ಚಿಕ್ಕೋಡಿ: ಅಪ್ರಾಪ್ತ (Minor) ವಯಸ್ಸಿನ ಮಕ್ಕಳು ಅರ್ಚಕನ ಬೈಕ್ ಸುಟ್ಟು ವಿಕೃತಿ ಮೆರೆದಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ (Kudachi) ಪಟ್ಟಣದಲ್ಲಿ ನಡೆದಿದೆ.
ದಾರಿ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ ಗೆ ಮಕ್ಕಳ ಗುಂಪು ಬೆಂಕಿ ಹಚ್ಚಿದೆ. ಕುಡಚಿ ಪಟ್ಟಣದ ವಾರ್ಡ್ ನಂಬರ ಎರಡರ ಮರಾಠಾ ಗಲ್ಲಿಯಲ್ಲಿ ಶನಿವಾರ ರಾತ್ರಿ ಪಟ್ಟಣದ ಅರ್ಚಕ ಪ್ರವೀಣ್ ಕುಲಕರ್ಣಿ ಎಂಬುವವರಿಗೆ ಸೇರಿದ ಬೈಕಗೆ ಬೆಂಕಿ ಹಚ್ಚಲಾಗಿದೆ.
ಮಕ್ಕಳ ವಿಕೃತಿ ಮೆರೆದಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಕುಡಚಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
 


 
		 
		 
		 
		 
		
 
		 
		 
		 
		