Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಕ್ಷಕ್ಕೆ ಮೋಸ ಮಾಡಲ್ಲ, ಎಲ್ಲಿಂದ್ಲೋ ಬಂದು ಮಂಡ್ಯ ನಮ್ಮದೇ ಅನ್ನೋರಿಗೆ ಮಣೆ ಹಾಕ್ಬೇಡಿ: ಎಸ್‍ಟಿಎಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪಕ್ಷಕ್ಕೆ ಮೋಸ ಮಾಡಲ್ಲ, ಎಲ್ಲಿಂದ್ಲೋ ಬಂದು ಮಂಡ್ಯ ನಮ್ಮದೇ ಅನ್ನೋರಿಗೆ ಮಣೆ ಹಾಕ್ಬೇಡಿ: ಎಸ್‍ಟಿಎಸ್

Districts

ಪಕ್ಷಕ್ಕೆ ಮೋಸ ಮಾಡಲ್ಲ, ಎಲ್ಲಿಂದ್ಲೋ ಬಂದು ಮಂಡ್ಯ ನಮ್ಮದೇ ಅನ್ನೋರಿಗೆ ಮಣೆ ಹಾಕ್ಬೇಡಿ: ಎಸ್‍ಟಿಎಸ್

Public TV
Last updated: November 21, 2021 5:37 pm
Public TV
Share
3 Min Read
MND STS 3
SHARE

ಮಂಡ್ಯ: ನಾನು ರಾಜಕೀಯ ಕುಟುಂಬದಿಂದ ಬಂದವನಲ್ಲ. ನಾನು ನನ್ನ ಸ್ವಂತ ಶಕ್ತಿಯಿಂದ ರಾಜಕೀಯ ಪ್ರವೇಶ ಮಾಡಿದೆ. 20-22 ವರ್ಷಗಳ ಕಾಲ ಎಲ್ಲಾ ಹಂತಗಳನ್ನು ಮುಗಿಸಿ ಈ ಹಂತಕ್ಕೆ ಬಂದಿದ್ದೇನೆ. ಯಡಿಯೂರಪ್ಪ ಅವರ ಆಶೀರ್ವಾದದಿಂದ ಸಹಕಾರ ಸಚಿವನಾಗಿದ್ದೇನೆ. ನಾನು ಪಕ್ಷಕ್ಕೆ ಮೋಸ ಮಾಡಿಲ್ಲ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು.

ಮಂಡ್ಯದಲ್ಲಿ ಆಯೋಜಿಸಿದ್ದ ಜನ ಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಸಚಿವರು, ನಮ್ಮ ಇಲಾಖೆಯಲ್ಲಿ ವಿಶೇಷ ಕರ್ತವ್ಯಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನನ್ನ ಬಳಿ ಬಂದು ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿದಾಕ್ಷಣವೇ ಕೆಲಸದಿಂದ ತೆಗೆಯಲಾಯಿತು. ನಿನ್ನ ಹಣೆಬರಹ, ನೀನುಂಟೂ, ನಿನ್ನ ಚುನಾವಣೆ ಉಂಟು ಎಂದು ಹೇಳಿ ಕಳುಹಿಸಿದೆ ಎಂದರು.

MND STS 1

ನಾನು ಸಹಕಾರ ಸಚಿವರಾದ ಬಳಿಕ ನಮ್ಮ ಪಕ್ಷದ ಹಿರಿಯ ಮುಖಂಡರೊಬ್ಬರು ನನಗೆ ಕರೆ ಮಾಡಿ, ನಮ್ಮ ಹುಡುಗನೊಬ್ಬನಿದ್ದಾನೆ. ಆತನನ್ನು ನಿಮ್ಮ ಇಲಾಖೆಗೆ ತೆಗೆದುಕೊಳ್ಳಿ. ಹಿರಿಯರ ಮಾತಿಗೆ ಗೌರವಕೊಟ್ಟು ವಿಶೇಷ ಕರ್ತವ್ಯಾಧಿಕಾರಿಯಾಗಿ ತೆಗೆದುಕೊಳ್ಳಲಾಯಿತು. 7-8 ದಿನದ ಹಿಂದೆ ನನ್ನ ಮನೆಗೆ ಬಂದು ನಾನು ಎಂಎಲ್ ಸಿ ಟಿಕೆಟ್ ಆಕಾಂಕ್ಷಿ ಆಗಿದ್ದೇನೆ ಎಂದರು. ಎಲ್ಲಿಂದ ಎಂದು ಕೇಳಿದ್ದಕ್ಕೆ ಮಂಡ್ಯ ಅಂದರು. ಆಗ ಆಶ್ಚರ್ಯ ಆಯ್ತು. ನಿನಗೆ ದೇವರು ಒಳ್ಳೇದು ಮಾಡಲಿ ಎಂದು ಹೇಳಿ ಕೆಲಸದಿಂದ ತೆರವು ಮಾಡಿದೆ. ಕೂಡಲೇ ಈ ವಿಚಾರವನ್ನು ಪಕ್ಷದ ನಾಯಕರ ಗಮನಕ್ಕೆ ತಂದೆ ಎಂದರು.

MND STS 5

ಮಂಡ್ಯದಲ್ಲಿ ಟಿಕೆಟ್ ಯಾರಿಗೆ ಕೊಡಬೇಕು ಅಂತ ನಾರಾಯಣಗೌಡ ಮಾತನಾಡಿದ್ದರು. ಈ ವಿಚಾರವಾಗಿ ಮೈಸೂರಿನಲ್ಲಿ ಕೂಡ ಪ್ರಸ್ತಾಪವಾಗಿತ್ತು. ಆದರೆ ನಮ್ಮ ಇಲಾಖೆಯಲ್ಲಿ ಕೆಲಸ ಮಾಡಿದ ವ್ಯಕ್ತಿ ಇಲ್ಲಿಗೆ ಮತ್ತೊಂದು ಪಕ್ಷದಿಂದ ಅಭ್ಯರ್ಥಿ ಆಗುತ್ತಾರೆ ಎಂಬ ಮುನ್ಸೂಚನೆ ಕೂಡ ಸಿಗಲಿಲ್ಲ. ಇದು ವಾಸ್ತವ. ಕೆಲವರು ಮಂಡ್ಯ ನಮ್ಮದೇ, ಇಲ್ಲಿ ನಾವೇ ಎಂದುಕೊಂಡಿದ್ದಾರೆ. ಎಲ್ಲಿಂದಲೋ ಬಂದು ನಾವೇ ನಾವೇ ಎಂದುಕೊಂಡಿರುವವರನ್ನು ಇಲ್ಲಿಂದ ಹೋಗಿಸುವುದು ನಿಮ್ಮ ಕೈಯಲಿ ಇದೆ ಎಂದು ಮತದಾರರಿಗೆ ಕರೆಕೊಟ್ಟರು.

MND STS

ಸಹಕಾರ ಇಲಾಖೆ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಕಾಂಗ್ರೆಸ್ಸಿಗೆ ಹೋಗಿದ್ದಾರೆ. ಮುಂದೆ ಸೋಮಶೇಖರ್ ಕೂಡ ಕಾಂಗ್ರೆಸ್ಸಿಗೆ ಹೋಗ್ತಾರೆ ಎಂದು ಮಣ್ಣಿನ ಮಗ ಎಂದು ಹೇಳಿಕೊಳ್ಳುವ ಮಾಜಿ ಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ. ನಮ್ಮ ತಂದೆ ವೆಟರ್ನರಿ ಇನ್ಸ್ ಪೆಕ್ಟರ್. ನಾನು ರಾಜಕೀಯ ಕುಟುಂಬದಿಂದ ಬಂದವನಲ್ಲ. ನಿಜವಾದ ಮಣ್ಣಿನ ಮಕ್ಕಳು ಸರ್ಕಾರದಲ್ಲಿ ಕೃಷಿ, ಸಹಕಾರ ಇಲಾಖೆ ಕೇಳಬೇಕು. ಆದರೆ ಈ ಎರಡು ಇಲಾಖೆ ಬಿಟ್ಟು ಪಿಡಬ್ಲ್ಯೂಡಿ, ಹಣಕಾಸು, ಇಂಧನ ಇಲಾಖೆ ಕೇಳ್ತಾರಾ ಎಂದು ಪ್ರಶ್ನಿಸಿದರು.

MND STS 2

ಅವರು ಮಾತ್ರ ಮಣ್ಣಿನ ಮಕ್ಕಳು, ನಾವು ಮಣ್ಣಿನ ಮಕ್ಕಳಲ್ಲವೇ ಎಂದು ನಾರಾಯಣಗೌಡ ನನ್ನ ಬಳಿ ಬಂದು ಹೇಳಿದಾಗ ನೀನು ಮಣ್ಣಿನ ಮಗನಾದರೆ ಈ ಸರ್ಕಾರ ತೆಗಿ ಎಂದು ತಮಾಷೆಗೆ ಹೇಳಿದೆ. ಆದರೆ ಅದನ್ನು ಮಾಡೇ ಬಿಟ್ಟರು. ನಾವು ಬಾಂಬೆಗೆ ಹೋಗುವುದಕ್ಕೆ ಮುಂಚೆ ಅವರು ಕೂತಿದ್ದರು ಎಂದು ಹಿಂದಿನ ಘಟನಾವಳಿಗಳನ್ನು ನೆನೆಪಿಸಿದರು. ಯಾವುದೇ ಖಾತೆ ಕೊಡಲಿ ಅದಕ್ಕೆ ಜೀವ ತುಂಬಿ ಕೆಲಸ ಮಾಡುವವರು ನಾರಾಯಣಗೌಡ. ಅವರು ಮಂಡ್ಯದಲ್ಲಿ ಸೋಲುತ್ತಾರೆ ಎಂದೇ ಎಲ್ಲರೂ ಊಹಿಸಿದ್ದರು. ಆದರೆ ನಾನು 100% ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿ, ಮಂಡ್ಯದ ಜನರ ಪ್ರೀತಿ ವಿಶ್ವಾಸ ಗಳಿಸಿ ಗೆದ್ದು ಬಂದರು. ಇದನ್ನೂ ಓದಿ: ಗೆಹ್ಲೋಟ್ ಸರ್ಕಾರದ ಸಚಿವ ಸಂಪುಟ ಪುನಾರಚನೆ – 15 ಮಂದಿ ಸಂಪುಟ ಸೇರ್ಪಡೆ

MND STS 4

ಇದುವರೆಗೆ ಐದು ವಿಧಾನಪರಿಷತ್ ಚುನಾವಣೆ ನೋಡಿದ್ದೇನೆ. ಟಿಕೆಟ್ ಸಿಗಲಿ, ಬಿಡಲಿ ಗ್ರಾಪಂ ಸದಸ್ಯರ ಮನೆಮನೆಗೆ ತೆರಳಿ, ಅವರನ್ನು ಭೇಟಿ ಮಾಡಿ ಅವರ ಕುಂದುಕೊರತೆಗಳನ್ನು ಆಲಿಸುವ ವ್ಯಕ್ತಿ ಇದ್ದರೆ ಅದು ಮಂಜು ಮಾತ್ರ. ಗ್ರಾಪಂ ಸದಸ್ಯರ ಮೇಲಿನ ಅವರ ಕಾಳಜಿ ನೋಡಿದರೆ ಅವರು ನಿಮ್ಮ ಪರವಾಗಿ ಕೆಲಸ ಮಾಡುತ್ತಾರೆ ಎಂಬುದು ಗೊತ್ತಾಗುತ್ತದೆ. ಅದೇ ಅಪ್ಪಾಜಿಗೌಡ ಎಂದಾದರೂ ಗ್ರಾಪಂ ಸದಸ್ಯರ ಮನೆಗೆ ಭೇಟಿ ಕೊಟ್ಟಿದ್ದಾರೆಯೇ? ಎಲ್ಲಿ ಸೈಟ್ ಇದೆ, ಎಲ್ಲಿ ಜಮೀನಿದೆ? ಯಾವುದನ್ನು ಮಾರಬೇಕು, ಯಾವುದನ್ನು ಖರೀದಿಸಬೇಕು ಎಂಬುದರ ಕಡೆಯಷ್ಟೇ ವಿಶೇಷ ಗಮನ ಕೊಡುತ್ತಾರೆ ಎಂದು ಹೇಳಿದರು.

MND STS 6

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಈಶ್ವರಪ್ಪ ಕೊಟ್ಟ ಒಂದು ಹೇಳಿಕೆಯಿಂದ ಸಿದ್ದರಾಮಯ್ಯ 40 ಸಾವಿರ ಮತಗಳ ಅಂತರದಲ್ಲಿ ಸೋತರು. ಈಶ್ವರಪ್ಪ, ಶೋಭಾ ಕರಂದ್ಲಾಜೆ ಅವರು ರೈತರ ಕಲ್ಯಾಣಕ್ಕೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ 7 ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದು ಎಲ್ಲಾ ಕಡೆ ಯಶಸ್ವಿಯಾಗಿದೆ. ಇಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

MND STS 1

ಹಾಲಿಗೆ ನೀರು ಬೆರೆಸಿ ಮೋಸದಿಂದ ಸಂಪಾದನೆ ಮಾಡುವುದನ್ನು ಎಲ್ಲೂ ಕಂಡಿಲ್ಲ. ಈ ಕುರಿತು ಸಿಒಡಿ ತನಿಖೆಗೆ ಆದೇಶಿಸಿದ್ದು ಶೀಘ್ರದಲ್ಲೇ ವರದಿ ಕೈ ಸೇರಲಿದ್ದು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ರಾಜಸ್ಥಾನ : ಎಲ್ಲ ಸಚಿವರಿಂದ ರಾಜೀನಾಮೆ ಪಡೆದ ಗೆಹ್ಲೋಟ್‌

TAGGED:mandyaST somashekharvidhanaparishad electionಎಸ್ ಟಿ ಸೋಮಶೇಖರ್ಮಂಡ್ಯವಿಧಾನ ಪರಿಷತ್ ಚುನಾವಣೆ
Share This Article
Facebook Whatsapp Whatsapp Telegram

Cinema news

JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema

You Might Also Like

india tanker ships
Latest

ಇರಾನ್‌ಗೆ ಸಂಬಂಧಿಸಿದ 3 ಅಮೆರಿಕ ನಿಷೇಧಿತ ಟ್ಯಾಂಕರ್‌ ವಶಕ್ಕೆ ಪಡೆದ ಭಾರತ

Public TV
By Public TV
22 minutes ago
GBA Palns To Auction Property Those Who Not Paid Property Tax
Bengaluru City

ನೋಟಿಸ್ ಕೊಟ್ರು ನೋ ರೆಸ್ಪಾನ್ಸ್ – ಆಸ್ತಿ ತೆರಿಗೆ ಪಾವತಿಸದವರ ಆಸ್ತಿ ಹರಾಜಿಗೆ ಮುಂದಾದ ಜಿಬಿಎ

Public TV
By Public TV
24 minutes ago
Kolar Private Bus Accident
Crime

ಡಿವೈಡರ್‌ಗೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ – ಇಬ್ಬರಿಗೆ ಗಂಭೀರ ಗಾಯ

Public TV
By Public TV
57 minutes ago
social media ban
Latest

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌ ಆಗುತ್ತಾ?- ಭಾರತದಲ್ಲಿ ಇದು ಸಾಧ್ಯವೇ?

Public TV
By Public TV
1 hour ago
Chamarajanagar Gunda Reservoir Tiger Death
Chamarajanagar

ಸ್ಕೂಟರ್ ಕ್ಲಚ್ ವೈರ್ ಉರುಳಿಗೆ ಹುಲಿ ಬಲಿ – ಉರುಳು ಹಾಕಿದವರ ಪತ್ತೆಗೆ ಮುಂದಾದ ಅರಣ್ಯ ಇಲಾಖೆ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 17-02-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?