ಚಿಕ್ಕಬಳ್ಳಾಪುರ: ರಾಜ್ಯ ಬಜೆಟ್ನಲ್ಲಿ (State Budget) ಚಿಕ್ಕಬಳ್ಳಾಪುರಕ್ಕೆ (Chikkaballapur) ಬಂಪರ್ ಕೊಡುಗೆ ನೀಡುವುದಾಗಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ (K Sudhakar) ಸುಳಿವು ನೀಡಿದರು.
ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಮುದ್ದೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಲಿರುವ ರಾಜ್ಯ ಬಜೆಟ್ನಲ್ಲಿ ನೀರಾವರಿಗೆ ವಿಶೇಷ ಕೊಡುಗೆ ನೀಡಬೇಕು. ನಂದಿಬೆಟ್ಟಕ್ಕೆ (Nandi Hills) ರೋಪ್ ವೇ ಈಗಾಗಲೇ ಮಂಜೂರಾಗಿದೆ. ಹೂ ಬೆಳೆಗಾರರಿಗೆ ಮಾರುಕಟ್ಟೆಗೆ ಅನುದಾನಕ್ಕೆ ಮನವಿ ಮಾಡಲಾಗಿದೆ ಎಂದರು. ಇದನ್ನೂ ಓದಿ: `ಏಕರೂಪ ನಾಗರಿಕ ಸಂಹಿತೆ’ ಕುರಿತು ಚರ್ಚಿಸಲು ಫೆ.12ರಂದು ಮುಸ್ಲಿಮರ ಬೃಹತ್ ಸಮಾವೇಶ
ಜೊತೆಗೆ ರೈತರು, ವಿದ್ಯಾರ್ಥಿಗಳು ಮತ್ತು ಮಹಿಳೆಯರಿಗೆ ಪೂರಕವಾದ ವಿಶೇಷ ಯೋಜನೆಗಳು ಇರಲಿವೆ ಎಂದು ತಿಳಿಸಿದರು. ಇದೇ ತಿಂಗಳು 17ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್ನಲ್ಲಿ ಚಿಕ್ಕಬಳ್ಳಾಪುರಕ್ಕೆ ಭರಪೂರ ಕೊಡುಗೆಗಳ ಸುಳಿವನ್ನು ಸಚಿವ ಸುಧಾಕರ್ ನೀಡಿದ್ದಾರೆ. ಇದನ್ನೂ ಓದಿ: ಸಚಿವ ಮುರುಗೇಶ್ ನಿರಾಣಿ ಹಂಚಿದ ಸಕ್ಕರೆ ತಿರಸ್ಕರಿಸಿದ ಮಹಿಳೆಗೆ ಭಾರೀ ಬೆಂಬಲ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k