ಚೆನ್ನೈ: ವ್ಯಕ್ತಿಯೊಬ್ಬರ ಮೇಲೆ ಹುಡುಗರ ಗ್ಯಾಂಗ್ವೊಂದು ಏಕಾಏಕಿ ದಾಳಿ ನಡೆಸಿರುವ ಘಟನೆ ತಮಿಳುನಾಡಿನ ತಿರುಚಿರಾಪಳ್ಳಿ ನಗರದಲ್ಲಿ ನಡೆದಿದೆ. ಇದೀಗ ಮೂವರು ಹುಡುಗರನ್ನು ಪೊಲೀಸರು ಬಂಧಿಸಿದ್ದಾರೆ.
ವ್ಯಕ್ತಿಯ ಸಹೋದರಿಯನ್ನು ಬೆದರಿಸಿ ಆಕೆಯ ಮೊಬೈಲ್ ಫೋನ್ ಕಸಿದುಕೊಂಡು ಹೋಗುತ್ತಿದ್ದ ಹುಡುಗರನ್ನು ವ್ಯಕ್ತಿ ತಡೆದಿದ್ದು, ಮೊಬೈಲ್ ಫೋನ್ ಹಿಂದಿರುಗಿಸುವಂತೆ ಕೇಳಿದ್ದಾರೆ. ಈ ವೇಳೆ ವ್ಯಕ್ತಿ ಹಾಗೂ ಹುಡುಗರ ನಡುವೆ ಮಾತಿನ ಚಕಮಕಿ ನಡೆದಿದ್ದು, ಹುಡುಗನೊಬ್ಬ ಸೊಂಟಕ್ಕೆ ಸಿಕ್ಕಿಸಿಕೊಂಡಿದ್ದ ಚಾಕುವಿನಿಂದ ವ್ಯಕ್ತಿಯ ಕೈ ಕತ್ತರಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಯುಪಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ ನಾನೇ ಎಂಬಂತೆ ಮಾತನಾಡಿಲ್ಲ: ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಈ ಘಟನೆ ಸಮೀಪದಲ್ಲಿರುವ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಜನವರಿ 20 ರಂದು ಘಟನೆ ಸಂಭವಿಸಿದೆ. ಸದ್ಯ ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಿರಾಜುದ್ದೀನ್ ಎಂದು ಗುರುತಿಸಲಾಗಿದ್ದು, ಈ ಸಂಬಂಧ ಅರಿಯಮಂಗಲಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಮೂವರು ಹುಡುಗರನ್ನು ಬಂಧಿಸಲಾಗಿದ್ದು, ಘಟನೆ ಕುರಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕೋವಿಡ್ ಯಾರನ್ನೂ ಬಿಟ್ಟಿಲ್ಲ, ದೇವೇಗೌಡರಿಗೆ ಕೊರೊನಾ ತೀವ್ರತೆ ಇಲ್ಲ: ಬೊಮ್ಮಾಯಿ