ಆಷಾಢ ಬಳಿಕ ಸಂಪುಟ ವಿಸ್ತರಣೆ ಹಿನ್ನೆಲೆ- ಕಾಂಗ್ರೆಸ್‍ನಲ್ಲಿ ತೀವ್ರಗೊಂಡ ಲಾಬಿ

Public TV
1 Min Read
CONGRESS

ಬೆಂಗಳೂರು: ಆಷಾಢ ಮುಗಿಯೋದು ಹತ್ತಿರವಾಗುತ್ತಿದ್ದಂತೆಯೇ ಕಾಂಗ್ರೆಸ್ ಶಾಸಕರು ಫುಲ್ ಆಕ್ಟಿವ್ ಆಗಿದ್ದಾರೆ. ಸಚಿವ ಸ್ಥಾನ ಆಕಾಂಕ್ಷಿಗಳು ಹೈಕಮಾಂಡ್ ಭೇಟಿ ಮಾಡಲು ದೆಹಲಿ ಕಡೆ ಪ್ರಯಾಣ ಬೆಳೆಸಿದ್ದಾರೆ.

ಸಚಿವ ರಮೇಶ್ ಜಾರಕಿಹೋಳಿ ನೇತೃತ್ವದಲ್ಲಿ ಎಂಟು ಜನ ಶಾಸಕರು ಹೈಕಮಾಂಡ್ ಭೇಟಿಗೆ ದೆಹಲಿ ತೆರಳಿದ್ದಾರೆ. ಆಷಾಢ ಬಳಿಕ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿ ನೇಮಕ ಮಾಡಲಾಗುತ್ತೆ ಅಂಥ ಹೈಕಮಾಂಡ್ ಹೇಳಿತ್ತು. ಹೀಗಾಗಿ ಆಷಾಢ ಮುಗಿಯೊಕೆ ಇನ್ನು ಒಂದು ವಾರ ಬಾಕಿ ಇರುವಾಗಲೇ ಶಾಸಕರು ಕಸರತ್ತು ಆರಂಭಿಸಿದ್ದಾರೆ.

VENUGOPAL

ಸಚಿವ ರಮೇಶ್ ಜಾರಕೀಹೊಳಿ, ಎಂಬಿ ಪಾಟೀಲ್, ಪ್ರತಾಪ್ ಗೌಡ ಪಾಟೀಲ್, ಬಿ.ನಾಗೇಂದ್ರ, ನಾರಯಣ್ ರಾವ್ ರಹೀಂ ಖಾನ್ ಸೇರಿದಂತೆ ಒಟ್ಟು ಎಂಟು ಜನ ಶಾಸಕರು ಇಂದು ರಾಜ್ಯ ಚುನಾವಣಾ ಉಸ್ತುವಾರಿ ಕೆ.ವೇಣುಗೋಪಾಲ್ ಭೇಟಿಯಾಗಲಿದ್ದಾರೆ. ಜೊತೆಗೆ ಹೈಕಮಾಂಡ್ ಭೇಟಿಗೂ ಪ್ರಯತ್ನಿಸಲಿದ್ದು, ತಮ್ಮ ಬೆಂಬಲಿಗರಿಗೆ ಸಚಿವ ಸ್ಥಾನ ಹಾಗೂ ಪ್ರಮುಖ ನಿಗಮ ಮಂಡಳಿ ನೀಡುವಂತೆ ಒತ್ತಾಯಿಸಲಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

Share This Article