ಮಡಿಕೇರಿ: ದುಬಾರೆ ಮೀಸಲು ಅರಣ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ 30 ಎಕರೆ ನೆಡುತೋಪು ಬೆಂಕಿಗಾಹುತಿಯಾಗಿದೆ.
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ದುಬಾರೆ ಮೀಸಲು ಅರಣ್ಯಕ್ಕೆ ಗುರುವಾರ ಸಂಜೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಅರಣ್ಯ ಪ್ರದೇಶ ಧಗಧಗನೆ ಹೊತ್ತಿ ಉರಿದಿದೆ. ಇದರಿಂದ 30 ಎಕರೆ ನೆಡುತೋಪಿಗೆ ಹಾನಿಯಾಗಿದೆ.
ಅಗ್ನಿಶಾಮದಳ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ತಡರಾತ್ರಿವರೆಗೂ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ.
[