿನ ದಾಳಿ – ಶಾಸಕಿ ಮೆಲಿಸ್ಸಾ, ಪತಿ ಹತ್ಯೆ; ಓರ್ವ ಸಂಸದನಿಗೆ ಗಾಯ

Public TV
By Public TV
7 minutes ago
11A Seat
Latest

ಮೃತ್ಯುಂಜಯ `ವಿಶ್ವಾಸ್ ಎಫೆಕ್ಟ್’ – 11A ಲಕ್ಕಿ ಸೀಟಿಗೆ ಫುಲ್ ಡಿಮ್ಯಾಂಡ್!

Public TV
By Public TV
1 hour ago
Hubballi Reels
Dharwad

ರೀಲ್ಸ್‌ ರಾಜನಿಗೆ ಬಿಸಿ ಮುಟ್ಟಿಸಿದ ಹುಬ್ಬಳ್ಳಿ ಪೊಲೀಸ್‌ – ನಿಮಗೂ ಈ ಅನುಭವ ಆಗಿರಬೇಕಲ್ವಾ?

Public TV
By Public TV
1 hour ago
CRIME
Crime

ಖಾಸಗಿ ಅಂಗದ ಮೇಲೆ ಕಾದ ಕಬ್ಬಿಣದಿಂದ ಬರೆ ಹಾಕಿ ಚಿತ್ರಹಿಂಸೆ – ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ

Public TV
By Public TV
1 hour ago
Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?