ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಲಬುರಗಿ ತಾಲೂಕಿನ ಬಬಲಾದ್ ಗ್ರಾಮದಲ್ಲಿ ನಡೆದಿದೆ.
ಆನಂದ್ ರಾಮಪೂರೆ (30) ಕೊಲೆಯಾಗಿರುವ ರೌಡಿಶೀಟರ್ ಆಗಿದ್ದು, ಈತ ಕಲಬುರಗಿ ನಗರದ ಕಾಂತಾ ಕಾಲೋನಿ ನಿವಾಸಿಯಾಗಿದ್ದಾನೆ. ಕಳೆದ ರಾತ್ರಿ ರೌಡಿಶೀಟರ್ ಆನಂದ್ನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗುತ್ತಿದೆ.
ಆನಂದ್ ಕೊಲೆ ಸೇರಿದಂತೆ ಅನೇಕ ಪ್ರಕರಣಗಳಲ್ಲಿ ಆರೋಪಿ ಆಗಿದ್ದನು. ಈ ಬಗ್ಗೆ ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.