ಚಾಮರಾಜನಗರ: ಸಚಿವ ವಿ.ಸೋಮಣ್ಣ (V.Somanna) ನನ್ನ ಕೆನ್ನೆಗೆ ಹೊಡೆದಿದ್ದಾರೆ ಎಂದು ಹೇಳಿಕೆ ನೀಡುವಂತೆ ಕೆಲವು ಸಂಘಟನೆಗಳು ನನಗೆ ಕಿರುಕುಳ ನೀಡುತ್ತಿವೆ ಎಂದು ಪೊಲೀಸರಿಗೆ ಮಹಿಳೆ ದೂರು ನೀಡಿದ್ದಾಳೆ.
ಸಚಿವ ಸೋಮಣ್ಣ ನನ್ನ ಕೆನ್ನೆಗೆ ಹೊಡೆದಿದ್ದಾರೆ ಎಂದು ಹೇಳಿ ಹಲವು ಸಂಘಟನೆಗಳು ನನಗೆ ಕಿರುಕುಳ ನೀಡುತ್ತಿವೆ. ಇಂಥ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆಂಪಮ್ಮ ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ನಂಗೆ ಎರಡು ಮುಖವಿಲ್ಲ, ಇರೋದು ಒಂದೇ ಮುಖ: ಹೆಚ್ಡಿಕೆಗೆ ಸೋಮಣ್ಣ ಟಾಂಗ್
ಸಚಿವರ ವಿರುದ್ಧ ಪೊಲೀಸ್ ಠಾಣೆಗೆ ದೂರು ಕೊಡುವಂತೆ ವಿವಿಧ ಸಂಘಟನೆಗಳಿಂದ ಬೆದರಿಕೆ ಬರುತ್ತಿದೆ ಅಂತಾ ಆರೋಪ ಮಾಡಿದ್ದಾರೆ. ವಿವಿಧ ಸಂಘಟನೆಗಳ ವಿರುದ್ಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆ ಕೆಂಪಮ್ಮ ದೂರು ದಾಖಲಿಸಿದ್ದಾರೆ.
ಸೋಮಣ್ಣ ಹೊಡೆದಿದ್ದಾರೆಂದು ಹೇಳಿಕೆ ನೀಡು, ಪೊಲೀಸರಿಗೆ ದೂರು ಕೊಡು. ಇಲ್ಲದಿದ್ದರೆ ವಾಸ ಮಾಡಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ. ವಿವಿಧ ಸಂಘಟನೆಗಳಿಂದ ಪ್ರಾಣ ಬೆದರಿಕೆ ಇದೆ. ನನಗೆ ರಕ್ಷಣೆ ನೀಡಿ ಎಂದು ಗುಂಡ್ಲುಪೇಟೆ ತಾಲೂಕಿನ ರೈತ ಸಂಘ, ತಾಲೂಕು ನಾಯಕರ ಹಿತರಕ್ಷಣಾ ಸಮಿತಿ, ತಾಲೂಕು ದಸಂಸ, ತಾಲೂಕು ಕೆಆರ್ಎಸ್ ಪಾರ್ಟಿ ವಿರುದ್ಧ ಮಹಿಳೆ ದೂರು ನೀಡಿದ್ದಾರೆ. ಇದನ್ನೂ ಓದಿ: ಮಹಿಳೆಗೆ ಕಪಾಳಮೋಕ್ಷ ಪ್ರಕರಣ- ಸೋಮಣ್ಣ ಕ್ಷಮೆಯಾಚನೆ