ಮೈಸೂರು: ದಸರಾ ಗಜಪಡೆಯ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ವಾಕಿಂಗ್ ಮಾಡಿದ್ದಾರೆ.
ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ರಾಜಮಾರ್ಗದಲ್ಲಿ ಗಜಪಡೆಗಳ ಪಾದಯಾತ್ರೆ ನಡೆಸಲಾಗುತ್ತಿದೆ. ಸೋಮಣ್ಣ ಅವರು ಬೆಳ್ಳಂಬೆಳಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಪಾದಯಾತ್ರೆ ಮಾಡಿದರು. ಈ ವೇಳೆ ಜಂಬೂಸವಾರಿ ತೆರಳುವ ಮಾರ್ಗದಲ್ಲಿ ಕಾಮಗಾರಿ ಹಾಗೂ ಸ್ಥಳ ಪರಿಶೀಲನೆ ಮಾಡಿದರು.
ಅಲ್ಲದೆ ಜಂಬೂ ಸವಾರಿ ಮಾರ್ಗದ ಅಸುಪಾಸಿನಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆ ಮಾಹಿತಿ ಕಲೆ ಹಾಕಿದರು. ನಗರದ ಕೋಟೆ ಆಂಜನೇಯ ದೇವಸ್ಥಾನದಿಂದ ಬನ್ನಿಮಂಟಪದವರೆಗೂ ಸೋಮಣ್ಣ ವಾಕಿಂಗ್ ಮಾಡಿದರು. ಈ ವೇಳೆ ವಿ. ಸೋಮಣ್ಣಗೆ ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್. ನಾಗೇಂದ್ರ, ಮೇಯರ್ ಜಗನ್ನಾಥ್ ಸಾಥ್ ನೀಡಿದರು.
ಸಮಸ್ಯೆಗಳ ಬಗ್ಗೆ ಗಮನಹರಿಸಿ ಸ್ಥಳದಲ್ಲೇ ವಿ. ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದಸರಾಗೆ ಕಪ್ಪು ಚುಕ್ಕೆ ಬಾರದಂತೆ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ.