Public TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
Search
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US

Home - Karnataka Election 2023 - ಬಿಜೆಪಿಯಲ್ಲಿ ಟಿಕೆಟ್ ಕೊಟ್ಟರೆ ನಿಂತ್ಕೊತೀನಿ, ಇಲ್ಲ ಅಂದ್ರೆ ಇಲ್ಲ: ಸೋಮಣ್ಣ

Karnataka Election 2023

ಬಿಜೆಪಿಯಲ್ಲಿ ಟಿಕೆಟ್ ಕೊಟ್ಟರೆ ನಿಂತ್ಕೊತೀನಿ, ಇಲ್ಲ ಅಂದ್ರೆ ಇಲ್ಲ: ಸೋಮಣ್ಣ

Public TV
Last updated: 2023/03/13 at 3:57 PM
Public TV
Share
2 Min Read
SHARE

– ಡಿಕೆಶಿ, ಸಿದ್ದರಾಮಯ್ಯ ನಾವೆಲ್ಲ ಸ್ನೇಹಿತರು

ಬೆಂಗಳೂರು: ಬಿಜೆಪಿ(BJP) ಯಲ್ಲಿ ಟಿಕೆಟ್ ಕೊಟ್ಟರೆ ನಿಂತ್ಕೊತೀನಿ, ಇಲ್ಲ ಅಂದ್ರೆ ಇಲ್ಲ. ನಾನು ಯಾವತ್ತಾದ್ರೂ ನನ್ನ ಮಗನಿಗೆ ಟಿಕೆಟ್ ಕೇಳಿದ್ದೀನಾ ಎಂದು ಸಚಿವ ವಿ. ಸೋಮಣ್ಣ (V Somanna) ಪ್ರಶ್ನಿಸಿದರು.

ವಿಧಾನಸೌಧ (Vidhanasoudha) ದಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಇವೆಲ್ಲ ಇರುತ್ತೆ. ಏನು ಹೇಳಬೇಕು, ಎಲ್ಲಿ ಹೇಳಬೇಕೋ ಹೇಳಿದ್ದೀನಿ. ಕವಲುದಾರಿಗಳು ಇರುತ್ತವೆ. ನಾನೇನು ಸನ್ಯಾಸಿ ಅಲ್ಲ. ಡಿಕೆಶಿ (DK Shivakumar), ಸಿದ್ದರಾಮಯ್ಯ (Siddaramaiah) ನಾವೆಲ್ಲ ಸ್ನೇಹಿತರು. ನಾವು ಒಟ್ಟಿಗೆ ಕೆಲಸ ಮಾಡಿದ್ದೀವಿ. ಅವರ ಕೆಲಸ ಅವರು ಮಾಡ್ತಾರೆ, ನನ್ನ ಕೆಲಸ ನಾನು ಮಾಡ್ತೀನಿ. ನನಗೆ ಅಸಮಾಧಾನ ಇದೆ ಅಂತಾ ನಾನು ಹೇಳಿಲ್ಲ ಎಂದರು.

ನನ್ನ ಬೆಂಗಳೂರಿಗೆ ಮಾತ್ರ ಏಕೆ ಸೀಮಿತ ಮಾಡ್ತೀರಾ ಎಂದು ಇದೇ ವೇಳೆ ಪ್ರಶ್ನಿಸಿದ ಸೋಮಣ್ಣ, ನನಗೆ ಕೊಟ್ಟ ಜವಾಬ್ದಾರಿಗಳೆಲ್ಲವನ್ನೂ ನಿರ್ವಹಿಸಿದ್ದೇನೆ. ಉಪಚುನಾವಣೆಗಳ ಜವಾಬ್ದಾರಿ, ತುಮಕೂರು ಲೋಕಸಭೆಯಲ್ಲಿ ಗೆಲ್ಲಿಸಿಕೊಂಡು ಬಂದಿದ್ದೇನೆ. ನಾನು ಮೊದಲು ಕಾಂಗ್ರೆಸ್‍ನಲ್ಲೇ ಇದ್ದೆ, ಜನತಾಪಾರ್ಟಿ, ಜನತಾದಳದಲ್ಲೂ ಕೆಲಸ ಮಾಡಿದ್ದೇನೆ. ರಾಜಕಾರಣದಲ್ಲಿ ಹೀಗೆಲ್ಲ ಆಗ್ತಿರುತ್ತವೆ. ನನ್ನ ಮಗನಿಗೆ ಟಿಕೆಟ್ ಕೇಳಿದ್ದೀನಾ..!? ನಾಲ್ಕು ಗೋಡೆ ಮಧ್ಯೆ ಯಾರಿಗೆ ಏನ್ ಹೇಳಬೇಕು ಹೇಳಿದ್ದೀನಿ ಎಂದು ಗರಂ ಆದರು. ಇದನ್ನೂ ಓದಿ: ಜೆಡಿಎಸ್ ಬಗ್ಗೆ ಮಾತನಾಡಲು ಮೋದಿಯವರಿಗೆ ಸಬ್ಜೆಕ್ಟ್ ಇಲ್ಲ: ಹೆಚ್‍ಡಿಕೆ

ಅಭಿಮಾನಿಗಳು ಸಭೆ ಮಾಡಿದ್ರೆ ನಾನು ಮಾಡಬೇಡಿ ಅಂತ ಹೇಳೋಕೆ ಆಗುತ್ತಾ..? ರಾಜಕಾರಣ ಅಂದ್ರೆ ಬೆಂಗಳೂರಿಗೆ ಅಷ್ಟೆ ಸೀಮಿತ ಆಗಬೇಕಾ..? ಚುನಾವಣೆ ಬಂದಾಗ ನನ್ನ ಇಡೀ ರಾಜ್ಯಕ್ಕೆ ಕರೆಸ್ತಾರೆ. ಎಲ್ಲಾ ಕ್ಷೇತ್ರ ಗೆಲ್ಲಿಸಿಕೊಂಡೇ ಬಂದಿದ್ದೀನಿ. ಪಕ್ಷ ಏನು ಹೇಳುತ್ತೋ ನಾನು ಅದನ್ನು ಮಾಡ್ತೀನಿ. ರಾಜಕಾರಣ ಇದು ಖುಷಿ ಇದ್ಯೋ ಇಲ್ವೋ ಗೊತ್ತಿಲ್ಲ. ಅರ್ಹತೆ ಇರುವವರಿಗೆ ಕೆಲವು ಸಲ ಕವಲು ದಾರಿ ಆಗ್ತಾವೆ. 56 ವರ್ಷ ನಾನು ಬೆಂಗಳೂರಿಗೆ ಬಂದು. ಅನೇಕ ತೊಡಕುಗಳನ್ನೂ ನೋಡಿದ್ದೇವೆ. ಕೆಲಸ ಮಾಡೋವ್ರನ್ನ ಜನ ಗೌರವಿಸ್ತಾರೆ ಅಂದರೆ ಅದಕ್ಕೆ ಉದಾಹರಣೆ ಅಂದರೆ ಸೋಮಣ್ಣ ಎಂದರು.

ಬೇರೆ ರಾಜಕಾರಣಿ ಮಕ್ಕಳು ರಾಜಕಾರಣದಲ್ಲಿ ಇರಬಹುದು. ಎಲ್ಲರಿಗೂ ಮಕ್ಕಳು, ಪ್ರೀತಿ ಅನ್ನೋದು ಇರುತ್ತೆ. ನನಗೆ ಇರುವ ನಿಯಮ ಎಲ್ಲರಿಗೂ ಅನ್ವಯಿಸಬೇಕಲ್ವ. ನಾನು ಯಾವತ್ತೂ ಮಕ್ಕಳನ್ನು ರಾಜಕಾರಣಕ್ಕೆ ತಂದವನಲ್ಲ. ಬೇರೆ ರಾಜಕಾರಣಿ ಮಕ್ಕಳಿಗೆ ಟಿಕೆಟ್ ಇಲ್ಲ ಅನ್ನೋದಾದ್ರೆ ನಮಗೂ ಬೇಡ. ಅವಕಾಶ, ಹಣೆಬರಹ ಇದ್ದರೆ ಮಗನಿಗೆ ಟಿಕೆಟ್ ಸಿಗುತ್ತದೆ, ನಾನು ಯಾರನ್ನ ಕೇಳಿಲ್ಲ. ನನಗೆ ಅಸಮಾಧಾನ ಇದೆ ಅಂತ ಎಲ್ಲಾದ್ರೂ ಹೇಳಿದ್ದೀನಾ..?. ರಾಜಕಾರಣಿಗಳಿಗೆ ಬದ್ಧತೆ ಇರಬೇಕು. ಕಾಂಗ್ರೆಸ್ ಗೆ ಬರ್ತಾರೆ ಅಂತ ಅವರ ಭಾವನೆಗಳಿವೆ. ಅದಕ್ಕೆ ನಾನು ಬೇಡ ಅನ್ನಲಾ..?. ಅವರಿಗೆಲ್ಲಾ ಒಳ್ಳೆಯದಾಗಲಿ ಎಂದು ಹೇಳಿದರು.

TAGGED: bengaluru, bjp, V.Somanna, Vidhanasoudha, ಬಿಜೆಪಿ, ಬೆಂಗಳೂರು, ವಿ.ಸೋಮಣ್ಣ, ವಿಧಾನಸೌಧ
Share this Article
Facebook Twitter Whatsapp Whatsapp Telegram
Share

Latest News

ಬಾಲಕಿ ಹತ್ಯೆಗೈದ ಅಪರಾಧಿಗೆ ನೂರು ವರ್ಷ ಜೈಲು
By Public TV
ಗೌಡ್ರು ಎಂಬ ಕಾರಣಕ್ಕೆ ʻಎಕ್ಸ್‌ಕ್ಯೂಸ್‌ ಮಿʼ ಸಿನಿಮಾ ಒಪ್ಪಿಕೊಂಡೆ: ರಮ್ಯಾ
By Public TV
ಡಿಕೆಶಿ, ಸಿದ್ದರಾಮಯ್ಯಗೆ ಜ್ಞಾನ ಕಡಿಮೆ ಅನ್ಸುತ್ತೆ : ಆರ್. ಅಶೋಕ್
By Public TV
ಲಿಂಗಾಯತರು, ಒಕ್ಕಲಿಗರು ಭಿಕ್ಷುಕರಲ್ಲ, ಇದು ನಮಗೆ ಬೇಕಾಗಿಲ್ಲ: ಡಿಕೆಶಿ ಕಿಡಿ
By Public TV
ಬಿಜೆಪಿ ಮುಖಂಡನ ಮಳಿಗೆ ಮೇಲೆ ದಾಳಿ – 3 ಕೋಟಿ ಮೌಲ್ಯದ ವಸ್ತುಗಳು ಜಪ್ತಿ
By Public TV
ಬಿಜೆಪಿ ಕರ್ನಾಟಕ ಜನರ ಸಮಾಧಿ ಕಟ್ಟುತ್ತಿದೆ : ಹೆಚ್‍ಡಿಕೆ
By Public TV

You Might Also Like

International

ಬಾಲಕಿ ಹತ್ಯೆಗೈದ ಅಪರಾಧಿಗೆ ನೂರು ವರ್ಷ ಜೈಲು

Public TV By Public TV 5 mins ago
Cinema

ಗೌಡ್ರು ಎಂಬ ಕಾರಣಕ್ಕೆ ʻಎಕ್ಸ್‌ಕ್ಯೂಸ್‌ ಮಿʼ ಸಿನಿಮಾ ಒಪ್ಪಿಕೊಂಡೆ: ರಮ್ಯಾ

Public TV By Public TV 15 mins ago
Bengaluru City

ಡಿಕೆಶಿ, ಸಿದ್ದರಾಮಯ್ಯಗೆ ಜ್ಞಾನ ಕಡಿಮೆ ಅನ್ಸುತ್ತೆ : ಆರ್. ಅಶೋಕ್

Public TV By Public TV 21 mins ago
Karnataka Budget 2023

ಲಿಂಗಾಯತರು, ಒಕ್ಕಲಿಗರು ಭಿಕ್ಷುಕರಲ್ಲ, ಇದು ನಮಗೆ ಬೇಕಾಗಿಲ್ಲ: ಡಿಕೆಶಿ ಕಿಡಿ

Public TV By Public TV 59 mins ago
Follow US
Go to mobile version
Welcome Back!

Sign in to your account

Lost your password?