ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಲು ಜಮೀರ್ ಅಹ್ಮದ್ ಆಸಕ್ತಿ

Public TV
1 Min Read
Zameer Hajj Bhavan

ಬೆಂಗಳೂರು: ನಗರದ ನಾಗವಾರ ಬಳಿಯ ಹಜ್ ಭವನಕ್ಕೆ ಟಿಪ್ಪು ಸುಲ್ತಾನ ಹೆಸರಿಡಲು ಸಚಿವ ಜಮೀರ್ ಅಹ್ಮದ್ ಆಸಕ್ತಿ ತೋರಿದ್ದಾರೆ.

ಮುಸ್ಲಿಂ ಧರ್ಮಗುರುಗಳು ಹಜ್ ಭವನಕ್ಕೆ ಟಿಪ್ಪು ಸುಲ್ತಾನ ಹೆಸರಿಡಲು ಒತ್ತಾಯಿಸುತ್ತಿದ್ದಾರೆ. ಈ ಸಂಬಂಧ ಹಜ್ ಖಾತೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಂದರ್ಭದಲ್ಲಿ ಜಮೀರ್ ಅಹ್ಮದ್ ಖಾನ್ ಮಾತನಾಡಿರುವ ವೀಡಿಯೋ ಪಬ್ಲಿಕ್ ಟಿವಿಗೆ ಸಿಕ್ಕಿದೆ.

vlcsnap 2018 06 22 10h52m27s221

ವಿಡಿಯೋದಲ್ಲಿ ಏನಿದೆ?: ಬೆಂಗಳೂರಿನ ಹಜ್ ಭವನಕ್ಕೆ ಹಜರತ್ ಟಿಪ್ಪು ಸುಲ್ತಾನರ ಹೆಸರು ನಾಮಕರಣ ಮಾಡುವಂತೆ ಮುಸ್ಲಿಂ ಧರ್ಮಗುರುಗಳು ನನ್ನನ್ನು ಒತ್ತಾಯಿಸುತ್ತಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಿರ್ಣಯ ತೆಗೆದುಕೊಳ್ಳುತ್ತೇನೆ ಅಂತಾ ತಿಳಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಸರ್ಕಾರ ಟಿಪ್ಪು ಜಯಂತಿ ಆಚರಿಸಿತ್ತು. ಆದ್ರೆ ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ಸೇರಿದಂತೆ ಹಲವು ಹಿಂದೂ ಸಂಘಟನೆಗಳು ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದವು. ಇದೀಗ ಸಿಎಂ ಕುಮಾರಸ್ವಾಮಿ ಯಾವ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Share This Article
Leave a Comment

Leave a Reply

Your email address will not be published. Required fields are marked *