ವಿಜಯಪುರ: ಸರ್ಕಾರಿ ಶಾಲೆಯ ಪ್ರಾಂಶುಪಾಲರ ಕೋಣೆಯಲ್ಲಿ ಕೆಲ ಪುಡಾರಿಗಳು ದೇಹದ ಕೂದಲನ್ನು ತಗೆದು ಬಿಸಾಕಿದ ಘಟನೆ ವಿಜಯಪುರದ ಜುಮ್ನಾಳ ಗ್ರಾಮದಲ್ಲಿ ನಡೆದಿದೆ.
ಜುಮ್ನಾಳ ಸರ್ಕಾರಿ ಗಂಡು ಮಕ್ಕಳ ಶಾಲೆಯ ಪ್ರಾಂಶುಪಾಲರ ಕೋಣೆಯ ಗುರುವಾರ ರಾತ್ರಿ ಬೀಗ ಒಡೆದು ಕೋಣೆಯ ಮೇಜಿನ ಮೇಲೆ ದೇಹದ ಕೂದಲು ಮತ್ತು ಅದನ್ನು ತಗೆಯುವುದಕ್ಕೆ ಬಳಸಿದ ಬ್ಲೇಡ್ ಸೇರಿದಂತೆ ಸಾಮಗ್ರಿಗಳನ್ನು ಅಲ್ಲಿಯೇ ಬಿಸಾಡಿದ್ದಾರೆ. ಅಲ್ಲದೆ ಗುಟ್ಕಾ ಚೀಟಿಗಳನ್ನು ಎಸೆದು ಪರಾರಿಯಾಗಿದ್ದಾರೆ.
ಇಂದು ಶಾಲೆಯ ಬಾಗಿಲು ತೆರೆದಾಗ ಘಟನೆ ಬೆಳಕಿಗೆ ಬಂದಿದೆ. ಇದರಿಂದ ಶಾಲಾ ಮಕ್ಕಳು ಸೇರಿದಂತೆ ಶಾಲಾ ಸಿಬ್ಬಂದಿ ಭಯ ಭೀತರಾಗಿದ್ದು, ಕಿಡಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಕಿಡಿಗೇಡಿಗಳು ಪ್ರಾಂಶುಪಾಲರ ಕೋಣೆಯಲ್ಲಿ ಈ ರೀತಿ ಕೃತ್ಯ ಎಸಗಿರುವುದು ವಿಚಿತ್ರ ಎಂದು ಎನಿಸುತ್ತದೆ. ಈ ಕೆಲಸ ಮಾಡಿದವರನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಸ್ಥಳೀಯರಾದ ಜಿತೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv