ರಾಷ್ಟ್ರಪತಿಗಳಿಗೆ ಶ್ರೀ ರಾಮಾಯಣ ದರ್ಶನಂ, ಪರ್ವ ಕಾದಂಬರಿ ನೀಡಿದ ಸುನಿಲ್ ಕುಮಾರ್

Public TV
1 Min Read
sunil kumar ramanath kovind

ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಜ್ಯ ಪ್ರವಾಸದಲ್ಲಿದ್ದಾರೆ. ಇದೇ ವೇಳೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಭೇಟಿ ಮಾಡಿ ಮಾತುಕತೆ ನಡೆಸಿದರು.

sunil kumar ramanath kovind

ರಾಜಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸುನಿಲ್ ಕುಮಾರ್ ಅವರು ಕುವೆಂಪು ಅವರ ಶ್ರೀ ರಾಮಾಯಣ ದರ್ಶನಂ ಇಂಗ್ಲಿಷ್ ಅನುವಾದಿತ ಪುಸ್ತಕ ಹಾಗೂ ಡಾ.ಎಸ್.ಎಲ್.ಭೈರಪ್ಪ ಅವರ ಪರ್ವ ಕಾದಂಬರಿಯ ಇಂಗ್ಲಿಷ್ ಅನುವಾದಿತ ಕೃತಿಯನ್ನು ರಾಷ್ಟ್ರಪತಿಯವರಿಗೆ ಕೊಡುಗೆಯಾಗಿ ನೀಡಿದರು. ಇದನ್ನೂ ಓದಿ: ವಿಕ್ರಮಾದಿತ್ಯ ನೌಕೆಯಲ್ಲಿ ನಾವ್‌-ಇಕ್ಯಾಶ್‌ ಕಾರ್ಡ್‌ ಸೇವೆಗೆ ಚಾಲನೆ

ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು. ಈ ವೇಳೆ ಪರಸ್ಪರ ಕುಶಲೋಪರಿ ಮಾತನಾಡಿ, ಸಚಿವರು ವಿಶೇಷ ಉಡುಗೊರೆಗಳನ್ನು ರಾಷ್ಟ್ರಪತಿಗಳಿಗೆ ನೀಡಿದ್ದಾರೆ. ರಾಷ್ಟ್ರಪತಿ ಕೋವಿಂದ್ ಅವರು ಸಹ ಅಷ್ಟೇ ಸಂತೋಷದಿಂದ ಸ್ವೀಕರಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *