ತುಮಕೂರು: ಅಪ್ರಾಪ್ತ ಪ್ರೇಮಿಗಳು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧುಗಿರಿ ತಾಲೂಕಿನ ಸುದ್ದೇಗುಂಟೆ ಗ್ರಾಮದ ಹೊರವಲಯದ ತೋಟದಲ್ಲಿ ನಡೆದಿದೆ.
ಸಂದೇಶ್(17) ಹಾಗೂ ಮೀನಾಕ್ಷಿ(17) ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತ ಪ್ರೇಮಿಗಳು. ಸಂದೇಶ್ ಹಾಗೂ ಮೀನಾಕ್ಷಿ ಕಳೆದ ಎರಡು ವರ್ಷದಿಂದ ಪ್ರೀತಿಸುತ್ತಿದ್ದರು. ಇದೀಗ ಕುಟುಂಬದವರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗುತ್ತಿದೆ.
ಸದ್ಯ ಈ ಸಂಬಂಧ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv