Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕ್ರಿಶ್ಚಿಯನ್ ಮಿಷನರಿಗಳ ಧರ್ಮ ಪ್ರಚಾರ ಕಾನೂನುಬಾಹಿರವಲ್ಲ – ಸುಪ್ರೀಂಗೆ ತಮಿಳುನಾಡು ಸರ್ಕಾರ ಅಫಿಡವಿಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಕ್ರಿಶ್ಚಿಯನ್ ಮಿಷನರಿಗಳ ಧರ್ಮ ಪ್ರಚಾರ ಕಾನೂನುಬಾಹಿರವಲ್ಲ – ಸುಪ್ರೀಂಗೆ ತಮಿಳುನಾಡು ಸರ್ಕಾರ ಅಫಿಡವಿಟ್

Court

ಕ್ರಿಶ್ಚಿಯನ್ ಮಿಷನರಿಗಳ ಧರ್ಮ ಪ್ರಚಾರ ಕಾನೂನುಬಾಹಿರವಲ್ಲ – ಸುಪ್ರೀಂಗೆ ತಮಿಳುನಾಡು ಸರ್ಕಾರ ಅಫಿಡವಿಟ್

Public TV
Last updated: May 1, 2023 3:03 pm
Public TV
Share
2 Min Read
Supreme Court
SHARE

ಚೆನ್ನೈ: ಕ್ರಿಶ್ಚಿಯನ್ ಧರ್ಮವನ್ನು ಪ್ರಚಾರ ಮಾಡುವ ಮಿಷನರಿಗಳು (Christian Mission) ಕಾನೂನುಬಾಹಿರ ಅಥವಾ ಅಸಾಂವಿಧಾನಿಕವಲ್ಲ ಎಂದು ತಮಿಳುನಾಡು ಸರ್ಕಾರ (Government of Tamil Nadu) ಸುಪ್ರೀಂ ಕೋರ್ಟ್‍ಗೆ (Supreme Court) ಅಫಿಡವಿಟ್ ಸಲ್ಲಿಸಿದೆ.

ಸಂವಿಧಾನದ 25ನೇ ವಿಧಿಯು ಪ್ರತಿಯೊಬ್ಬ ವ್ಯಕ್ತಿಗೂ ತನ್ನ ಧಾರ್ಮಿಕ ನಂಬಿಕೆಯನ್ನು ಪ್ರಚಾರ ಮಾಡುವ ಮತ್ತು ಇತರರಿಗೆ ಬೋಧಿಸುವ ಹಕ್ಕನ್ನು ನೀಡುತ್ತದೆ. ಮಿಷನರಿಗಳು ಸಾರ್ವಜನಿಕ ಸುವ್ಯವಸ್ಥೆ ಅಥವಾ ನೈತಿಕತೆಯ ವಿರುದ್ಧವಾಗಿಲ್ಲ. ಆದರೆ ಬೆದರಿಕೆ, ವಂಚನೆ, ಉಡುಗೊರೆಗಳ ಮೂಲಕ, ಮಾಟಮಂತ್ರ ಅಥವಾ ಮೂಢನಂಬಿಕೆಯ ಮೂಲಕ ಆಮಿಷ ಒಡ್ಡುವ ಧಾರ್ಮಿಕ ಮತಾಂತರವು ಅನ್ಯಾಯ ಮತ್ತು ಶೋಷಣೆ ಎನಿಸಿಕೊಳ್ಳುತ್ತದೆ ಎಂದು ಉಲ್ಲೇಖಿಸಿದೆ. ಇದನ್ನೂ ಓದಿ: ಪರಸ್ಪರ ಒಪ್ಪಿಗೆ ಇದ್ದಲ್ಲಿ ವಿಚ್ಛೇದನಕ್ಕೆ ಆರು ತಿಂಗಳ ಅಗತ್ಯವಿಲ್ಲ – ಸುಪ್ರೀಂ ತೀರ್ಪು

Court

ಧರ್ಮವನ್ನು ಪ್ರಸರಿಸುವ ಕಾರ್ಯವು ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯಕ್ಕೆ ವಿರುದ್ಧವಾಗಿದ್ದರೆ ಅದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.

ಭಾರತ ಜಾತ್ಯತೀತ ರಾಷ್ಟ್ರವಾಗಿ ಪ್ರತಿಯೊಬ್ಬ ಪ್ರಜೆಗೂ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ನೀಡಿದೆ. ಇದರಿಂದ ವ್ಯಕ್ತಿ ಯಾವುದೇ ಧರ್ಮವನ್ನು ಅನುಸರಿಸುವ ಹಕ್ಕನ್ನು ಹೊಂದಿರುವುದರಿಂದ ಆತನ ನಿರ್ಧಾರವನ್ನು ತಡೆಯಲಾಗುವುದಿಲ್ಲ ಎಂದಿದೆ.

ದೇಶದಲ್ಲಿ ಹಲವಾರು ಧರ್ಮಗಳು ಆಚರಣೆಯಲ್ಲಿವೆ. ಅಲ್ಲದೆ ವ್ಯಕ್ತಿ ತನಗೆ ಬೇಕಾದ ಧರ್ಮವನ್ನು ಆಯ್ದುಕೊಳಬಹುದು. ತನ್ನ ಧರ್ಮವನ್ನು ಶಾಂತಿಯುತವಾಗಿ ಆಚರಿಸಲು ಮತ್ತು ಪ್ರಚಾರ ಮಾಡಲು ಅವಕಾಶವಿದೆ ಇದನ್ನು ಹತ್ತಿಕ್ಕಲಾಗುವುದಿಲ್ಲ. ಮತಾಂತರ ವಿರೋಧಿ ಕಾನೂನುಗಳು ಅಲ್ಪಸಂಖ್ಯಾತರ ವಿರುದ್ಧ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ ಎಂದು ತಮಿಳುನಾಡು ಸರ್ಕಾರ ಹೇಳಿದೆ.

ಧಾರ್ಮಿಕ ಮತಾಂತರದ ವಿರುದ್ಧ ಬಿಜೆಪಿ (BJP) ನಾಯಕ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (PIL) ಪ್ರತಿಕ್ರಿಯೆಯಾಗಿ ತಮಿಳುನಾಡು ಸರ್ಕಾರ ಅಫಿಡವಿಟ್ ಸಲ್ಲಿಸಿದೆ.

ಅರ್ಜಿದಾರರು ಬಿಜೆಪಿಯ ಸದಸ್ಯರಾಗಿದ್ದಾರೆ. ಕೆಲವು ಧರ್ಮಗಳನ್ನು ನಿಂದಿಸಲು ಮತ್ತು ಅವರ ನೀತಿಗಳಿಗೆ ಅನುಗುಣವಾಗಿ ಆದೇಶಗಳನ್ನು ಪಡೆಯಲು ನ್ಯಾಯಾಲಯವನ್ನು ಬಳಸುತ್ತಿದ್ದಾರೆ. ಸೆಕ್ಷನ್ 153 ಎ ಅಡಿಯಲ್ಲಿ (ಧರ್ಮ, ಜನಾಂಗಗಳ ನಡುವೆ ದ್ವೇಷ ಬಿತ್ತುವ ಪ್ರಕರಣದಲ್ಲಿ) ಶಿಕ್ಷಾರ್ಹ ಕ್ರಿಮಿನಲ್ ಮೊಕದ್ದಮೆಯು ಅವರ ವಿರುದ್ಧ ಬಾಕಿಯಿದೆ. ಅರ್ಜಿದಾರರು ಶುದ್ಧ ಹಸ್ತಗಳೊಂದಿಗೆ ಈ ನ್ಯಾಯಾಲಯದ ಮುಂದೆ ಬಂದಿಲ್ಲ. ದೇಶದಲ್ಲಿ ದ್ವೇಷದ ಮೂಲಕ ಸಮಾಜವನ್ನು ವಿಭಜಿಸುವ ಉದ್ದೇಶದಿಂದ ನಿರ್ದಿಷ್ಟ ಸಮುದಾಯದ ಮೇಲೆ ದಾಳಿ ಮಾಡುವುದು, ದೇಶದಲ್ಲಿ ಧಾರ್ಮಿಕ ಅಸಹಿಷ್ಣುತೆಯನ್ನು ಉತ್ತೇಜಿಸುವುದು ಅರ್ಜಿದಾರರ ಉದ್ದೇಶವಾಗಿದೆ ಎಂದು ಸರ್ಕಾರ ಅಫಿಡವಿಟ್‍ನಲ್ಲಿ ತಿಳಿಸಿದೆ. ಇದನ್ನೂ ಓದಿ: ಅದಾನಿ ಸಮೂಹ ವಿರುದ್ಧದ ಹಿಂಡೆನ್‍ಬರ್ಗ್ ವರದಿ ತನಿಖೆ – 6 ತಿಂಗಳ ಕಾಲಾವಕಾಶ ವಿಸ್ತರಣೆಗೆ ಸೆಬಿ ಮನವಿ

TAGGED:bjpChristian missionConstitutionGovernment of Tamil NaduSupreme Courtಕ್ರಿಶ್ಚಿಯನ್ ಮಿಷನರಿತಮಿಳುನಾಡು ಸರ್ಕಾರಬಿಜೆಪಿಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
11 minutes ago
Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
20 minutes ago
police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
55 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
1 hour ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
2 hours ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?