ಹುಬ್ಬಳ್ಳಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಠದ ಸ್ವಾಮೀಜಿಯೊಬ್ಬರ ಮೃತದೇಹ ಇದೀಗ ಬಾವಿಯಲ್ಲಿ ಪತ್ತೆಯಾಗಿದ್ದು, ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ನಗರದ ಮಂಟೂರು ರಸ್ತೆಯ ಕಲಬುರ್ಗಿಮಠದ ಶಿವಮೂರ್ತಿ ಶಿವಮಠ (30) ನಾಪತ್ತೆಯಾಗಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಶಿವಮೂರ್ತಿ ಬಳಲುತ್ತಿದ್ದರು. ಅಲ್ಲದೆ ಮೂರು ದಿನಗಳ ಹಿಂದೆ ಮನೆಯಿಂದ ನಾಪತ್ತೆ ಆಗಿದ್ರು.
ಸ್ವಾಮೀಜಿ ನಾಪತ್ತೆಯಾದ ಹಿನ್ನೆಲೆಯಲ್ಲಿ ಮನೆಯವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ರು. ಆದ್ರೆ ಗುರುವಾರ ಮಠದ ಪಕ್ಕದಲ್ಲಿರುವ ಬಾವಿಯಲ್ಲಿ ಶಿವಮೂರ್ತಿ ಸ್ವಾಮೀಜಿ ಶವವಾಗಿ ಪತ್ತೆ ಆಗಿದ್ದಾರೆ.
ಈ ಸಂಬಂಧ ಬಡಿಗೇರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಸುತ್ತಿದ್ದಾರೆ.