Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಿಯತಮೆಗೆ ಐ-ಫೋನ್ ಖರೀದಿಸಲು ಬಾಲಕನ ಅಪಹರಿಸಿ ಹತ್ಯೆಗೈದ ಅಪ್ರಾಪ್ತನ ಬಂಧನ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರಿಯತಮೆಗೆ ಐ-ಫೋನ್ ಖರೀದಿಸಲು ಬಾಲಕನ ಅಪಹರಿಸಿ ಹತ್ಯೆಗೈದ ಅಪ್ರಾಪ್ತನ ಬಂಧನ!

Latest

ಪ್ರಿಯತಮೆಗೆ ಐ-ಫೋನ್ ಖರೀದಿಸಲು ಬಾಲಕನ ಅಪಹರಿಸಿ ಹತ್ಯೆಗೈದ ಅಪ್ರಾಪ್ತನ ಬಂಧನ!

Public TV
Last updated: October 11, 2018 5:12 pm
Public TV
Share
3 Min Read
AGRA MURDER
SHARE

ಲಕ್ನೋ: ತನ್ನ ಪ್ರಿಯತಮೆಗೆ ಐ-ಫೋನ್ ಕೊಡಬೇಕೆಂಬ ಉದ್ದೇಶದಿಂದ 14 ವರ್ಷದ ಬಾಲಕನನ್ನು ಅಪಹರಿಸಿ ಹತೈಗೈದ 17 ವರ್ಷದ ಯುವಕನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

ಹೌದು, ಪ್ರಿಯತಮೆಗೆ ಐ-ಫೋನ್ ಕೊಡಿಸಬೇಕೆಂಬ ಉದ್ದೇಶದಿಂದ 17 ವರ್ಷ ಯುವಕನೊಬ್ಬ 14 ವರ್ಷದ ಬಾಲಕನನ್ನು ಅಪಹರಿಸಿ, ಬಳಿಕ ಬರ್ಬರವಾಗಿ ಹತ್ಯೆ ಮಾಡಿ, ಸುಟ್ಟುಹಾಕಿದ್ದರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪುರ ಪೊಲೀಸರು ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

AGRA MURDER 2

14 ವರ್ಷದ ಅಭಿಷೇಕ್ ಮೃತ ಬಾಲಕ. ಮೃತ ಬಾಲಕನ ತಂದೆ ಸರ್ವೇಶ್ ಯಾದವ್ ಖಾಸಗಿ ಕಂಪನಿಯ ಬಸ್ ಚಾಲಕನಾಗಿದ್ದಾರೆ. ಸರ್ವೇಶ್ ಆರೋಪಿಯ ತಂದೆಯ ಮನೆಯಲ್ಲಿ ಬಾಡಿಗೆಗಿದ್ದರು. ಅಲ್ಲದೇ ಆರೋಪಿಯ ತಂದೆಯೂ ಸಹ ಸರ್ವೇಶ್ ಯಾದವ್ ಕಂಪನಿಯಲ್ಲೇ ಬಸ್ ನಿರ್ವಾಹಕರಾಗಿದ್ದರು.

ಏನಿದು ಘಟನೆ?
ಕಳೆದ ಮಂಗಳವಾರ ಸಂಜೆ 8 ನೇ ತರಗತಿ ಓದುತ್ತಿದ್ದ ಅಭಿಷೇಕ್ ಕೋಚಿಂಗ್ ಕ್ಲಾಸ್‍ಗೆ ಹೋಗಿದ್ದವನು ವಾಪಾಸ್ಸು ಬಂದಿರಲಿಲ್ಲ. ಅದೇ ದಿನ ಸಂಜೆ ಅಭಿಷೇಕ್ ತಾಯಿ ಹಾಗೂ ತಂದೆಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ನಿಮ್ಮ ಮಗನನ್ನು ಅಪಹರಿಸಿದ್ದು, ಬಿಡುಗಡೆ ಮಾಡಲು 20 ಲಕ್ಷ ರೂಪಾಯಿ ನೀಡುವಂತೆ ಬೆದರಿಕೆ ಇಟ್ಟಿದ್ದರು. ಕೂಡಲೇ ಎಚ್ಚೆತ್ತ ಪೋಷಕರು ಶಾಲೆ ಹಾಗೂ ಕೋಚಿಂಗ್ ಸೆಂಟರ್ ಬಳಿ ವಿಚಾರಿಸಿದಾಗ ಮಗ ನಾಪತ್ತೆಯಾಗಿರುವುದು ತಿಳಿದು ಬಂದಿದೆ.

AGRA MURDER 4

ಕೂಡಲೇ ಆರೋಪಿಗೆ ಕರೆ ಮಾಡಿದ್ದ ಪೋಷಕರು, ಅಷ್ಟು ದೊಡ್ಡ ಮೊತ್ತದ ಹಣವನ್ನು ಹೊಂದಿಸಲು ನಮ್ಮಿಂದ ಸಾಧ್ಯವಿಲ್ಲ. ನಮಗೆ ನಾಳೆ ಬೆಳಗ್ಗೆಯವರೆಗೂ ಸಮಯ ಕೊಡುವಂತೆ ಕೇಳಿಕೊಂಡಿದ್ದರು. ಇದರ ಜೊತೆ ಪೋಷಕರು ಮಣಿಪುರ ಪೊಲೀಸ್ ಠಾಣೆಯಲ್ಲಿ ಅಪಹರಣ ದೂರು ದಾಖಲಿಸಿದ್ದರು.

ಪತ್ತೆಯಾಗಿದ್ದು ಹೇಗೆ?
ಮಣಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು, ಕರೆ ಬಂದಿದ್ದರ ಕುರಿತು ತನಿಖೆ ನಡೆಸಿದರು. ತನಿಖೆ ವೇಳೆ ಅಭಿಷೇಕ್ ವಾಸವಿದ್ದ ಮನೆಯ ಆಸುಪಾಸಿನಲ್ಲೇ ಕರೆ ಮಾಡಿರುವುದು ಪತ್ತೆಯಾಗಿತ್ತು. ಅಲ್ಲದೆ ಕರೆ ಮಾಡಿದ್ದ ಮೊಬೈಲ್ ನಂಬರ್ ಅನ್ನು ಪರೀಕ್ಷಿಸಿದಾಗ ಅದು ನಕಲಿ ದಾಖಲೆಗಳಿಂದ ಖರೀದಿಸಿರುವುದು ಬೆಳಕಿಗೆ ಬಂದಿತ್ತು.

AGRA MURDER 3

ಮೊಬೈಲ್ ನೆಟ್‍ವರ್ಕ್ ಮಾಹಿತಿ ಕಲೆ ಹಾಕಿದ ಪೊಲೀಸರಿಗೆ ಮೊಬೈಲ್‍ನಲ್ಲಿ ಮತ್ತೊಂದು ಸಿಮ್ ಸಂಖ್ಯೆ ದಾಖಲಾಗಿರುವುದು ಪತ್ತೆಯಾಗಿತ್ತು. ಅದನ್ನು ಪರೀಕ್ಷಿಸಿದಾಗ ಆ ಮೊಬೈಲ್ ಸಂಖ್ಯೆ ಆರೋಪಿಯ ಸಹೋದರಿಗೆ ಸೇರಿದ ನಂಬರ್ ಎನ್ನುವುದು ಬೆಳಕಿಗೆ ಬಂದಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿ ಮನೆ ದಾಳಿ ನಡೆಸಿ ಅಪಹರಣಕಾರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಬಂಧಿತ ಅಪ್ರಾಪ್ತ ಬಾಲಕನನ್ನು ತೀವ್ರವಾಗಿ ವಿಚಾರಣೆಗೆ ಒಳಪಡಿಸಿದಾಗ, ನನ್ನ ಪ್ರಿಯತಮೆಗಾಗಿ ಐ-ಫೋನ್ ಖರೀದಿಸಲು ಅಭಿಷೇಕ್‍ನನ್ನು ಮಂಗಳವಾರ ಅಪಹರಿಸಿದ್ದೆ. ಆದರೆ ಆತ ಜೋರಾಗಿ ಅಳಲು ಪ್ರಾರಂಭಿಸಲು ಶುರುಮಾಡಿದ. ಇದರಿಂದ ನಾನು ಆತನನ್ನು ಕೊಂದು ಸುಟ್ಟು ಹಾಕಿದೆ ಎಂದು ಪೊಲೀಸರ ಬಳಿ ಬಾಯಿ ಬಿಟ್ಟಿದ್ದಾನೆ.

iphone x photo

ಘಟನೆ ಸಂಬಂಧ ಅಭಿಷೇಕ್ ತಂದೆ ದೂರಿನ ಆಧಾರ ಮೇಲೆ ಆರೋಪಿ, ಆತನ ತಂದೆ ಹಾಗೂ ಸಹೋದರರನ್ನು ಬಂಧಿಸಿದ್ದಾರೆ. ಘಟನೆ ಸಂಬಂಧ ಮಣಿಪುರ ಪೊಲೀಸರು ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 302 (ಕೊಲೆ), 364 ಎ (ಅಪಹರಣ ಹಾಗೂ ಹಲ್ಲೆ) 201 (ಸಾಕ್ಷ್ಯ ನಾಶ) ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಅಭಿಷೇಕ್ ತಂದೆ ಸರ್ವೇಶ್ ಯಾದವ್, ಕೇವಲ 17 ವರ್ಷದ ಬಾಲಕನೊಬ್ಬನೇ ಹತ್ಯೆ ಮಾಡಿ, ಆತನನ್ನು ಸುಟ್ಟು ಹಾಕಿ ನಂತರ ಗುಂಡಿ ತೆಗೆದು ಹೂಳಲು ಹೇಗೆ ಸಾಧ್ಯ? ಇದಕ್ಕೆ ಆತನ ಕುಟುಂಬದವರು ಸಹ ಬೆಂಬಲ ನೀಡಿದ್ದಾರೆ. ನನ್ನ ಮಗನ ಹತ್ಯೆ ಪೂರ್ವನಿಯೋಜಿತ ಕೊಲೆ ಎಂದು ತಮ್ಮ ಆಕ್ರೋಶ ತೋಡಿಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:boyI PhonekidnapmobileMurderPublic TVuttarapradeshyoung manಅಪಹರಣಉತ್ತರಪ್ರದೇಶಐ ಫೋನ್ಪಬ್ಲಿಕ್ ಟಿವಿಪೊಲೀಸ್ಬಾಲಕಮೊಬೈಲ್ಯುವಕಹತ್ಯೆ
Share This Article
Facebook Whatsapp Whatsapp Telegram

Cinema news

Supreme Court and Ramya
ಪುರುಷರ ಮನಸ್ಸನ್ನು ಅರ್ಥ ಮಾಡ್ಕೊಳ್ಳಕ್ಕೆ ಆಗಲ್ಲ, ಹಾಗಾದ್ರೆ ಎಲ್ಲರನ್ನೂ ಜೈಲಿಗೆ ಹಾಕ್ಬೇಕಾ? – ರಮ್ಯಾ ವಿವಾದಾತ್ಮಕ ಪೋಸ್ಟ್
Latest Sandalwood Top Stories
yash 4
ನಿಮ್ಮನ್ನ ನೋಡೋಕೆ ನಾನೂ ಕಾಯ್ತಿದ್ದೀನಿ ಎಂದ ಯಶ್
Cinema Latest Sandalwood Top Stories
katrina Kaif and vicky kaushal
ಪುತ್ರನಿಗೆ `ವಿಹಾನ್‌ʼ ಎಂದು ಹೆಸರಿಟ್ಟ ಕತ್ರೀನಾ-ವಿಕ್ಕಿ ಕೌಶಲ್ 
Bollywood Cinema Latest Top Stories
Koragajja Sudheer Atthavar
ಕೊರಗಜ್ಜ ಚಿತ್ರದ ಹಾಡುಗಳಿಗೆ ರೀಲ್ಸ್: ನಿರ್ದೇಶಕ ಸುಧೀರ್ ಅತ್ತಾವರ್ ಸ್ಪಷ್ಟನೆ
Cinema Latest Sandalwood Top Stories

You Might Also Like

US Forces Seize Russia Flagged Oil Tanker
Latest

ಅಟ್ಲಾಂಟಿಕ್‌ನಲ್ಲಿ ರಷ್ಯಾ ಧ್ವಜವಿದ್ದ ತೈಲ ಟ್ಯಾಂಕರ್ ವಶಪಡಿಸಿಕೊಂಡ ಯುಎಸ್ ಪಡೆಗಳು

Public TV
By Public TV
56 seconds ago
A.Chandrashekhar Udupa
Latest

ಸಾಲಿಗ್ರಾಮ ಡಿವೈನ್‌ ಪಾರ್ಕ್‌ ಸಂಸ್ಥಾಪಕ ಎ.ಚಂದ್ರಶೇಖರ್‌ ಉಡುಪ ಹೃದಯಾಘಾತದಿಂದ ನಿಧನ

Public TV
By Public TV
54 minutes ago
supreme Court 1
Court

ನಾಯಿಯ ಮನಸ್ಸು ಓದಲು ಸಾಧ್ಯವಿಲ್ಲ – ಬೀದಿ ನಾಯಿಗಳ ಬಗ್ಗೆ ಸುಪ್ರೀಂ ಅಭಿಪ್ರಾಯ

Public TV
By Public TV
54 minutes ago
Train
Bengaluru City

ಸಂಕ್ರಾಂತಿ; ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
1 hour ago
Bengaluru Bagalgunte Techie Suicide
Bengaluru City

Bengaluru | ಅಪಾರ್ಟ್‌ಮೆಂಟ್‌ನ 16ನೇ ಫ್ಲೋರ್‌ನಿಂದ ಬಿದ್ದು ಟೆಕ್ಕಿ ಆತ್ಮಹತ್ಯೆ

Public TV
By Public TV
2 hours ago
Koppal Gavi Mutt Fair
Districts

ಗವಿಮಠ ಜಾತ್ರೆಯ ಪ್ರಸಾದದಲ್ಲಿ ವಿಶೇಷ – 2 ಲಕ್ಷಕ್ಕೂ ಹೆಚ್ಚು ಹಪ್ಪಳ ವಿತರಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?