Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಪ್ರಿಯತಮೆಗೆ ಐ-ಫೋನ್ ಖರೀದಿಸಲು ಬಾಲಕನ ಅಪಹರಿಸಿ ಹತ್ಯೆಗೈದ ಅಪ್ರಾಪ್ತನ ಬಂಧನ!

Public TV
Last updated: October 11, 2018 5:12 pm
Public TV
Share
3 Min Read
AGRA MURDER
SHARE

ಲಕ್ನೋ: ತನ್ನ ಪ್ರಿಯತಮೆಗೆ ಐ-ಫೋನ್ ಕೊಡಬೇಕೆಂಬ ಉದ್ದೇಶದಿಂದ 14 ವರ್ಷದ ಬಾಲಕನನ್ನು ಅಪಹರಿಸಿ ಹತೈಗೈದ 17 ವರ್ಷದ ಯುವಕನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

ಹೌದು, ಪ್ರಿಯತಮೆಗೆ ಐ-ಫೋನ್ ಕೊಡಿಸಬೇಕೆಂಬ ಉದ್ದೇಶದಿಂದ 17 ವರ್ಷ ಯುವಕನೊಬ್ಬ 14 ವರ್ಷದ ಬಾಲಕನನ್ನು ಅಪಹರಿಸಿ, ಬಳಿಕ ಬರ್ಬರವಾಗಿ ಹತ್ಯೆ ಮಾಡಿ, ಸುಟ್ಟುಹಾಕಿದ್ದರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪುರ ಪೊಲೀಸರು ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

AGRA MURDER 2

14 ವರ್ಷದ ಅಭಿಷೇಕ್ ಮೃತ ಬಾಲಕ. ಮೃತ ಬಾಲಕನ ತಂದೆ ಸರ್ವೇಶ್ ಯಾದವ್ ಖಾಸಗಿ ಕಂಪನಿಯ ಬಸ್ ಚಾಲಕನಾಗಿದ್ದಾರೆ. ಸರ್ವೇಶ್ ಆರೋಪಿಯ ತಂದೆಯ ಮನೆಯಲ್ಲಿ ಬಾಡಿಗೆಗಿದ್ದರು. ಅಲ್ಲದೇ ಆರೋಪಿಯ ತಂದೆಯೂ ಸಹ ಸರ್ವೇಶ್ ಯಾದವ್ ಕಂಪನಿಯಲ್ಲೇ ಬಸ್ ನಿರ್ವಾಹಕರಾಗಿದ್ದರು.

ಏನಿದು ಘಟನೆ?
ಕಳೆದ ಮಂಗಳವಾರ ಸಂಜೆ 8 ನೇ ತರಗತಿ ಓದುತ್ತಿದ್ದ ಅಭಿಷೇಕ್ ಕೋಚಿಂಗ್ ಕ್ಲಾಸ್‍ಗೆ ಹೋಗಿದ್ದವನು ವಾಪಾಸ್ಸು ಬಂದಿರಲಿಲ್ಲ. ಅದೇ ದಿನ ಸಂಜೆ ಅಭಿಷೇಕ್ ತಾಯಿ ಹಾಗೂ ತಂದೆಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ನಿಮ್ಮ ಮಗನನ್ನು ಅಪಹರಿಸಿದ್ದು, ಬಿಡುಗಡೆ ಮಾಡಲು 20 ಲಕ್ಷ ರೂಪಾಯಿ ನೀಡುವಂತೆ ಬೆದರಿಕೆ ಇಟ್ಟಿದ್ದರು. ಕೂಡಲೇ ಎಚ್ಚೆತ್ತ ಪೋಷಕರು ಶಾಲೆ ಹಾಗೂ ಕೋಚಿಂಗ್ ಸೆಂಟರ್ ಬಳಿ ವಿಚಾರಿಸಿದಾಗ ಮಗ ನಾಪತ್ತೆಯಾಗಿರುವುದು ತಿಳಿದು ಬಂದಿದೆ.

AGRA MURDER 4

ಕೂಡಲೇ ಆರೋಪಿಗೆ ಕರೆ ಮಾಡಿದ್ದ ಪೋಷಕರು, ಅಷ್ಟು ದೊಡ್ಡ ಮೊತ್ತದ ಹಣವನ್ನು ಹೊಂದಿಸಲು ನಮ್ಮಿಂದ ಸಾಧ್ಯವಿಲ್ಲ. ನಮಗೆ ನಾಳೆ ಬೆಳಗ್ಗೆಯವರೆಗೂ ಸಮಯ ಕೊಡುವಂತೆ ಕೇಳಿಕೊಂಡಿದ್ದರು. ಇದರ ಜೊತೆ ಪೋಷಕರು ಮಣಿಪುರ ಪೊಲೀಸ್ ಠಾಣೆಯಲ್ಲಿ ಅಪಹರಣ ದೂರು ದಾಖಲಿಸಿದ್ದರು.

ಪತ್ತೆಯಾಗಿದ್ದು ಹೇಗೆ?
ಮಣಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು, ಕರೆ ಬಂದಿದ್ದರ ಕುರಿತು ತನಿಖೆ ನಡೆಸಿದರು. ತನಿಖೆ ವೇಳೆ ಅಭಿಷೇಕ್ ವಾಸವಿದ್ದ ಮನೆಯ ಆಸುಪಾಸಿನಲ್ಲೇ ಕರೆ ಮಾಡಿರುವುದು ಪತ್ತೆಯಾಗಿತ್ತು. ಅಲ್ಲದೆ ಕರೆ ಮಾಡಿದ್ದ ಮೊಬೈಲ್ ನಂಬರ್ ಅನ್ನು ಪರೀಕ್ಷಿಸಿದಾಗ ಅದು ನಕಲಿ ದಾಖಲೆಗಳಿಂದ ಖರೀದಿಸಿರುವುದು ಬೆಳಕಿಗೆ ಬಂದಿತ್ತು.

AGRA MURDER 3

ಮೊಬೈಲ್ ನೆಟ್‍ವರ್ಕ್ ಮಾಹಿತಿ ಕಲೆ ಹಾಕಿದ ಪೊಲೀಸರಿಗೆ ಮೊಬೈಲ್‍ನಲ್ಲಿ ಮತ್ತೊಂದು ಸಿಮ್ ಸಂಖ್ಯೆ ದಾಖಲಾಗಿರುವುದು ಪತ್ತೆಯಾಗಿತ್ತು. ಅದನ್ನು ಪರೀಕ್ಷಿಸಿದಾಗ ಆ ಮೊಬೈಲ್ ಸಂಖ್ಯೆ ಆರೋಪಿಯ ಸಹೋದರಿಗೆ ಸೇರಿದ ನಂಬರ್ ಎನ್ನುವುದು ಬೆಳಕಿಗೆ ಬಂದಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿ ಮನೆ ದಾಳಿ ನಡೆಸಿ ಅಪಹರಣಕಾರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಬಂಧಿತ ಅಪ್ರಾಪ್ತ ಬಾಲಕನನ್ನು ತೀವ್ರವಾಗಿ ವಿಚಾರಣೆಗೆ ಒಳಪಡಿಸಿದಾಗ, ನನ್ನ ಪ್ರಿಯತಮೆಗಾಗಿ ಐ-ಫೋನ್ ಖರೀದಿಸಲು ಅಭಿಷೇಕ್‍ನನ್ನು ಮಂಗಳವಾರ ಅಪಹರಿಸಿದ್ದೆ. ಆದರೆ ಆತ ಜೋರಾಗಿ ಅಳಲು ಪ್ರಾರಂಭಿಸಲು ಶುರುಮಾಡಿದ. ಇದರಿಂದ ನಾನು ಆತನನ್ನು ಕೊಂದು ಸುಟ್ಟು ಹಾಕಿದೆ ಎಂದು ಪೊಲೀಸರ ಬಳಿ ಬಾಯಿ ಬಿಟ್ಟಿದ್ದಾನೆ.

iphone x photo

ಘಟನೆ ಸಂಬಂಧ ಅಭಿಷೇಕ್ ತಂದೆ ದೂರಿನ ಆಧಾರ ಮೇಲೆ ಆರೋಪಿ, ಆತನ ತಂದೆ ಹಾಗೂ ಸಹೋದರರನ್ನು ಬಂಧಿಸಿದ್ದಾರೆ. ಘಟನೆ ಸಂಬಂಧ ಮಣಿಪುರ ಪೊಲೀಸರು ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 302 (ಕೊಲೆ), 364 ಎ (ಅಪಹರಣ ಹಾಗೂ ಹಲ್ಲೆ) 201 (ಸಾಕ್ಷ್ಯ ನಾಶ) ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಅಭಿಷೇಕ್ ತಂದೆ ಸರ್ವೇಶ್ ಯಾದವ್, ಕೇವಲ 17 ವರ್ಷದ ಬಾಲಕನೊಬ್ಬನೇ ಹತ್ಯೆ ಮಾಡಿ, ಆತನನ್ನು ಸುಟ್ಟು ಹಾಕಿ ನಂತರ ಗುಂಡಿ ತೆಗೆದು ಹೂಳಲು ಹೇಗೆ ಸಾಧ್ಯ? ಇದಕ್ಕೆ ಆತನ ಕುಟುಂಬದವರು ಸಹ ಬೆಂಬಲ ನೀಡಿದ್ದಾರೆ. ನನ್ನ ಮಗನ ಹತ್ಯೆ ಪೂರ್ವನಿಯೋಜಿತ ಕೊಲೆ ಎಂದು ತಮ್ಮ ಆಕ್ರೋಶ ತೋಡಿಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:boyI PhonekidnapmobileMurderPublic TVuttarapradeshyoung manಅಪಹರಣಉತ್ತರಪ್ರದೇಶಐ ಫೋನ್ಪಬ್ಲಿಕ್ ಟಿವಿಪೊಲೀಸ್ಬಾಲಕಮೊಬೈಲ್ಯುವಕಹತ್ಯೆ
Share This Article
Facebook Whatsapp Whatsapp Telegram

Cinema Updates

Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
13 hours ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
18 hours ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
2 days ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
2 days ago

You Might Also Like

Hassan 01
Districts

ಬೆಂಗಳೂರು ಕಾಲ್ತುಳಿದಲ್ಲಿ RCB ಅಭಿಮಾನಿ ಸಾವು – ಮಗನ ಸಮಾಧಿ ಮೇಲೆ ಮಲಗಿ ತಂದೆ ಗೋಳಾಟ

Public TV
By Public TV
20 minutes ago
Teens Body Found In Suitcase In Bengaluru 7 Arrested From Bihar
Bengaluru City

ಬೆಂಗಳೂರು | ಸೂಟ್‌ಕೇಸ್‌ನಲ್ಲಿ ಬಾಲಕಿ ಶವ ಪತ್ತೆ ಪ್ರಕರಣ – ಬಿಹಾರದಲ್ಲಿ 7 ಆರೋಪಿಗಳು ಅರೆಸ್ಟ್‌

Public TV
By Public TV
29 minutes ago
US Congressman
Latest

ಭಯೋತ್ಪಾದನೆ ನಿರ್ಮೂಲನೆ ಮಾಡಿ, ಜೈಶ್‌ ಉಗ್ರ ಸಂಘಟನೆ ವಿರುದ್ಧ ಕ್ರಮ ತಗೊಳ್ಳಿ – ಪಾಕ್‌ಗೆ ಅಮೆರಿಕ ವಾರ್ನಿಂಗ್‌

Public TV
By Public TV
49 minutes ago
Gopala Krishna Beluru
Bengaluru City

ರಾಜ್‌ಕುಮಾರ್‌ ತೀರಿಕೊಂಡಾಗ 4 ಜನಕ್ಕೆ ಗುಂಡು ಹೊಡೆಸಿದ್ರು, ಆಗ ಕುಮಾರಸ್ವಾಮಿ ರಾಜೀನಾಮೆ ಕೊಟ್ರಾ? – ಬೇಳೂರು ಗೋಪಾಲಕೃಷ್ಣ

Public TV
By Public TV
1 hour ago
KSCA 3
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – KSCA ಕಾರ್ಯದರ್ಶಿ ಸೇರಿ ಇಬ್ಬರು ಪದಾಧಿಕಾರಿಗಳು ರಾಜೀನಾಮೆ

Public TV
By Public TV
2 hours ago
BRICS
Latest

ಪಹಲ್ಗಾಮ್‌ ದಾಳಿಗೆ ಖಂಡನೆ – ಭಯೋತ್ಪಾದನೆ ವಿರುದ್ಧ ಭಾರತದ ಹೋರಾಟಕ್ಕೆ ʻಬ್ರಿಕ್ಸ್‌ʼ ಸದಸ್ಯ ರಾಷ್ಟ್ರಗಳ ಬೆಂಬಲ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?