ಜೀವಂತ ಇದ್ದವ್ರನ್ನೇ ತರೋದು ಕಷ್ಟವಿದ್ದು, ನವೀನ್ ಶವ ತರುವುದು ಇನ್ನೂ ಡಿಫಿಕಲ್ಟ್: ಬೆಲ್ಲದ್

Public TV
1 Min Read
ARAVIND BELLAD

ಧಾರವಾಡ: ಜೀವಂತವಾಗಿರುವವರನ್ನೇ ಭಾರತಕ್ಕೆ ವಾಪಸ್ ಕರೆತರುವುದು ಕಷ್ಟವಿದೆ. ಹೀಗಿರುವಾಗ ನವೀನ್ ಮೃತದೇಹ ತರುವುದು ಇನ್ನೂ ಕಷ್ಟವಿದೆ ಎಂದು ಶಾಸಕ ಅರವಿಂದ ಬೆಲ್ಲದ್ ಹೇಳಿದ್ದಾರೆ.

NAVEEN 1

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನದಲ್ಲಿ ಶವ ತರಲು ಹೆಚ್ಚು ಜಾಗಬೇಕು. ಶವ ಇರುವ ಜಾಗದಲ್ಲೇ 8 ಜನ ತರಬಹುದು. ಭಾರತ ಸರ್ಕಾರದ ವಿದೇಶಾಂಗ ಇಲಾಖೆ ಎಂಬಿಬಿಎಸ್ ವಿದ್ಯಾರ್ಥಿ ಶವ ತರಲು ಪ್ರಯತ್ನ ಮಾಡುತ್ತಿದೆ. ಸ್ವತಃ ಪ್ರಧಾನಿ ಮೋದಿ ಅವರೇ ಮುತುವರ್ಜಿ ವಹಿಸಿದ್ದಾರೆ. ಭಾರತೀಯ ವಿದ್ಯಾರ್ಥಿಗಳನ್ನು ಕರೆ ತರುವ ಪ್ರಯತ್ನ ನಡೆದಿದೆ. ಅಲ್ಲಿ ಯುದ್ದ ಭೂಮಿ ಇದೆ. ಮಾಧ್ಯಮದವರೇ ಅದನ್ನ ತೊರಿಸುತ್ತಿದ್ದಾರೆ. ಸಾಧ್ಯವಾದರೆ ಮೃತದೇಹ ತರುವ ಕೆಲಸ ಆಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಯುದ್ಧ ನಿಲ್ಲಿಸಿ ಅಂತ ಪುಟಿನ್‌ಗೆ ನಾವು ಹೇಳಬಹುದೇ: ಸಿಜೆಐ ಪ್ರಶ್ನೆ

Arvind Bellad

ಅಲ್ಲಿ ಇದ್ದವರು ಒತ್ತಡದಲ್ಲಿ ಇದ್ದಾರೆ. ರೊಮೇನಿಯಾಗೆ ಬಂದಿದ್ದಾರೆ ಅಂದರೆ ಸೇಫ್ ಆಗಿದ್ದಾರೆ ಎಂದರ್ಥ. ಅಲ್ಲಿ ನಮ್ಮ ವಿದೇಶಾಂಗ ಇಲಾಖೆ ಅವರಿಗೆ ಊಟ ಹಾಗೂ ವಸತಿ ವ್ಯವಸ್ಥೆ ಮಾಡಿದೆ. ಅವರನ್ನು ತರುವ ಕೆಲಸ ಬೇಗ ಆಗಲಿದೆ. ನಮ್ಮ ವಿದ್ಯಾರ್ಥಿಗಳು ಇಷ್ಟು ದೊಡ್ಡ ಪ್ರಮಾಣದಲ್ಲಿ ಅಲ್ಲಿ ಯಾಕೆ ಎಂಬಿಬಿಎಸ್ ಗೆ ಹೋಗುತ್ತಿದ್ದಾರೆ. ಅದಕ್ಕೆ ಕಾರಣ ನಮ್ಮಲ್ಲಿ ವೈದ್ಯಕೀಯ ಕಲಿಯುವುದು ದೊಡ್ಡ ಖರ್ಚು ಎಂದು ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ನವೀನ್ ಸಾವು – ಬಿಜೆಪಿ ನಾಯಕರ ವಿರುದ್ಧ ಸ್ಟಾಲಿನ್ ಕಿಡಿ

NAVEEN

ನಮ್ಮಲ್ಲ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ ಇದೆ. ಇದೊಂದು ಖಾಸಗಿ ಸಂಸ್ಥೆ. ಇವರು ಎಂಬಿಬಿಎಸ್ ಸಿಟ್ ಅಭಾವ ಸೃಷ್ಟಿ ಮಾಡಿದ್ದಾರೆ. ಹೆಚ್ಚು ಮೆಡಿಕಲ್ ಸಿಟ್ ಕೊಡುವಂತೆ ಇಲ್ಲ. ಅದರಲ್ಲೂ ಭ್ರಷ್ಟಾಚಾರ ಇರುತ್ತೆ. ಈ ಎಂಸಿಐ ಮೇಲೆ ಕ್ರಮ ಕೈಗೊಳ್ಳುವ ಕೆಲಸ ಮಾಡಬೇಕಿದೆ. ಇದನ್ನ ಬೈಪಾಸ್ ಮಾಡಬೇಕು. ಅದಕ್ಕೆ ಇರುವ ಅಧಿಕಾರ ಕಟ್ ಮಾಡಬೇಕು. ಬೇರೆ ರಾಷ್ಟ್ರ ದಂತೆಯೇ ನಮ್ಮಲ್ಲಿ ಕಡಿಮೆ ಖರ್ಚಿನಲ್ಲಿ ಮೆಡಿಕಲ್ ಯಾಕೆ ಮಾಡಬಾರದು ಎಂದು ಶಾಸಕರು ಪ್ರಶ್ನಿಸಿದರು. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ಮಾಡಿದ್ದ ಆರೋಪ ನಿರಾಕರಿಸಿದ ಭಾರತ!

Share This Article
Leave a Comment

Leave a Reply

Your email address will not be published. Required fields are marked *